AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾರ್ಕೀವ್​ಗೆ ಬಂದಿಳಿದ ರಷ್ಯಾ ವಾಯುಗಾಮಿ ಪಡೆ; ಉಕ್ರೇನ್​​ನಲ್ಲಿ ತುರ್ತು ಸೇವೆಗಾಗಿ ಸಹಾಯವಾಣಿ ಪ್ರಾರಂಭ

ಉಕ್ರೇನ್​ ರಾಜ್ಯ ತುರ್ತು ಸೇವೆ ಘಟಕ  ವಾಟ್ಸ್​ಆ್ಯಪ್​ ಹೆಲ್ಪ್​​ಲೈನ್​ ಶುರು ಮಾಡಿದ್ದು, ಆ ನಂಬರ್​​ನ್ನು ಬಹಿರಂಗ ಪಡಿಸಿದೆ. ಅಲ್ಲಿನ ನಾಗರಿಕರು ತಮ್ಮ ಪರಿಸ್ಥಿತಿ, ತಾವಿರುವ ಸ್ಥಳದಲ್ಲಿ ಏನಾಗುತ್ತಿದೆ ಎಂಬುದನ್ನು ಈ ವಾಟ್ಸ್​ಆ್ಯಪ್​ ನಂಬರ್​ಗೆ ಕಳಿಸಬಹುದಾಗಿದೆ.

ಖಾರ್ಕೀವ್​ಗೆ ಬಂದಿಳಿದ ರಷ್ಯಾ ವಾಯುಗಾಮಿ ಪಡೆ; ಉಕ್ರೇನ್​​ನಲ್ಲಿ ತುರ್ತು ಸೇವೆಗಾಗಿ ಸಹಾಯವಾಣಿ ಪ್ರಾರಂಭ
ಖಾರ್ಕೀವ್​ ಚಿತ್ರಣ
TV9 Web
| Edited By: |

Updated on: Mar 02, 2022 | 11:33 AM

Share

ಉಕ್ರೇನ್​ನ ಎರಡನೇ ಅತಿದೊಡ್ಡ ನಗರವಾದ ಖಾರ್ಕೀವ್​ನಲ್ಲಿ (Kharkiv) ಈಗಾಗಲೇ ರಷ್ಯಾ ದಾಳಿ ಶುರುಮಾಡಿಕೊಂಡಿದೆ. ಇದೀಗ ಅಲ್ಲಿಗೆ ರಷ್ಯಾದ ವಾಯುಗಾಮಿ ಪಡೆ ಪ್ರವೇಶ ಮಾಡಿದೆ. ಈ ಸೈನಿಕರು ಖಾರ್ಕೀವ್​​ನ ಆಸ್ಪತ್ರೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಉಕ್ರೇನ್​ ಸೇನೆ ಹೇಳಿದೆ. ಮಂಗಳವಾರ ಖಾರ್ಕೀವ್​​ನಲ್ಲಿ ವಸತಿ ಪ್ರದೇಶಗಳು, ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ನಗರದ ಮಧ್ಯಭಾಗದಲ್ಲಿ ಸಾಕಷ್ಟು ಹಾನಿಯಾಗಿದೆ ಎಂದೂ ಮಾಹಿತಿ ನೀಡಿದೆ. ನಿನ್ನೆ ಇದೇ ಪ್ರದೇಶದಲ್ಲಿ ಭಾರತದ ಕರ್ನಾಟಕ ರಾಜ್ಯದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್​ ರಷ್ಯಾ ಬಾಂಬ್​ ದಾಳಿಯಿಂದ ಮೃತಪಟ್ಟಿದ್ದಾನೆ. ಸದ್ಯ ರಷ್ಯಾ ಸೇನೆಯ ಪಾಲಿಗೆ ಉಕ್ರೇನ್​ನ ಕೀವ್​ ಮತ್ತು ಖಾರ್ಕೀವ್​​ಗಳು ಬಹುದೊಡ್ಡ ಟಾರ್ಗೆಟ್​ ಆಗಿವೆ.

ಖಾರ್ಕೀವ್​​ ನಗರ ಇರುವುದು ರಷ್ಯಾ ಗಡಿಯಲ್ಲಿ. ಇಲ್ಲಿ ಬಹುಪಾಲು ಜನರು ರಷ್ಯನ್​ ಭಾಷೆಯನ್ನೇ ಮಾತನಾಡುತ್ತಾರೆ. ಸುಮಾರು 1.4 ಮಿಲಿಯನ್​ ಜನಸಂಖ್ಯೆಯಿದೆ. ಕಳೆದ ಗುರುವಾರ ರಷ್ಯಾ ಅಧ್ಯಕ್ಷ ಉಕ್ರೇನ್ ಮೇಲೆ ಸೇನಾ ಕಾರ್ಯಾಚರಣೆಯನ್ನು ಘೋಷಿಸಿದಾಗಿನಿಂದಲೂ ಖಾರ್ಕೀವ್​ನ್ನು ರಷ್ಯಾ ಟಾರ್ಗೆಟ್​ ಮಾಡುತ್ತಲೇ ಇದ್ದು, ಈಗೀಗ ಅಲ್ಲಿ ದಾಳಿಯ ತೀವ್ರತೆಯನ್ನು ಹೆಚ್ಚಿಸುತ್ತಿದೆ. ಇನ್ನೊಂದೆಡೆ ಉಕ್ರೇನ್​ ರಾಜಧಾನಿ ಕೀವ್​ ಕೂಡ ರಷ್ಯಾ ದಾಳಿಗೆ ತತ್ತರಿಸಿದೆ. ಕೀವ್​​ನ ಪಶ್ಚಿಮ ಭಾಗದಲ್ಲಿರುವ ಝಿಟೋಮಿರ್​ ಎಂಬಲ್ಲಿ ರಷ್ಯಾ ಸೇನೆ ನಡೆಸಿದ ಕ್ರೂಸ್​ ಕ್ಷಿಪಣಿ ದಾಳಿಗೆ ಮಗು ಸೇರಿ ನಾಲ್ವರು ಬಲಿಯಾಗಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ತುರ್ತು ಸಹಾಯವಾಣಿ ಪ್ರಾರಂಭ: ರಷ್ಯಾ ಆಕ್ರಮಣದಿಂದ ತತ್ತರಿಸಿದ ಉಕ್ರೇನ್​​ಲ್ಲಿ ಇದೀಗ ತುರ್ತು ಸೇವೆಗಾಗಿ ಒಂದು ಸಹಾಯವಾಣಿ ಕಲ್ಪಿಸಲಾಗಿದೆ. ಉಕ್ರೇನ್​ ರಾಜ್ಯ ತುರ್ತು ಸೇವೆ ಘಟಕ  ವಾಟ್ಸ್​ಆ್ಯಪ್​ ಹೆಲ್ಪ್​​ಲೈನ್​ ಶುರು ಮಾಡಿದ್ದು, ಆ ನಂಬರ್​​ನ್ನು ಬಹಿರಂಗ ಪಡಿಸಿದೆ. ಉಕ್ರೇನ್​​ನ ಯಾವುದೇ ಭಾಗದಲ್ಲಿರುವ ನಾಗರಿಕರು ಆ ಸ್ಥಳದ ಪರಿಸ್ಥಿತಿ, ತಾವಿರುವ ಪರಿಸ್ಥಿತಿಗಳ ಬಗ್ಗೆ ವಾಟ್ಸ್​ಆ್ಯಪ್​​ನಲ್ಲಿ ಮಾಹಿತಿ ನೀಡಬಹುದಆಗಿದೆ.

ಇದನ್ನೂ ಓದಿ: Russia Ukraine War: ಉಕ್ರೇನ್ ಪರವಾಗಿ ನಿಲ್ಲುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಣೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ