AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ

ಸುಮಾರು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಸೈಬೀರಿಯಾದ ಸಮೀಪದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ.

13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 16, 2021 | 5:05 PM

Share

ಮಾಸ್ಕೋ: ಸುಮಾರು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಸೈಬೀರಿಯಾದ ಸಮೀಪದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ರಷ್ಯಾದ 13 ಪ್ರಯಾಣಿಕರು ಸಹಿತ ವಿಮಾನ ಕಣ್ಮರೆ ಆಗಿರುವ ಬಗ್ಗೆ ರಾಯ್ಟರ್ಸ್ ಸುದ್ದಿಸಂಸ್ಥೆ ಮಾಹಿತಿ ನೀಡಿದೆ. ಆಂಟೊನೊವ್ An-28 ರಷ್ಯಾದ ಈ ವಿಮಾನದಲ್ಲಿ ಸುಮಾರು 17ರಷ್ಟು ಮಂದಿ ಇದ್ದರು ಎಂದೂ ಹೇಳಲಾಗುತ್ತಿದೆ.

ಇದೀಗ ರಾಡಾರ್ ವ್ಯಾಪ್ತಿಯಿಂದ ಹೊರಹೋಗಿದೆ. ಸೈಬೀರಿಯಾದ ತೋಮ್ಸ್​ಕ್ ಎಂಬ ಪ್ರದೇಶದ ಮೇಲೆ ಹಾರಾಟ ನಡೆಸುತ್ತಿದ್ದಾಗ ಹೀಗಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹಾಗೂ ವರದಿಗಳಿಂದ ಹೆಚ್ಚಿನ ಮಾಹಿತಿ ತಿಳಿದುಬಂದಿದೆ. ವಿಮಾನದಲ್ಲಿ 13ರಿಂದ 17 ಜನರು ಇದ್ದರು ಎಂದು ಹೇಳಲಾಗುತ್ತಿದೆ.

ಆಂಟೊನೊವ್ An-26 ಎಂಬ ವಿಮಾನವು ಕಳೆದ ಎರಡು ವಾರಗಳ ಹಿಂದಷ್ಟೇ ಪತನವಾಗಿತ್ತು. ರಷ್ಯಾದ ಕಾಮ್ಚಟ್ಕಾ ಪೆನಿನ್ಸುಲಾ ಎಂಬಲ್ಲಿ ಈ ಅವಘಡ ಸಂಭವಿಸಿತ್ತು. ಈ ಅಪಘಾತದಿಂದಾಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 28 ಪ್ರಯಾಣಿಕರು ಕೂಡ ಮೃತಪಟ್ಟಿದ್ದರು.

ಆಂಟೊನೊವ್ An-28, ಅಂದರೆ ಇಂದು ಅವಘಡಕ್ಕೆ ಒಳಗಾಗಿರುವ ರೀತಿಯದೇ ವಿಮಾನವು 2012ರ ಅವಧಿಯಲ್ಲಿ ಕೂಡ ಇದೇ ಪ್ರದೇಶದಲ್ಲಿ ಕಣ್ಮರೆಯಾಗಿತ್ತು. ಬಳಿಕ, ಕಾಮ್ಚಟ್ಕಾ ಅರಣ್ಯ ಪ್ರದೇಶದಲ್ಲಿ ಪತನವಾಗಿದ್ದು ಪತ್ತೆಯಾಗಿತ್ತು. ಆ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು. ಬಳಿಕ ನಡೆದ ತನಿಖೆಯಲ್ಲಿ ವಿಮಾನದ ಇಬ್ಬರೂ ಪೈಲೆಟ್​ಗಳು ಮದ್ಯಪಾನ ಮಾಡಿ ವಿಮಾನ ಚಲಾಯಿಸಿದ್ದರು ಎಂದು ತಿಳಿದುಬಂದಿತ್ತು.

ರಷ್ಯಾದ ವಿಮಾನಯಾನ ಸುರಕ್ಷತಾ ವಿಧಾನಗಳು ಇತ್ತೀಚೆಗೆ ಅಭಿವೃದ್ಧಿ ಹೊಂದಿದೆ. ಆದರೆ, ಈ ರೀತಿಯ ಅವಘಡಗಳು ಕೆಲವು ಬಾರಿ ಘಟಿಸುತ್ತಿದೆ.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Adani Group: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸುಪರ್ದಿಗೆ ಪಡೆದ ಅದಾನಿ ಸಮೂಹ

Published On - 4:41 pm, Fri, 16 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ