AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ

ಸುಮಾರು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಸೈಬೀರಿಯಾದ ಸಮೀಪದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ.

13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Jul 16, 2021 | 5:05 PM

Share

ಮಾಸ್ಕೋ: ಸುಮಾರು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಸೈಬೀರಿಯಾದ ಸಮೀಪದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ರಷ್ಯಾದ 13 ಪ್ರಯಾಣಿಕರು ಸಹಿತ ವಿಮಾನ ಕಣ್ಮರೆ ಆಗಿರುವ ಬಗ್ಗೆ ರಾಯ್ಟರ್ಸ್ ಸುದ್ದಿಸಂಸ್ಥೆ ಮಾಹಿತಿ ನೀಡಿದೆ. ಆಂಟೊನೊವ್ An-28 ರಷ್ಯಾದ ಈ ವಿಮಾನದಲ್ಲಿ ಸುಮಾರು 17ರಷ್ಟು ಮಂದಿ ಇದ್ದರು ಎಂದೂ ಹೇಳಲಾಗುತ್ತಿದೆ.

ಇದೀಗ ರಾಡಾರ್ ವ್ಯಾಪ್ತಿಯಿಂದ ಹೊರಹೋಗಿದೆ. ಸೈಬೀರಿಯಾದ ತೋಮ್ಸ್​ಕ್ ಎಂಬ ಪ್ರದೇಶದ ಮೇಲೆ ಹಾರಾಟ ನಡೆಸುತ್ತಿದ್ದಾಗ ಹೀಗಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹಾಗೂ ವರದಿಗಳಿಂದ ಹೆಚ್ಚಿನ ಮಾಹಿತಿ ತಿಳಿದುಬಂದಿದೆ. ವಿಮಾನದಲ್ಲಿ 13ರಿಂದ 17 ಜನರು ಇದ್ದರು ಎಂದು ಹೇಳಲಾಗುತ್ತಿದೆ.

ಆಂಟೊನೊವ್ An-26 ಎಂಬ ವಿಮಾನವು ಕಳೆದ ಎರಡು ವಾರಗಳ ಹಿಂದಷ್ಟೇ ಪತನವಾಗಿತ್ತು. ರಷ್ಯಾದ ಕಾಮ್ಚಟ್ಕಾ ಪೆನಿನ್ಸುಲಾ ಎಂಬಲ್ಲಿ ಈ ಅವಘಡ ಸಂಭವಿಸಿತ್ತು. ಈ ಅಪಘಾತದಿಂದಾಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 28 ಪ್ರಯಾಣಿಕರು ಕೂಡ ಮೃತಪಟ್ಟಿದ್ದರು.

ಆಂಟೊನೊವ್ An-28, ಅಂದರೆ ಇಂದು ಅವಘಡಕ್ಕೆ ಒಳಗಾಗಿರುವ ರೀತಿಯದೇ ವಿಮಾನವು 2012ರ ಅವಧಿಯಲ್ಲಿ ಕೂಡ ಇದೇ ಪ್ರದೇಶದಲ್ಲಿ ಕಣ್ಮರೆಯಾಗಿತ್ತು. ಬಳಿಕ, ಕಾಮ್ಚಟ್ಕಾ ಅರಣ್ಯ ಪ್ರದೇಶದಲ್ಲಿ ಪತನವಾಗಿದ್ದು ಪತ್ತೆಯಾಗಿತ್ತು. ಆ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು. ಬಳಿಕ ನಡೆದ ತನಿಖೆಯಲ್ಲಿ ವಿಮಾನದ ಇಬ್ಬರೂ ಪೈಲೆಟ್​ಗಳು ಮದ್ಯಪಾನ ಮಾಡಿ ವಿಮಾನ ಚಲಾಯಿಸಿದ್ದರು ಎಂದು ತಿಳಿದುಬಂದಿತ್ತು.

ರಷ್ಯಾದ ವಿಮಾನಯಾನ ಸುರಕ್ಷತಾ ವಿಧಾನಗಳು ಇತ್ತೀಚೆಗೆ ಅಭಿವೃದ್ಧಿ ಹೊಂದಿದೆ. ಆದರೆ, ಈ ರೀತಿಯ ಅವಘಡಗಳು ಕೆಲವು ಬಾರಿ ಘಟಿಸುತ್ತಿದೆ.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Adani Group: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸುಪರ್ದಿಗೆ ಪಡೆದ ಅದಾನಿ ಸಮೂಹ

Published On - 4:41 pm, Fri, 16 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು