AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ

ಸುಮಾರು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಸೈಬೀರಿಯಾದ ಸಮೀಪದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ.

13 ಪ್ರಯಾಣಿಕರಿದ್ದ ರಷ್ಯಾದ ವಿಮಾನ ಸೈಬೀರಿಯಾ ಸಮೀಪ ನಾಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 16, 2021 | 5:05 PM

Share

ಮಾಸ್ಕೋ: ಸುಮಾರು 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ವಿಮಾನವೊಂದು ಸೈಬೀರಿಯಾದ ಸಮೀಪದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ರಷ್ಯಾದ 13 ಪ್ರಯಾಣಿಕರು ಸಹಿತ ವಿಮಾನ ಕಣ್ಮರೆ ಆಗಿರುವ ಬಗ್ಗೆ ರಾಯ್ಟರ್ಸ್ ಸುದ್ದಿಸಂಸ್ಥೆ ಮಾಹಿತಿ ನೀಡಿದೆ. ಆಂಟೊನೊವ್ An-28 ರಷ್ಯಾದ ಈ ವಿಮಾನದಲ್ಲಿ ಸುಮಾರು 17ರಷ್ಟು ಮಂದಿ ಇದ್ದರು ಎಂದೂ ಹೇಳಲಾಗುತ್ತಿದೆ.

ಇದೀಗ ರಾಡಾರ್ ವ್ಯಾಪ್ತಿಯಿಂದ ಹೊರಹೋಗಿದೆ. ಸೈಬೀರಿಯಾದ ತೋಮ್ಸ್​ಕ್ ಎಂಬ ಪ್ರದೇಶದ ಮೇಲೆ ಹಾರಾಟ ನಡೆಸುತ್ತಿದ್ದಾಗ ಹೀಗಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹಾಗೂ ವರದಿಗಳಿಂದ ಹೆಚ್ಚಿನ ಮಾಹಿತಿ ತಿಳಿದುಬಂದಿದೆ. ವಿಮಾನದಲ್ಲಿ 13ರಿಂದ 17 ಜನರು ಇದ್ದರು ಎಂದು ಹೇಳಲಾಗುತ್ತಿದೆ.

ಆಂಟೊನೊವ್ An-26 ಎಂಬ ವಿಮಾನವು ಕಳೆದ ಎರಡು ವಾರಗಳ ಹಿಂದಷ್ಟೇ ಪತನವಾಗಿತ್ತು. ರಷ್ಯಾದ ಕಾಮ್ಚಟ್ಕಾ ಪೆನಿನ್ಸುಲಾ ಎಂಬಲ್ಲಿ ಈ ಅವಘಡ ಸಂಭವಿಸಿತ್ತು. ಈ ಅಪಘಾತದಿಂದಾಗಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 28 ಪ್ರಯಾಣಿಕರು ಕೂಡ ಮೃತಪಟ್ಟಿದ್ದರು.

ಆಂಟೊನೊವ್ An-28, ಅಂದರೆ ಇಂದು ಅವಘಡಕ್ಕೆ ಒಳಗಾಗಿರುವ ರೀತಿಯದೇ ವಿಮಾನವು 2012ರ ಅವಧಿಯಲ್ಲಿ ಕೂಡ ಇದೇ ಪ್ರದೇಶದಲ್ಲಿ ಕಣ್ಮರೆಯಾಗಿತ್ತು. ಬಳಿಕ, ಕಾಮ್ಚಟ್ಕಾ ಅರಣ್ಯ ಪ್ರದೇಶದಲ್ಲಿ ಪತನವಾಗಿದ್ದು ಪತ್ತೆಯಾಗಿತ್ತು. ಆ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು. ಬಳಿಕ ನಡೆದ ತನಿಖೆಯಲ್ಲಿ ವಿಮಾನದ ಇಬ್ಬರೂ ಪೈಲೆಟ್​ಗಳು ಮದ್ಯಪಾನ ಮಾಡಿ ವಿಮಾನ ಚಲಾಯಿಸಿದ್ದರು ಎಂದು ತಿಳಿದುಬಂದಿತ್ತು.

ರಷ್ಯಾದ ವಿಮಾನಯಾನ ಸುರಕ್ಷತಾ ವಿಧಾನಗಳು ಇತ್ತೀಚೆಗೆ ಅಭಿವೃದ್ಧಿ ಹೊಂದಿದೆ. ಆದರೆ, ಈ ರೀತಿಯ ಅವಘಡಗಳು ಕೆಲವು ಬಾರಿ ಘಟಿಸುತ್ತಿದೆ.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Adani Group: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಸುಪರ್ದಿಗೆ ಪಡೆದ ಅದಾನಿ ಸಮೂಹ

Published On - 4:41 pm, Fri, 16 July 21

Follow Us
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು