AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು

ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಹೇಳಿದ್ದಾರೆ.

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು
ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​ ಮಾಡಿದ ರಷ್ಯಾ
TV9 Web
| Edited By: |

Updated on: Mar 10, 2022 | 8:28 AM

Share

ಕೀವ್​:  ಉಕ್ರೇನ್​​ನಲ್ಲಿ ರಷ್ಯಾ (Russia Attack On Ukraine) ನಡೆಸುತ್ತಿರುವ ಆಕ್ರಮಣ ಕೇವಲ ಸೈನ್ಯವನ್ನು ಗುರಿಯಾಗಿಸಿಕೊಂಡು ಅಲ್ಲ. ಅಲ್ಲಿನ ಅದೆಷ್ಟೋ ವಸತಿ ಕಟ್ಟಡಗಳು, ಆಸ್ಪತ್ರೆ, ಶಾಲೆಗಳೆಲ್ಲ ರಷ್ಯಾ ಬಾಂಬ್​, ಕ್ಷಿಪಣಿ ದಾಳಿಗೆ ಧ್ವಂಸಗೊಂಡಿವೆ.  ಬುಧವಾರ ರಷ್ಯಾ ಸೇನೆ ಮರಿಯುಪೋಲ್​​ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ಏರ್​ಸ್ಟ್ರೈಕ್​ ನಡೆಸಿದ್ದು, ಇದರಲ್ಲಿ ಸುಮಾರು 17 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯಾದ ಪಾವ್ಲೊ ಕೈರಿಲೆಂಕೊ ಹೇಳಿದ್ದಾರೆ. ಈ ವಿಡಿಯೋವನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.  ಮರಿಯುಪೋಲ್​​ನ ಹೆರಿಗೆ ಆಸ್ಪತ್ರೆಯಲ್ಲಿ ರಷ್ಯಾ ನಡೆಸಿದ ಏರ್​ಸ್ಟ್ರೈಕ್​ ಇದು. ಇಲ್ಲಿ ಮಕ್ಕಳು ಸೇರಿ ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.  ಇದು ದೌರ್ಜನ್ಯ. ಈ ಜಗತ್ತು ಇನ್ನೆಷ್ಟು ದಿನ ಇಂಥ ಭಯೋತ್ಪಾದನೆಯನ್ನು ನಿರ್ಲಕ್ಷಿಸುತ್ತದೆ? ಈ ಆಕಾಶವೇ ಮುಚ್ಚಿ, ಇಂಥ ದಾಳಿಗಳು ನಿಲ್ಲಬಾರದೆ? ನಿಮಗೆ ಶಕ್ತಿ ಇರಬಹುದು ಆದರೆ ಮಾನವೀಯತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಿ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.

ಅಧ್ಯಕ್ಷರು ಶೇರ್​ ಮಾಡಿಕೊಂಡಿರುವ ವಿಡಿಯೋದಲ್ಲಿ, ಆ ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಹೇಳಿದ್ದಾರೆ. ಈ ದುರ್ಘಟನೆಯಲ್ಲಿ  17 ಮಂದಿ ಗಾಯಗೊಂಡಿದ್ದು, ಯಾವುದೆ ಸಾವಿನ ವರದಿಯಾಗಿಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಮಕ್ಕಳಿಗೆ ಯಾರಿಗೂ ಗಾಯವಾಗಿಲ್ಲ.  ಆದರೆ ಈ ಆಸ್ಪತ್ರೆ ಇನ್ನು ರಿಪೇರಿ ಮಾಡಲಾಗದಷ್ಟು ಧ್ವಂಸಗೊಂಡಿದೆ.   ಮರಿಯುಪೋಲ್​ ಸಿಟಿಯನ್ನು ರಷ್ಯಾ ಸೇನೆ ಮುತ್ತಿಗೆ ಹಾಕಿದೆ. ಇದು ಆಗ್ನೇಯ ಉಕ್ರೇನ್​ನಲ್ಲಿರುವ ಅಜೋವ್ ಸಮುದ್ರದ ದಡದಲ್ಲಿರುವ ಒಂದು ಬಂದರು ನಗರ. ಇಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದರೂ ಕೂಡ, ಆಗಾಗ ಅದನ್ನು ಉಲ್ಲಂಘನೆ ಮಾಡಿ ಬಾಂಬ್ ದಾಳಿ ನಡೆಸುತ್ತಲೇ ಇದೆ.

ಇದನ್ನೂ ಓದಿಗುಪ್ತವಾಗಿ ಮದುವೆಯಾಗಿದ್ದ ಖ್ಯಾತ ನಟಿ; ವಿಷಯವನ್ನು ವರ್ಷಗಳ ಕಾಲ ಎಲ್ಲರಿಂದ ಮುಚ್ಚಿಟ್ಟಿದ್ದೇಕೆ?

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ