AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು

ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಹೇಳಿದ್ದಾರೆ.

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು
ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​ ಮಾಡಿದ ರಷ್ಯಾ
TV9 Web
| Edited By: |

Updated on: Mar 10, 2022 | 8:28 AM

Share

ಕೀವ್​:  ಉಕ್ರೇನ್​​ನಲ್ಲಿ ರಷ್ಯಾ (Russia Attack On Ukraine) ನಡೆಸುತ್ತಿರುವ ಆಕ್ರಮಣ ಕೇವಲ ಸೈನ್ಯವನ್ನು ಗುರಿಯಾಗಿಸಿಕೊಂಡು ಅಲ್ಲ. ಅಲ್ಲಿನ ಅದೆಷ್ಟೋ ವಸತಿ ಕಟ್ಟಡಗಳು, ಆಸ್ಪತ್ರೆ, ಶಾಲೆಗಳೆಲ್ಲ ರಷ್ಯಾ ಬಾಂಬ್​, ಕ್ಷಿಪಣಿ ದಾಳಿಗೆ ಧ್ವಂಸಗೊಂಡಿವೆ.  ಬುಧವಾರ ರಷ್ಯಾ ಸೇನೆ ಮರಿಯುಪೋಲ್​​ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ಏರ್​ಸ್ಟ್ರೈಕ್​ ನಡೆಸಿದ್ದು, ಇದರಲ್ಲಿ ಸುಮಾರು 17 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯಾದ ಪಾವ್ಲೊ ಕೈರಿಲೆಂಕೊ ಹೇಳಿದ್ದಾರೆ. ಈ ವಿಡಿಯೋವನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.  ಮರಿಯುಪೋಲ್​​ನ ಹೆರಿಗೆ ಆಸ್ಪತ್ರೆಯಲ್ಲಿ ರಷ್ಯಾ ನಡೆಸಿದ ಏರ್​ಸ್ಟ್ರೈಕ್​ ಇದು. ಇಲ್ಲಿ ಮಕ್ಕಳು ಸೇರಿ ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.  ಇದು ದೌರ್ಜನ್ಯ. ಈ ಜಗತ್ತು ಇನ್ನೆಷ್ಟು ದಿನ ಇಂಥ ಭಯೋತ್ಪಾದನೆಯನ್ನು ನಿರ್ಲಕ್ಷಿಸುತ್ತದೆ? ಈ ಆಕಾಶವೇ ಮುಚ್ಚಿ, ಇಂಥ ದಾಳಿಗಳು ನಿಲ್ಲಬಾರದೆ? ನಿಮಗೆ ಶಕ್ತಿ ಇರಬಹುದು ಆದರೆ ಮಾನವೀಯತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಿ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.

ಅಧ್ಯಕ್ಷರು ಶೇರ್​ ಮಾಡಿಕೊಂಡಿರುವ ವಿಡಿಯೋದಲ್ಲಿ, ಆ ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಹೇಳಿದ್ದಾರೆ. ಈ ದುರ್ಘಟನೆಯಲ್ಲಿ  17 ಮಂದಿ ಗಾಯಗೊಂಡಿದ್ದು, ಯಾವುದೆ ಸಾವಿನ ವರದಿಯಾಗಿಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಮಕ್ಕಳಿಗೆ ಯಾರಿಗೂ ಗಾಯವಾಗಿಲ್ಲ.  ಆದರೆ ಈ ಆಸ್ಪತ್ರೆ ಇನ್ನು ರಿಪೇರಿ ಮಾಡಲಾಗದಷ್ಟು ಧ್ವಂಸಗೊಂಡಿದೆ.   ಮರಿಯುಪೋಲ್​ ಸಿಟಿಯನ್ನು ರಷ್ಯಾ ಸೇನೆ ಮುತ್ತಿಗೆ ಹಾಕಿದೆ. ಇದು ಆಗ್ನೇಯ ಉಕ್ರೇನ್​ನಲ್ಲಿರುವ ಅಜೋವ್ ಸಮುದ್ರದ ದಡದಲ್ಲಿರುವ ಒಂದು ಬಂದರು ನಗರ. ಇಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದರೂ ಕೂಡ, ಆಗಾಗ ಅದನ್ನು ಉಲ್ಲಂಘನೆ ಮಾಡಿ ಬಾಂಬ್ ದಾಳಿ ನಡೆಸುತ್ತಲೇ ಇದೆ.

ಇದನ್ನೂ ಓದಿಗುಪ್ತವಾಗಿ ಮದುವೆಯಾಗಿದ್ದ ಖ್ಯಾತ ನಟಿ; ವಿಷಯವನ್ನು ವರ್ಷಗಳ ಕಾಲ ಎಲ್ಲರಿಂದ ಮುಚ್ಚಿಟ್ಟಿದ್ದೇಕೆ?

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ