AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು

ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಹೇಳಿದ್ದಾರೆ.

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು
ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​ ಮಾಡಿದ ರಷ್ಯಾ
TV9 Web
| Updated By: Lakshmi Hegde|

Updated on: Mar 10, 2022 | 8:28 AM

Share

ಕೀವ್​:  ಉಕ್ರೇನ್​​ನಲ್ಲಿ ರಷ್ಯಾ (Russia Attack On Ukraine) ನಡೆಸುತ್ತಿರುವ ಆಕ್ರಮಣ ಕೇವಲ ಸೈನ್ಯವನ್ನು ಗುರಿಯಾಗಿಸಿಕೊಂಡು ಅಲ್ಲ. ಅಲ್ಲಿನ ಅದೆಷ್ಟೋ ವಸತಿ ಕಟ್ಟಡಗಳು, ಆಸ್ಪತ್ರೆ, ಶಾಲೆಗಳೆಲ್ಲ ರಷ್ಯಾ ಬಾಂಬ್​, ಕ್ಷಿಪಣಿ ದಾಳಿಗೆ ಧ್ವಂಸಗೊಂಡಿವೆ.  ಬುಧವಾರ ರಷ್ಯಾ ಸೇನೆ ಮರಿಯುಪೋಲ್​​ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ಏರ್​ಸ್ಟ್ರೈಕ್​ ನಡೆಸಿದ್ದು, ಇದರಲ್ಲಿ ಸುಮಾರು 17 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯಾದ ಪಾವ್ಲೊ ಕೈರಿಲೆಂಕೊ ಹೇಳಿದ್ದಾರೆ. ಈ ವಿಡಿಯೋವನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.  ಮರಿಯುಪೋಲ್​​ನ ಹೆರಿಗೆ ಆಸ್ಪತ್ರೆಯಲ್ಲಿ ರಷ್ಯಾ ನಡೆಸಿದ ಏರ್​ಸ್ಟ್ರೈಕ್​ ಇದು. ಇಲ್ಲಿ ಮಕ್ಕಳು ಸೇರಿ ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.  ಇದು ದೌರ್ಜನ್ಯ. ಈ ಜಗತ್ತು ಇನ್ನೆಷ್ಟು ದಿನ ಇಂಥ ಭಯೋತ್ಪಾದನೆಯನ್ನು ನಿರ್ಲಕ್ಷಿಸುತ್ತದೆ? ಈ ಆಕಾಶವೇ ಮುಚ್ಚಿ, ಇಂಥ ದಾಳಿಗಳು ನಿಲ್ಲಬಾರದೆ? ನಿಮಗೆ ಶಕ್ತಿ ಇರಬಹುದು ಆದರೆ ಮಾನವೀಯತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಿ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.

ಅಧ್ಯಕ್ಷರು ಶೇರ್​ ಮಾಡಿಕೊಂಡಿರುವ ವಿಡಿಯೋದಲ್ಲಿ, ಆ ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿದ್ದನ್ನು ಕಾಣಬಹುದು. ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ಹೇಳಿದ್ದಾರೆ. ಈ ದುರ್ಘಟನೆಯಲ್ಲಿ  17 ಮಂದಿ ಗಾಯಗೊಂಡಿದ್ದು, ಯಾವುದೆ ಸಾವಿನ ವರದಿಯಾಗಿಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಮಕ್ಕಳಿಗೆ ಯಾರಿಗೂ ಗಾಯವಾಗಿಲ್ಲ.  ಆದರೆ ಈ ಆಸ್ಪತ್ರೆ ಇನ್ನು ರಿಪೇರಿ ಮಾಡಲಾಗದಷ್ಟು ಧ್ವಂಸಗೊಂಡಿದೆ.   ಮರಿಯುಪೋಲ್​ ಸಿಟಿಯನ್ನು ರಷ್ಯಾ ಸೇನೆ ಮುತ್ತಿಗೆ ಹಾಕಿದೆ. ಇದು ಆಗ್ನೇಯ ಉಕ್ರೇನ್​ನಲ್ಲಿರುವ ಅಜೋವ್ ಸಮುದ್ರದ ದಡದಲ್ಲಿರುವ ಒಂದು ಬಂದರು ನಗರ. ಇಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದರೂ ಕೂಡ, ಆಗಾಗ ಅದನ್ನು ಉಲ್ಲಂಘನೆ ಮಾಡಿ ಬಾಂಬ್ ದಾಳಿ ನಡೆಸುತ್ತಲೇ ಇದೆ.

ಇದನ್ನೂ ಓದಿಗುಪ್ತವಾಗಿ ಮದುವೆಯಾಗಿದ್ದ ಖ್ಯಾತ ನಟಿ; ವಿಷಯವನ್ನು ವರ್ಷಗಳ ಕಾಲ ಎಲ್ಲರಿಂದ ಮುಚ್ಚಿಟ್ಟಿದ್ದೇಕೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ