AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ದಾಳಿಗೆ ಕೈವ್​​ನಲ್ಲಿ ಮಗು ಸೇರಿ ನಾಲ್ವರು ಬಲಿ

ಸ್ಥಳೀಯ ಅಧಿಕಾರಿಗಳ ಪ್ರಕಾರ, ನಿನ್ನೆ ರಾತ್ರೋರಾತ್ರಿ ಕೈವ್ ಪ್ರದೇಶದ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕೈವ್ ನಗರದ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು 6 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ತಿಳಿಸಿದ್ದಾರೆ. ಉಕ್ರೇನ್ ಬಳಿ 'ಪ್ಯಾಟ್ರಿಯಾಟ್'ನಂತಹ ವಾಯು ರಕ್ಷಣಾ ವ್ಯವಸ್ಥೆಯ ಕ್ಷಿಪಣಿಗಳ ತೀವ್ರ ಅಭಾವ ಉಂಟಾಗಿರುವುದರಿಂದ, ರಷ್ಯಾದ ಸರಣಿ ಡ್ರೋನ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗಳನ್ನು ಪೂರ್ಣವಾಗಿ ತಡೆಹಿಡಿಯಲು ಉಕ್ರೇನ್‌ಗೆ ಸಾಧ್ಯವಾಗುತ್ತಿಲ್ಲ.

ರಷ್ಯಾದ ದಾಳಿಗೆ ಕೈವ್​​ನಲ್ಲಿ ಮಗು ಸೇರಿ ನಾಲ್ವರು ಬಲಿ
Representative Image Image Credit source: PTI
ಸುಷ್ಮಾ ಚಕ್ರೆ
|

Updated on: Aug 08, 2026 | 3:41 PM

Share

ಕೈವ್, ಆಗಸ್ಟ್ 8: ಉಕ್ರೇನ್ ರಾಜಧಾನಿ ಕೈವ್ (Kyiv) ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ರಷ್ಯಾ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ 3 ವರ್ಷದ ಮಗು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಕೈವ್ ಪ್ರದೇಶದ ಬ್ರೋವರಿ ಜಿಲ್ಲೆಯಲ್ಲಿ ರಷ್ಯಾದ ಹಲವಾರು ಡ್ರೋನ್‌ಗಳು ಮನೆಯೊಂದನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆ. ಈ ದಾಳಿಯಲ್ಲಿ ಅಜ್ಜ, ಅಜ್ಜಿ ಮತ್ತು ಅವರ 3 ವರ್ಷದ ಮೊಮ್ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕುಟುಂಬದ ಇನ್ನಿಬ್ಬರು ಸದಸ್ಯರು ಹಾಗೂ ನೆರವಿಗೆ ಬಂದ ನೆರೆಹೊರೆಯವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಕ್ರೇನ್‌ನ ಉತ್ತರ ಭಾಗದ ಚೆರ್ನಿಹಿವ್ ಪ್ರದೇಶದ ಮೇಲೆಯೂ ರಷ್ಯಾ ಡ್ರೋನ್ ದಾಳಿ ನಡೆಸಿದ್ದು, ಪ್ರಿಲುಕಿ ಜಿಲ್ಲೆಯ ಗೋದಾಮೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಇಲ್ಲಿ ಇಲ್ಲಿಯವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತೀಯರ ಸಾವು, ನಾಪತ್ತೆ: ಬಾಧಿತ ಕುಟುಂಬಗಳ ನೆರವಿಗೆ ನೋಡಲ್ ಅಧಿಕಾರಿ ನೇಮಕಕ್ಕೆ ಸುಪ್ರೀಂ ಆದೇಶ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೆರ್ಬಿಯಾಗೆ ಭೇಟಿ ನೀಡಿದ್ದು, ಸೆರ್ಬಿಯಾ ಅಧ್ಯಕ್ಷ ಅಲೆಕ್ಸಾಂಡರ್ ವುಸಿಕ್ ಮತ್ತು ಪ್ರಧಾನ ಮಂತ್ರಿ ಜುರೊ ಮಕುಟ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಇದಕ್ಕೂ ಮೊದಲು ಶುಕ್ರವಾರ ಅಮೆರಿಕದ ಸೆನೆಟ್, ರಷ್ಯಾದ ಮೇಲೆ ಹೊಸ ಹಾಗೂ ಕಠಿಣ ನಿರ್ಬಂಧಗಳನ್ನು ವಿಧಿಸುವ ಮಸೂದೆಯನ್ನು ಅಂಗೀಕರಿಸಿದೆ. ದಿವಂಗತ ಲಿಂಡ್ಸೆ ಗ್ರಹಾಂ ಅವರ ತೀವ್ರ ಪ್ರಯತ್ನದಿಂದ ರೂಪುಗೊಂಡಿದ್ದ ಈ ಮಸೂದೆಯು, ಮಾಸ್ಕೋ ಹಾಗೂ ರಷ್ಯಾದಿಂದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲವನ್ನು ಖರೀದಿಸುವ ದೇಶಗಳಿಗೆ ಶಿಕ್ಷೆ ವಿಧಿಸುವ ಉದ್ದೇಶವನ್ನು ಹೊಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ