AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಸುಮಾರು 90 ಜನರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ರಷ್ಯಾ ಶನಿವಾರ ಮಧ್ಯಾಹ್ನ ಬಾಂಬ್ ಹಾಕಿದೆ. ಕಟ್ಟಡಗಳ ಅವಶೇಷಗಳಡಿಯಲ್ಲಿ 60 ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ.

ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ
ಉಕ್ರೇನ್​ನಲ್ಲಿ ಬಾಂಬ್ ದಾಳಿ
TV9 Web
| Edited By: |

Updated on: May 08, 2022 | 3:53 PM

Share

ಉಕ್ರೇನ್: ಉಕ್ರೇನ್‌ನ ಬಿಲೋಹೊರಿವ್ಕಾ ಗ್ರಾಮದ ಶಾಲೆಯೊಂದರ ಮೇಲೆ ನಡೆದ ರಷ್ಯಾದ (Russia) ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಉಳಿದಿರುವ 60 ಜನರು ನಾಪತ್ತೆಯಾಗಿದ್ದಾರೆ. ಅವರು ಕೂಡ ಸಾವನ್ನಪ್ಪಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೆ, ಅವರ ಮೃತದೇಹಗಳು ಲಭ್ಯವಾಗುವವರೆಗೂ ಈ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಲುಹಾನ್ಸ್ಕ್ ಪ್ರದೇಶದ ಗವರ್ನರ್ ಸೆರ್ಹಿ ಗೈಡೈ ಹೇಳಿದ್ದಾರೆ.

ಸುಮಾರು 90 ಜನರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ರಷ್ಯಾ ಶನಿವಾರ ಮಧ್ಯಾಹ್ನ ಬಾಂಬ್ ಹಾಕಿದೆ ಎಂದು ಗೈದೈ ಹೇಳಿದ್ದಾರೆ. ಈ ವೇಳೆ ಮೂವತ್ತು ಜನರನ್ನು ರಕ್ಷಿಸಲಾಗಿದೆ. ಅವರಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಗೈದೈ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ತಿಳಿಸಿದ್ದಾರೆ. ಕಟ್ಟಡಗಳ ಅವಶೇಷಗಳಡಿಯಲ್ಲಿ 60 ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಕೂಡ ಅವರು ತಿಳಿಸಿದ್ದಾರೆ.

ವ್ಲಾಡಿಮಿರ್ ಪುಟಿನ್ ಘೋಷಿಸಿರುವ ರಷ್ಯಾ ಮತ್ತು ವೊಲೊಡಿಮಿರ್ ಝೆಲೆನ್ಸ್ಕಿ ಅವರ ಉಕ್ರೇನ್ ನಡುವಿನ ಹೋರಾಟವು ಸತತ 74ನೇ ದಿನವೂ ಮುಂದುವರಿದಿದ್ದು, ಉಭಯ ದೇಶಗಳ ನಡುವೆ ಶಾಂತಿಯ ಯಾವುದೇ ಲಕ್ಷಣಗಳಿಲ್ಲ. ಮುತ್ತಿಗೆ ಹಾಕಿದ ಮರಿಪೋಲ್ ಬಂದರು ನಗರದಲ್ಲಿರುವ ಅಜೋವ್‌ಸ್ಟಾಲ್ ಉಕ್ಕಿನ ಸ್ಥಾವರದಿಂದ ಎಲ್ಲಾ ಮಹಿಳೆಯರು ಮತ್ತು ಮಕ್ಕಳನ್ನು ಸ್ಥಳಾಂತರಿಸಲಾಗಿದೆ ಎಂದು ಕೈವ್ ಹೇಳಿದ್ದಾರೆ.

ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್, ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಇತರ ಜಿ -7 ನಾಯಕರು ಭಾನುವಾರ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ವೀಡಿಯೊ ಕರೆ ಮೂಲಕ ಭೇಟಿಯಾಗಲಿದ್ದಾರೆ. ವರ್ಚುವಲ್ ಸಭೆಗೆ ಮುಂಚಿತವಾಗಿ, ಯುಕೆ ಯುದ್ಧ-ಹಾನಿಗೊಳಗಾದ ರಾಷ್ಟ್ರಕ್ಕೆ 1.3 ಬಿಲಿಯನ್ ರೂ. ಮೌಲ್ಯದ ಮಿಲಿಟರಿ ಸಹಾಯವನ್ನು ಘೋಷಿಸಿತು. (Source)

“ಫಿನ್‌ಲ್ಯಾಂಡ್ ಮತ್ತು ಸ್ವೀಡನ್‌ಗೆ ಸಂಬಂಧಿಸಿದಂತೆ, ಎರಡು ದೇಶಗಳಿಗೆ ಸೇರಲು ಅವಕಾಶವಿದೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಪುಟಿನ್ ಬೇರೆಡೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಅವರು ಅದರ ಬಗ್ಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ರಾಸ್ಮುಸ್ಸೆನ್ ತಿಳಿಸಿದ್ದಾರೆ.

“ದಾಳಿ ನಡೆದ ಸುಮಾರು ನಾಲ್ಕು ಗಂಟೆಗಳ ನಂತರ ಬೆಂಕಿಯನ್ನು ನಂದಿಸಲಾಯಿತು. ನಂತರ ಅವಶೇಷಗಳನ್ನು ತೆರವುಗೊಳಿಸಲಾಯಿತು. ದುರದೃಷ್ಟವಶಾತ್ ಇಬ್ಬರ ಶವಗಳು ಪತ್ತೆಯಾಗಿವೆ. ಇನ್ನೂ 60 ಜನರ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ” ಎಂದು ಹೈದೈ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಬರೆದಿದ್ದಾರೆ. ಅವಶೇಷಗಳಡಿಯಿಂದ ಮೂವತ್ತು ಜನರನ್ನು ಸ್ಥಳಾಂತರಿಸಲಾಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳ ಅವಶೇಷಗಳಡಿಯಲ್ಲಿ ಅರವತ್ತು ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ. ರಷ್ಯಾದ ಪಡೆಗಳು ನಾಗರಿಕರನ್ನು ಗುರಿಯಾಗಿಸಿಕೊಂಡಿವೆ ಎಂದು ಉಕ್ರೇನ್  ಆರೋಪಿಸಿದೆ ಆದರೆ, ಈ ಆರೋಪಗಳನ್ನು ರಷ್ಯಾ ತಿರಸ್ಕರಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ