AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕೋ ಬಾಂಬ್‌ ಸ್ಫೋಟದಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು

ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ (ಎನ್‌ಬಿಸಿ) ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು ವಸತಿ ಬ್ಲಾಕ್‌ನಿಂದ ತೆರಳುತ್ತಿದ್ದಾಗ ಸ್ಕೂಟರ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡಿತು. ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ. ಪಾದಚಾರಿ ಮಾರ್ಗದಲ್ಲಿ ಬಿದ್ದಿರುವ ಇಬ್ಬರು ಪುರುಷರ ಮೃತದೇಹಗಳು ಛಿದ್ರವಾಗಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮಾಸ್ಕೋ ಬಾಂಬ್‌ ಸ್ಫೋಟದಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು
ಜನರಲ್ ಇಗೊರ್ ಕಿರಿಲ್ಲೋವ್
ಸುಷ್ಮಾ ಚಕ್ರೆ
|

Updated on: Dec 17, 2024 | 1:16 PM

Share

ಮಾಸ್ಕೋ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಚ್ಚಿಟ್ಟಿದ್ದ ಬಾಂಬ್‌ ಸ್ಫೋಟದಿಂದ ಮಾಸ್ಕೋದಲ್ಲಿ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ರಷ್ಯಾದ ಹಿರಿಯ ಜನರಲ್ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ. ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಕ್ರೆಮ್ಲಿನ್‌ನಿಂದ ಆಗ್ನೇಯಕ್ಕೆ 7 ಕಿ.ಮೀ ದೂರದಲ್ಲಿರುವ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್​ಮೆಂಟ್ ಕಟ್ಟಡದ ಬಳಿ ಬಾಂಬ್ ದಾಳಿಯಿಂದ ಮೃತರಾಗಿದ್ದಾರೆ.

ಜನರಲ್ ಕಿರಿಲ್ಲೋವ್ ಅವರ ಸಹಾಯಕ ಸಹ ಈ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಸಮಯದಲ್ಲಿ ನಿಷೇಧಿತ ರಾಸಾಯನಿಕ ಅಸ್ತ್ರಗಳನ್ನು ಬಳಸಿದ್ದಕ್ಕಾಗಿ ಕಿರಿಲ್ಲೋವ್‌ಗೆ ಉಕ್ರೇನಿಯನ್ ನ್ಯಾಯಾಲಯ ಸೋಮವಾರ ಗೈರುಹಾಜರಿ ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮಹಾಯುದ್ಧದ ಭೀತಿ; ಮೊಟ್ಟ ಮೊದಲ ಬಾರಿಗೆ ರಷ್ಯಾದಿಂದ ಉಕ್ರೇನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ರಿಮೋಟ್‌ನಿಂದ ಸ್ಫೋಟಿಸಲಾದ ಸ್ಫೋಟಕ ಸಾಧನದ ಶಕ್ತಿಯು ಸುಮಾರು 300 ಗ್ರಾಂ ಟಿಎನ್‌ಟಿಯಷ್ಟಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಿಎಎಸ್​ಎಸ್​ ವರದಿ ಮಾಡಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಉಕ್ರೇನಿಯನ್ ಕೋರ್ಟ್​ ಜನರಲ್‌ ಕಿರಿಲ್ಲೋವ್​ ಅವರಿಗೆ ಗೈರುಹಾಜರಾಗಿದ್ದಕ್ಕೆ ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಕಿರಿಲ್ಲೋವ್ ಅವರ ಸಾವು ಸಂಭವಿಸಿದೆ. ಉಕ್ರೇನ್‌ನ ಭದ್ರತಾ ಸೇವೆಯ ಪ್ರಕಾರ, ಯುದ್ಧದ ಆರಂಭದಿಂದಲೂ ಕಿರಿಲ್ವ್ಲೋವ್ ಅವರ ಆದೇಶದ ಮೇರೆಗೆ ರಷ್ಯಾದ ರಾಸಾಯನಿಕ ಯುದ್ಧಸಾಮಗ್ರಿಗಳ ಬಳಕೆಯ 4,800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!