AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಷ್ಟು ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಖರೀದಿ ಕುರಿತು ಭಾರತದೊಂದಿಗೆ ಮಾತುಕತೆ; ರಷ್ಯಾದ ರಾಯಭಾರಿ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ರಷ್ಯಾ ತೀವ್ರವಾಗಿ ಖಂಡಿಸಿದೆ. ರಷ್ಯಾದ ರಾಯಭಾರಿ ಈ ಘಟನೆಯನ್ನು ಘೋರ ಅಪರಾಧ ಎಂದು ಕರೆದಿದ್ದಾರೆ ಮತ್ತು ರಷ್ಯಾ ಭಾರತದ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. ಈ ದಾಳಿಯ ನಂತರ ರಷ್ಯಾ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿಗೆ ಸಂದೇಶ ಕಳುಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ರಷ್ಯಾದ ರಾಯಭಾರಿ ಬ್ರಹ್ಮೋಸ್ ಕ್ಷಿಪಣಿಯ ಯಶಸ್ಸು ಮತ್ತು ಆಪರೇಷನ್ ಸಿಂಧೂರ್‌ನಲ್ಲಿ ಎಸ್-400 ವ್ಯವಸ್ಥೆಯ ಬಳಕೆಯ ಬಗ್ಗೆಯೂ ಮಾತನಾಡಿದ್ದಾರೆ. ಭಾರತ ಮತ್ತು ಮಾಸ್ಕೋ ನಡುವೆ ಹೆಚ್ಚಿನ S-400 ವಾಯು ರಕ್ಷಣಾ ವ್ಯವಸ್ಥೆಯ ಘಟಕಗಳ ಖರೀದಿ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿದ್ದಾರೆ.

ಮತ್ತಷ್ಟು ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಖರೀದಿ ಕುರಿತು ಭಾರತದೊಂದಿಗೆ ಮಾತುಕತೆ; ರಷ್ಯಾದ ರಾಯಭಾರಿ
Denis Alipov
ಸುಷ್ಮಾ ಚಕ್ರೆ
|

Updated on: May 28, 2025 | 6:12 PM

Share

ನವದೆಹಲಿ, ಮೇ 28: ಆಪರೇಷನ್ ಸಿಂಧೂರ್ (Operation Sindoor), ಭಯೋತ್ಪಾದನೆ ವಿರುದ್ಧ ಭಾರತದ ಕ್ರಮ, ಸೇನೆಯ ಧೈರ್ಯ ಮತ್ತು ಎಸ್-400 ಬಳಕೆಯ ಬಗ್ಗೆ ಮಾತನಾಡಿದ ರಷ್ಯಾ ರಾಯಭಾರಿ ಡೆನಿಸ್ ಅಲಿಪೋವ್, ಭಾರತವು ಗುರಿಗಳನ್ನು ಸ್ಪಷ್ಟವಾಗಿ ತಿಳಿಸಿದೆ ಮತ್ತು ಕ್ರಮ ಕೈಗೊಂಡಿದೆ. ಭಾರತವು ತನ್ನ ಟಾರ್ಗೆಟ್ ಗುರುತಿಸಿದ್ದು, ಭಯೋತ್ಪಾದಕರನ್ನು ಕೊಲ್ಲಲಾಗುವುದು ಎಂದು ಹೇಳಿದೆ. ನಮಗೆ ತಿಳಿದಿರುವಂತೆ, ಕಾರ್ಯಾಚರಣೆಯ ಸಮಯದಲ್ಲಿ ಎಸ್-400 ಬಳಸಲಾಗಿದೆ. ಬ್ರಹ್ಮೋಸ್ ಕ್ಷಿಪಣಿಗಳು ಸಹ ಇದರಲ್ಲಿ ಸೇರಿವೆ. ಈ ಆಯುಧಗಳ ಕಾರ್ಯಕ್ಷಮತೆ ಅತ್ಯುತ್ತಮವಾಗಿತ್ತು ಎಂದಿದ್ದಾರೆ. ಹಾಗೇ, ಭಾರತ ಹೆಚ್ಚುವರಿ ಎಸ್ -400 ವಾಯು ರಕ್ಷಣಾ ವ್ಯವಸ್ಥೆಗಳನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂಬ ವರದಿಗಳ ಬಗ್ಗೆ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಮಾತನಾಡಿದ್ದು, ಇತರ ಹಲವು ವಿಷಯಗಳಂತೆ ಈ ವಿಷಯದ ಬಗ್ಗೆ ನಮ್ಮ ಚರ್ಚೆ ಮುಂದುವರೆದಿದೆ ಎಂದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಭಾರತಕ್ಕೆ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಪ್ರತಿಕ್ರಿಯಿಸಿದ್ದಾರೆ. ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯು ಘೋರ ಅಪರಾಧ ಎಂದು ಅವರು ಹೇಳಿದ್ದಾರೆ. ರಷ್ಯಾ ಸೇರಿದಂತೆ ಹಲವು ದೇಶಗಳು ಭಾರತಕ್ಕೆ ಬೆಂಬಲವಾಗಿ ಪ್ರತಿಕ್ರಿಯಿಸಿದವು.

ಇದನ್ನೂ ಓದಿ
Image
ಮೇ 29-30ರಂದು ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ
Image
ಅಮೆರಿಕದ ಅಧೀನ ಕಾರ್ಯದರ್ಶಿ ಜೆಫ್ರಿಯನ್ನು ಭೇಟಿಯಾದ ವಿಕ್ರಮ್ ಮಿಸ್ರಿ
Image
ವೀಸಾ ರದ್ದು; ಭಾರತೀಯ, ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಎಚ್ಚರಿಕೆ
Image
ಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು; ದ್ವೀಪ ರಾಷ್ಟ್ರಕ್ಕೆ ಭಾರತದ ಸಹಾಯಹಸ್ತ

ಈ ದಾಳಿಯ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ತಿಳಿದ ತಕ್ಷಣ ಅವರು ಪ್ರಧಾನಿ ಮೋದಿ ಅವರಿಗೆ ವಿಶೇಷ ಸಂದೇಶವನ್ನು ಕಳುಹಿಸಿದರು. ಅದರಲ್ಲಿ ಅವರು ತಮ್ಮ ಸಂತಾಪ ಸೂಚಿಸಿದರು. ಅಪರಾಧಿಗಳನ್ನು ಗುರುತಿಸಿ, ಪತ್ತೆಹಚ್ಚಿ ಶಿಕ್ಷೆ ವಿಧಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Narendra Modi: ಮೇ 29ರಿಂದ ಎರಡು ದಿನ ಈ ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ

ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಮಾತನಾಡಿ, “ಭಯೋತ್ಪಾದನೆ ಗಡಿಯಾಚೆಯಿಂದಾಗಲಿ ಅಥವಾ ಇನ್ನಾವುದೇ ರೀತಿಯದ್ದಾಗಲಿ, ಅದರ ಬಗ್ಗೆ ಯಾವುದೇ ದ್ವಿಮುಖ ನೀತಿ ಇರಬಾರದು ಎಂದು ನಾವು ಯಾವಾಗಲೂ ಹೇಳಿದ್ದೇವೆ” ಎಂದು ಹೇಳಿದರು.

ಅಲಿಪೋವ್ ಬ್ರಹ್ಮೋಸ್ ಕ್ಷಿಪಣಿಯ ಬಗ್ಗೆಯೂ ಅವರು ಮಾತನಾಡಿದರು. ಈ ಕ್ಷಿಪಣಿಯನ್ನು ಭಾರತದಲ್ಲಿಯೇ ತಯಾರಿಸಲಾಗಿದೆ ಎಂದು ಅವರು ಹೇಳಿದರು. ಇದು ರಷ್ಯಾದೊಂದಿಗಿನ ಜಂಟಿ ಸಹಕಾರದ ಭಾರತೀಯ ಉತ್ಪನ್ನವಾಗಿದೆ.

ಈ ಶಸ್ತ್ರಾಸ್ತ್ರಗಳನ್ನು ವಿನ್ಯಾಸಗೊಳಿಸುವ ಮತ್ತು ಉತ್ಪಾದಿಸುವ ಜಂಟಿ ಉದ್ಯಮವನ್ನು ನಾವು ಹೊಂದಿದ್ದೇವೆ. ಮುಂದೆ ಕಾರ್ಯಗತಗೊಳಿಸಲಾಗುತ್ತಿರುವ ಹಲವಾರು ಇತರ ಯೋಜನೆಗಳನ್ನು ವಿಸ್ತರಿಸಲು ನಾವು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!