AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IS suicide bomber ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ

ಈತ ಭಾರತದ ಆಡಳಿತದ ನಾಯಕರ ಮೇಲೆ ದಾಳಿಗೆ ಸಂಚು ರೂಪಿಸುತ್ತಿದ್ದ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ.

IS suicide bomber ಭಾರತದಲ್ಲಿ ಉಗ್ರ ದಾಳಿಗೆ ಸಂಚು ರೂಪಿಸಿದ್ದ ಐಎಸ್ ಆತ್ಮಾಹುತಿ ಬಾಂಬರ್​​ನ್ನು ಬಂಧಿಸಿದ ರಷ್ಯಾ
ರಷ್ಯಾ ಅಧಿಕಾರಿಗಳು ಬಂಧಿಸಿರುವ ಆತ್ಮಾಹುತಿ ಬಾಂಬರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 22, 2022 | 2:28 PM

Share

ಮಾಸ್ಕೊ: ಇಸ್ಲಾಮಿಕ್ ಸ್ಟೇಟ್ (Islamic State) ಉಗ್ರ ಸಂಘಟನೆಗೆ ಸೇರಿದ ಆತ್ಮಾಹುತಿ ಬಾಂಬರ್ (suicide bomber) ಅನ್ನು ತಮ್ಮ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ರಷ್ಯಾದ ಕೇಂದ್ರೀಯ ಭದ್ರತಾ ಸಂಸ್ಥೆ (Russian Federal Service FSB) ಸೋಮವಾರ ಹೇಳಿದೆ. ಈತ ಭಾರತದ ಆಡಳಿತದ ನಾಯಕರ ಮೇಲೆ ದಾಳಿಗೆ ಸಂಚು ರೂಪಿಸುತ್ತಿದ್ದ ಎಂದು ರಷ್ಯಾದ ಸುದ್ದಿಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ.  ಎಫ್‌ಎಸ್‌ಬಿ ರಷ್ಯಾದಲ್ಲಿ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಗುರುತಿಸಿ ಬಂಧಿಸಿದೆ. ಈತ ಭಾರತದ ಸ್ಥಳೀಯರು, ಆಡಳಿತ ವಲಯದ ಪ್ರತಿನಿಧಿಗಳನ್ನು ಗುರಿಯಾಗಿರಿಸಿ ಆತ್ಮಾಹುತಿ ದಾಳಿ  ಮೂಲಕ ಭಯೋತ್ಪಾದಕ ಕೃತ್ಯವನ್ನು ಎಸಗಲು ಯೋಜಿಸಿದ್ದ ಎಂದು ಎಫ್‌ಎಸ್‌ಬಿ ಹೇಳಿಕೆಯಲ್ಲಿ ತಿಳಿಸಿದೆ. ಬಂಧಿತ ವ್ಯಕ್ತಿಯನ್ನು ಐಎಸ್ ನಾಯಕರೊಬ್ಬರು ಟರ್ಕಿಯಲ್ಲಿ ಆತ್ಮಹತ್ಯಾ ಬಾಂಬರ್ ಆಗಿ ನೇಮಿಸಿಕೊಂಡಿದ್ದರು ಎಂದು ಹೇಳಿಕೆ ತಿಳಿಸಿದೆ.

ಇಸ್ಲಾಮಿಕ್ ಸ್ಟೇಟ್ ಮತ್ತು ಅದರ ಎಲ್ಲ ಸಂಘಟನೆಗಳನ್ನು ಉಗ್ರ ಸಂಘಟನೆಗಳು ಎಂದು ಗುರುತಿಸಿದ್ದು, ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967ರ ಪಟ್ಟಿಯಲ್ಲಿ ಸೇರಿಸಲಾಗಿದೆಐಎಸ್ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದೆ. ಈ ನಿಟ್ಟಿನಲ್ಲಿ ಸೈಬರ್‌ಸ್ಪೇಸ್ ಅನ್ನು ಸಂಬಂಧಪಟ್ಟ ಏಜೆನ್ಸಿಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವಾಲಯ ಹೇಳಿದೆ.

ಇಸ್ಲಾಮಿಕ್ ಸ್ಟೇಟ್​​ನ ಮುಖಂಡನಿಗೆ ನಿಷ್ಠನಾಗಿರುವುದಾಗಿ ಈತ ಪ್ರತಿಜ್ಞೆ ತೆಗೆದುಕೊಂಡಿದ್ದ ಎಂದು ಎಫ್ಎಸ್​ಬಿ ಪ್ರಕಟಣೆಯಲ್ಲಿ ತಿಳಿಸಿದೆ. ಆನಂತರ ಆತನನ್ನು ರಷ್ಯಾಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅಗತ್ಯ ದಾಖಲೆ ಸಹಿತ ಭಾರತದಲ್ಲಿ ದೊಡ್ಡ ಮಟ್ಟದ ಉಗ್ರ ಕೃತ್ಯ ನಡೆಸುವುದಕ್ಕಾಗಿ ಭಾರತಕ್ಕೆ ಬರುವವನಿದ್ದ ಎಂದು ಎಫ್ಎಸ್​​ಬಿ ಹೇಳಿದೆ. ಈತ ಮಧ್ಯ ಏಷ್ಯಾ ಪ್ರದೇಶದವನಾಗಿದ್ದಾನೆ ಎಂದು ರಷ್ಯಾ ಹೇಳಿದೆ.

ಏಪ್ರಿಲ್​ನಿಂದ ಜೂನ್ ತಿಂಗಳ ನಡುವಣ ಅವಧಿಯಲ್ಲಿ ಈತನನ್ನು ಐಸಿಸ್ ಭರ್ತಿ ಮಾಡಿಕೊಂಡಿತ್ತು. ಈ ಕುರಿತು ರಷ್ಯಾದ ಕೇಂದ್ರೀಯ ಭದ್ರತಾ ಸಂಸ್ಥೆ ಅಧಿಕೃತವಾಗಿ ಭಾರತಕ್ಕೆ ಮಾಹಿತಿ ರವಾನಿಸಿದೆ. ಆತ್ಮಾಹುತಿ ಬಾಂಬರ್​ನನ್ನು ರಷ್ಯಾದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ ಸಂದರ್ಭದಲ್ಲಿ ಆತ ತಪ್ಪೊಪ್ಪಿಕೊಂಡಿದ್ದಾನೆ. ‘ಇಂಡಿಯಾ ಟುಡೇ’ ವಾಹಿನಿ ಆಡಿಯೊ ಪ್ರಸಾರ ಮಾಡಿದೆ. ‘ಭಾರತದ ಮೇಲೆ ಸೇಡು ತೀರಿಸಿಕೊಳ್ಳಬೇಕಿದೆ’ ಎಂದು ವೇಳೆ ಅವನು ಹೇಳಿದ್ದಾನೆ.  ‘ಭಾರತಕ್ಕೆ ಹೋಗಲೆಂದೇ ರಷ್ಯಾಗೆ ವಿಮಾನದಲ್ಲಿ ಬಂದೆ. ಭಾರತದಲ್ಲಿ ಒಬ್ಬರನ್ನು ಭೇಟಿಯಾಗಬೇಕಿದೆ. ಅವರು ನನಗೆ ಬೇಕಿರುವ ಎಲ್ಲವನ್ನೂ ಒದಗಿಸಲಿದ್ದರು. ಅವರ ನೆರವಿನಿಂದ ಪ್ರವಾದಿಗೆ ಇಷ್ಟವಾಗುವ ಕೆಲಸ ಮಾಡಬೇಕಿತ್ತು’ ಎಂದು ಬಂಧಿತ ಉಗ್ರ ಹೇಳಿದ್ದಾಗಿ ರಷ್ಯಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 2:04 pm, Mon, 22 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್