AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಷ್ಯಾ ಬಾಂಬರ್ ವಿಮಾನ ಪತನ: ನಾಲ್ವರು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರು

ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯುಸೇನೆಗೆ ಸೇರಿದ ಬೃಹತ್ 'Tu-22M3' ಕಾರ್ಯತಂತ್ರದ ಬಾಂಬರ್ ವಿಮಾನ ಪತನ(Plane Crash)ಗೊಂಡಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ಹೊರಜಿಗಿದಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತಕ್ಕೀಡಾದ ವಿಮಾನವು ತರಬೇತಿ ಹಾರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್‌ಗಳನ್ನು ಹೊತ್ತೊಯ್ದಿರಲಿಲ್ಲ. ವಿಮಾನವು ಕಾಮೆಂಕಾ ಗ್ರಾಮದ ಬಳಿಯ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಬಿದ್ದಿರುವುದರಿಂದ ನೆಲದ ಮೇಲಿನ ಸಾರ್ವಜನಿಕ ಆಸ್ತಿಗೆ ಯಾವುದೇ ಹಾನಿಯಾಗಿಲ್ಲ.

Video: ರಷ್ಯಾ ಬಾಂಬರ್ ವಿಮಾನ ಪತನ: ನಾಲ್ವರು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರು
ವಿಮಾನ ಪತನ Image Credit source: X Account-@Warmonitor3
ನಯನಾ ರಾಜೀವ್
|

Updated on:Jun 16, 2026 | 8:11 AM

Share

ಮಾಸ್ಕೋ, ಜೂನ್ 16: ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯುಸೇನೆಗೆ ಸೇರಿದ ಬೃಹತ್ ‘Tu-22M3’ ಕಾರ್ಯತಂತ್ರದ ಬಾಂಬರ್ ವಿಮಾನ ಪತನ(Plane Crash)ಗೊಂಡಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ಹೊರಜಿಗಿದಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೀಡಾದ ವಿಮಾನವು ತರಬೇತಿ ಹಾರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್‌ಗಳನ್ನು ಹೊತ್ತೊಯ್ದಿರಲಿಲ್ಲ. ವಿಮಾನವು ಕಾಮೆಂಕಾ ಗ್ರಾಮದ ಬಳಿಯ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಬಿದ್ದಿರುವುದರಿಂದ ನೆಲದ ಮೇಲಿನ ಸಾರ್ವಜನಿಕ ಆಸ್ತಿಗೆ ಯಾವುದೇ ಹಾನಿಯಾಗಿಲ್ಲ.

ವಿಡಿಯೋ

ವಿಮಾನವು ತಾಂತ್ರಿಕ ಕಾರಣಗಳಿಂದಾಗಿ ಇದ್ದಕ್ಕಿದ್ದಂತೆ ನೆಲಕ್ಕೆ ಧುಮುಕಿ ಬೆಂಕಿ ಹೊತ್ತಿಕೊಂಡಿದೆ. ಇರ್ಕುಟ್ಸ್ಕ್ ಗವರ್ನರ್ ಇಗೊರ್ ಕೊಬ್ಜೆವ್ ಅವರ ಪ್ರಕಾರ, ವಿಮಾನದ ಎಂಜಿನ್ ವೈಫಲ್ಯವೇ ಈ ಭೀಕರ ಅಪಘಾತಕ್ಕೆ ಪ್ರಾಥಮಿಕ ಕಾರಣ ಎನ್ನಲಾಗಿದೆ. ಗಾಯಗೊಂಡ ಸಿಬ್ಬಂದಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ಓದಿ: Video: ಪಾಕಿಸ್ತಾನದಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ, ಮೂವರಿಗೆ ಗಾಯ

ಅಪಘಾತಕ್ಕೀಡಾದ ‘Tu-22M3’ ಸೋವಿಯತ್ ಒಕ್ಕೂಟದ ಕಾಲದ ಅತ್ಯಂತ ವೇಗದ ಸೂಪರ್‌ಸಾನಿಕ್ ಬಾಂಬರ್ ವಿಮಾನವಾಗಿದೆ. ಇದನ್ನು ನ್ಯಾಟೋ (NATO) ಪಡೆಗಳು ಬ್ಯಾಕ್‌ಫೈರ್ ಎಂದೂ ಕೂಡ ಕರೆಯಲಾಗುತ್ತದೆ. ಅತ್ಯಾಧುನಿಕ ಆವೃತ್ತಿಯಾದ ಈ ವಿಮಾನವು ಹೈಪರ್‌ಸಾನಿಕ್ ಕಿಂಜಾಲ್ ಕ್ಷಿಪಣಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಈ ಅಪಘಾತದ ಕುರಿತು ರಷ್ಯಾ ರಕ್ಷಣಾ ಸಚಿವಾಲಯವು ಆಳವಾದ ತನಿಖೆಗೆ ಆದೇಶಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:10 am, Tue, 16 June 26

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ