AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ- ಉಕ್ರೇನ್ ಯುದ್ಧ 25ನೇ ದಿನಕ್ಕೆ: 400 ಮಂದಿ ಆಶ್ರಯ ಪಡೆದ ಶಾಲೆ ಮೇಲೆ ರಷ್ಯಾ ಬಾಂಬ್ ದಾಳಿ

ಸುಮಾರು 400 ಜನರು ಆಶ್ರಯ ಪಡೆದಿದ್ದ ಕಲಾ ಶಾಲೆಯೊಂದರ ಮೇಲೆ ರಷ್ಯಾದ ಮಿಲಿಟರಿ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್​​ನ ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅಸೋಸಿಯೇಟೆಡ್  ಪ್ರೆಸ್ ಭಾನುವಾರ ತಿಳಿಸಿದೆ.

ರಷ್ಯಾ- ಉಕ್ರೇನ್ ಯುದ್ಧ 25ನೇ ದಿನಕ್ಕೆ: 400 ಮಂದಿ ಆಶ್ರಯ ಪಡೆದ ಶಾಲೆ ಮೇಲೆ ರಷ್ಯಾ ಬಾಂಬ್ ದಾಳಿ
ಉಕ್ರೇನ್​​ನಲ್ಲಿ ಬಾಂಬ್ ದಾಳಿಗೆ ಹೊಗೆಯಾವೃತವಾಗಿರುವುದು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 20, 2022 | 4:39 PM

ಮುತ್ತಿಗೆ ಹಾಕಿದ ಉಕ್ರೇನಿಯನ್ (Ukraine) ಬಂದರು ನಗರವಾದ ಮಾರಿಯುಪೋಲ್‌ನಲ್ಲಿ (Mariupol) ಸುಮಾರು 400 ಜನರು ಆಶ್ರಯ ಪಡೆದಿದ್ದ ಕಲಾ ಶಾಲೆಯೊಂದರ ಮೇಲೆ ರಷ್ಯಾದ (Russia) ಮಿಲಿಟರಿ ಬಾಂಬ್ ದಾಳಿ ನಡೆಸಿದೆ ಎಂದು ಉಕ್ರೇನ್​​ನ ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ಭಾನುವಾರ ತಿಳಿಸಿದೆ. ಕಟ್ಟಡ ನಾಶವಾಗಿದೆ ಮತ್ತು ಜನರು ಅವಶೇಷಗಳ ಅಡಿಯಲ್ಲಿರಬಹುದು. ಸಾವುನೋವುಗಳ ಬಗ್ಗೆ ತಕ್ಷಣದ ಮಾಹಿತಿ ಇಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಮಾರಿಯುಪೋಲ್‌ನಲ್ಲಿ ನಾಗರಿಕರು ಆಶ್ರಯ ಪಡೆದಿದ್ದ ಥಿಯೇಟರ್‌ನಲ್ಲಿ ರಷ್ಯಾದ ಪಡೆಗಳು ಬಾಂಬ್ ದಾಳಿ ಮಾಡಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಬುಧವಾರದಿಂದ 130 ಜನರನ್ನು ರಕ್ಷಿಸಲಾಗಿದೆ ಆದರೆ ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲಿ ಉಳಿದಿರಬಹುದು ಎಂದು ಹೇಳಲಾಗಿದೆ. ಅಜೋವ್ ಸಮುದ್ರದ ಆಯಕಟ್ಟಿನ ಬಂದರು ಮಾರಿಯುಪೋಲ್ ಅನ್ನು ರಷ್ಯಾದ ಪಡೆಗಳು ಸುತ್ತುವರೆದಿವೆ. ಇಂಧನ, ಆಹಾರ ಮತ್ತು ನೀರು ಸರಬರಾಜುಗಳಿಂದ ಕಡಿತಗೊಳಿಸಲಾಗಿದ್ದು ಎಡೆಬಿಡದೆ ಇಲ್ಲಿ ಬಾಂಬ್ ದಾಳಿ ನಡೆದಿದೆ. ಮಾರಿಯುಪೋಲ್ ನ ಮುತ್ತಿಗೆಯು ಇತಿಹಾಸದಲ್ಲಿ ದಾಖಲಾಗುತ್ತದೆ. ರಷ್ಯಾದ ಪಡೆಗಳು ಮಾಡಿದ ಯುದ್ಧ ಅಪರಾಧಗಳು ಇವು ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಸೇನಾ ದಾಳಿ ಭಾನುವಾರ 25ನೇ ದಿನಕ್ಕೆ ಕಾಲಿಟ್ಟಿದೆ.

ಸ್ಥಳೀಯ ಅಧಿಕಾರಿಗಳ ಪ್ರಕಾರ, 400,000 ಜನರು ಎರಡು ವಾರಗಳಿಗೂ ಹೆಚ್ಚು ಕಾಲ ಮಾರಿಯುಪೋಲ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಭಾರೀ ಬಾಂಬ್ ಸ್ಫೋಟದಿಂದಾಗಿ ವಿದ್ಯುತ್ ಮತ್ತು ನೀರಿನ  ಪೂರೈಕೆಗಳನ್ನು ಕಡಿತಗೊಳಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿ ಮತ್ತೆ ಹೈಪರ್‌ಸಾನಿಕ್ ಕ್ಷಿಪಣಿಗಳನ್ನು ಹಾರಿಸಿದ್ದೇವೆ: ರಷ್ಯಾ ಭಾನುವಾರ ಉಕ್ರೇನ್‌ನಲ್ಲಿ ತನ್ನ ಹೊಸ ಕಿಂಜಾಲ್ ಹೈಪರ್‌ಸಾನಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ರಷ್ಯಾ ಭಾನುವಾರ ಹೇಳಿದೆ. ಇದು ಉಕ್ರೇನ್ ದೇಶದ ದಕ್ಷಿಣದಲ್ಲಿರುವ ಇಂಧನ ಸಂಗ್ರಹಣಾ ತಾಣವನ್ನು ನಾಶಪಡಿಸಿದೆ. ಉತ್ತರ ಉಕ್ರೇನ್‌ನ ಓವ್ರುಚ್ ಪಟ್ಟಣದಲ್ಲಿ ಸಮುದ್ರ ಆಧಾರಿತ ಕ್ಷಿಪಣಿಗಳೊಂದಿಗೆ ತರಬೇತಿ ಕೇಂದ್ರವನ್ನು ಗುರಿಯಾಗಿಸಿಕೊಂಡಾಗ ಉಕ್ರೇನಿಯನ್ ವಿಶೇಷ ಪಡೆಗಳ 100 ಕ್ಕೂ ಹೆಚ್ಚು ಸದಸ್ಯರು ಮತ್ತು “ವಿದೇಶಿ ಕೂಲಿ ಸೈನಿಕರನ್ನು” ಕೊಂದಿರುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.

“ಹೈಪರ್ ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿಗಳೊಂದಿಗೆ ಕಿನ್ಜಾಲ್ ವಾಯುಯಾನ ಕ್ಷಿಪಣಿ ವ್ಯವಸ್ಥೆಗಳು ಮೈಕೊಲೈವ್ ಪ್ರದೇಶದ ಕೊಸ್ಟ್ಯಾಂಟಿನಿವ್ಕಾ ವಸಾಹತು ಬಳಿ ಉಕ್ರೇನಿಯನ್ ಸಶಸ್ತ್ರ ಪಡೆಗಳ ಇಂಧನ ಮತ್ತು ಲೂಬ್ರಿಕಂಟ್ಸ್ ನ ದೊಡ್ಡ ಸಂಗ್ರಹಣಾ ತಾಣವನ್ನು ನಾಶಪಡಿಸಿದವು” ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಅದೇ ವೇಳೆ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದಲ್ಲಿನ ಹಡಗುಗಳಿಂದ ಕ್ರೂಸ್ ಕ್ಷಿಪಣಿಗಳೊಂದಿಗೆ ರಷ್ಯಾ ಭಾನುವಾರ ಉಕ್ರೇನ್ ಮೇಲೆ ದಾಳಿ ನಡೆಸಿದೆ ಎಂದು ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇತ್ತ  ಉಕ್ರೇನಿಯನ್ ಪಡೆಗಳು ಕಠಿಣ ಪ್ರತಿರೋಧವನ್ನು ಹೆಚ್ಚಿಸಿವೆ. ಪಶ್ಚಿಮವು ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ಪ್ರಯತ್ನದಲ್ಲಿ ರಷ್ಯಾದ ಮೇಲೆ ವ್ಯಾಪಕವಾದ ನಿರ್ಬಂಧಗಳನ್ನು ವಿಧಿಸಿದೆ.

ಸಮರ ಕಾನೂನಿನಡಿಯಲ್ಲಿ “ಏಕೀಕೃತ ಮಾಹಿತಿ ನೀತಿ” ಯ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಎಲ್ಲಾ ರಾಷ್ಟ್ರೀಯ ಟಿವಿ ಚಾನೆಲ್‌ಗಳನ್ನು ಒಂದೇ ವೇದಿಕೆಯಲ್ಲಿ ಸಂಯೋಜಿಸುವ ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ ಎಂದು ಅವರ ಕಚೇರಿ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:  ಭಾರತದಲ್ಲಿ ನಿಂತು ರಷ್ಯಾದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಪಾನ್​ ಪ್ರಧಾನಿ; ಉಕ್ರೇನ್​​ಗೆ ನಮ್ಮ ಬೆಂಬಲವೆಂದ ಕಿಶಿದಾ

Published On - 4:22 pm, Sun, 20 March 22

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ