AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ

ರಷ್ಯಾದ ಕ್ಷಿಪಣಿ ದಾಳಿಯು ಉಕ್ರೇನ್​ನ 3 ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇನ್ನೂ 15 ಜನರು ಗಾಯಗೊಂಡಿದ್ದಾರೆ. ಹಾನಿಯ ಪ್ರಮಾಣ ಎಷ್ಟಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ
ಉಕ್ರೇನ್​ನಲ್ಲಿ ಕ್ಷಿಪಣಿ ದಾಳಿImage Credit source: AP
TV9 Web
| Edited By: |

Updated on:Jul 16, 2022 | 8:32 AM

Share

ಕೈವ್: ಉಕ್ರೇನ್‌ನ ಡ್ನಿಪ್ರೊ (Dnipro) ನಗರದ ಮೇಲೆ ರಷ್ಯಾದಿಂದ ಶುಕ್ರವಾರ ನಡೆದ ಕ್ಷಿಪಣಿ ದಾಳಿಯಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ವ್ಯಾಲೆಂಟಿನ್ ರೆಜ್ನಿಚೆಂಕೊ ಹೇಳಿದ್ದಾರೆ. ರಾಕೆಟ್‌ಗಳು ಕೈಗಾರಿಕಾ ಸ್ಥಾವರ ಮತ್ತು ಅದರ ಪಕ್ಕದ ಜನನಿಬಿಡ ಬೀದಿಗೆ ಅಪ್ಪಳಿಸಿವೆ ಎಂದು ರೆಜಿನ್‌ಚೆಂಕೊ ತನ್ನ ಫೇಸ್‌ಬುಕ್ (Facebook) ಪುಟದಲ್ಲಿ ಪೋಸ್ಟ್​ ಮಾಡಿದ್ದಾರೆ. ರಷ್ಯಾದ (Russia) ಕ್ಷಿಪಣಿ ದಾಳಿಯು ಉಕ್ರೇನ್​ನ 3 ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇನ್ನೂ 15 ಜನರು ಗಾಯಗೊಂಡಿದ್ದಾರೆ. ಹಾನಿಯ ಪ್ರಮಾಣ ಎಷ್ಟಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಪ್ರಾದೇಶಿಕ ಗವರ್ನರ್ ವ್ಯಾಲೆಂಟಿನ್ ರೆಜ್ನಿಚೆಂಕೊ ಪ್ರಕಾರ, ಶುಕ್ರವಾರ ಮಧ್ಯ ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು

“ರಾಕೆಟ್‌ಗಳು ಕೈಗಾರಿಕಾ ಸ್ಥಾವರವನ್ನು ಮತ್ತು ಅದರ ಪಕ್ಕದ ಜನನಿಬಿಡ ರಸ್ತೆಯನ್ನು ಅಪ್ಪಳಿಸಿವೆ” ಎಂದು ರೆಜಿಂಚೆಂಕೊ ತನ್ನ ಫೇಸ್‌ಬುಕ್ ಪೇಜ್​ನಲ್ಲಿ ತಿಳಿಸಿದ್ದಾರೆ. ಕ್ಯಾಸ್ಪಿಯನ್ ಸಮುದ್ರದ ಮೇಲೆ ಆಯಕಟ್ಟಿನ ಬಾಂಬರ್‌ಗಳಿಂದ ಹಾರಿಸಲಾದ ಹಲವಾರು ಕ್ರೂಸ್ ಕ್ಷಿಪಣಿಗಳು ರಾತ್ರಿ 10 ಗಂಟೆಗೆ ಡ್ನಿಪರ್ ನದಿಯ ಪ್ರಮುಖ ನಗರವಾದ ಡ್ನಿಪ್ರೊದಲ್ಲಿರುವ ಕಾರ್ಖಾನೆಯ ಮೇಲೆ ಅಪ್ಪಳಿಸಿವೆ ಎಂದು ಉಕ್ರೇನ್ ವಾಯುಪಡೆ ಹೇಳಿದೆ.

ರಾಜಧಾನಿ ಕೈವ್‌ನ ನೈಋತ್ಯದಲ್ಲಿರುವ ವಿನ್ನಿಟ್ಸಿಯಾದಲ್ಲಿ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 23 ಜನ ಸಾವನ್ನಪ್ಪಿದ್ದರು. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಡ್ನಿಪ್ರೊ ಮೇಲಿನ ದಾಳಿ ನಡೆದಿದೆ.

Published On - 8:31 am, Sat, 16 July 22

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ