AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ

ರಷ್ಯಾದ ಕ್ಷಿಪಣಿ ದಾಳಿಯು ಉಕ್ರೇನ್​ನ 3 ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇನ್ನೂ 15 ಜನರು ಗಾಯಗೊಂಡಿದ್ದಾರೆ. ಹಾನಿಯ ಪ್ರಮಾಣ ಎಷ್ಟಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ
ಉಕ್ರೇನ್​ನಲ್ಲಿ ಕ್ಷಿಪಣಿ ದಾಳಿImage Credit source: AP
TV9 Web
| Edited By: |

Updated on:Jul 16, 2022 | 8:32 AM

Share

ಕೈವ್: ಉಕ್ರೇನ್‌ನ ಡ್ನಿಪ್ರೊ (Dnipro) ನಗರದ ಮೇಲೆ ರಷ್ಯಾದಿಂದ ಶುಕ್ರವಾರ ನಡೆದ ಕ್ಷಿಪಣಿ ದಾಳಿಯಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ವ್ಯಾಲೆಂಟಿನ್ ರೆಜ್ನಿಚೆಂಕೊ ಹೇಳಿದ್ದಾರೆ. ರಾಕೆಟ್‌ಗಳು ಕೈಗಾರಿಕಾ ಸ್ಥಾವರ ಮತ್ತು ಅದರ ಪಕ್ಕದ ಜನನಿಬಿಡ ಬೀದಿಗೆ ಅಪ್ಪಳಿಸಿವೆ ಎಂದು ರೆಜಿನ್‌ಚೆಂಕೊ ತನ್ನ ಫೇಸ್‌ಬುಕ್ (Facebook) ಪುಟದಲ್ಲಿ ಪೋಸ್ಟ್​ ಮಾಡಿದ್ದಾರೆ. ರಷ್ಯಾದ (Russia) ಕ್ಷಿಪಣಿ ದಾಳಿಯು ಉಕ್ರೇನ್​ನ 3 ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇನ್ನೂ 15 ಜನರು ಗಾಯಗೊಂಡಿದ್ದಾರೆ. ಹಾನಿಯ ಪ್ರಮಾಣ ಎಷ್ಟಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಪ್ರಾದೇಶಿಕ ಗವರ್ನರ್ ವ್ಯಾಲೆಂಟಿನ್ ರೆಜ್ನಿಚೆಂಕೊ ಪ್ರಕಾರ, ಶುಕ್ರವಾರ ಮಧ್ಯ ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು

“ರಾಕೆಟ್‌ಗಳು ಕೈಗಾರಿಕಾ ಸ್ಥಾವರವನ್ನು ಮತ್ತು ಅದರ ಪಕ್ಕದ ಜನನಿಬಿಡ ರಸ್ತೆಯನ್ನು ಅಪ್ಪಳಿಸಿವೆ” ಎಂದು ರೆಜಿಂಚೆಂಕೊ ತನ್ನ ಫೇಸ್‌ಬುಕ್ ಪೇಜ್​ನಲ್ಲಿ ತಿಳಿಸಿದ್ದಾರೆ. ಕ್ಯಾಸ್ಪಿಯನ್ ಸಮುದ್ರದ ಮೇಲೆ ಆಯಕಟ್ಟಿನ ಬಾಂಬರ್‌ಗಳಿಂದ ಹಾರಿಸಲಾದ ಹಲವಾರು ಕ್ರೂಸ್ ಕ್ಷಿಪಣಿಗಳು ರಾತ್ರಿ 10 ಗಂಟೆಗೆ ಡ್ನಿಪರ್ ನದಿಯ ಪ್ರಮುಖ ನಗರವಾದ ಡ್ನಿಪ್ರೊದಲ್ಲಿರುವ ಕಾರ್ಖಾನೆಯ ಮೇಲೆ ಅಪ್ಪಳಿಸಿವೆ ಎಂದು ಉಕ್ರೇನ್ ವಾಯುಪಡೆ ಹೇಳಿದೆ.

ರಾಜಧಾನಿ ಕೈವ್‌ನ ನೈಋತ್ಯದಲ್ಲಿರುವ ವಿನ್ನಿಟ್ಸಿಯಾದಲ್ಲಿ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 23 ಜನ ಸಾವನ್ನಪ್ಪಿದ್ದರು. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಡ್ನಿಪ್ರೊ ಮೇಲಿನ ದಾಳಿ ನಡೆದಿದೆ.

Published On - 8:31 am, Sat, 16 July 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ