AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ

ರಷ್ಯಾದ ಕ್ಷಿಪಣಿ ದಾಳಿಯು ಉಕ್ರೇನ್​ನ 3 ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇನ್ನೂ 15 ಜನರು ಗಾಯಗೊಂಡಿದ್ದಾರೆ. ಹಾನಿಯ ಪ್ರಮಾಣ ಎಷ್ಟಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ
ಉಕ್ರೇನ್​ನಲ್ಲಿ ಕ್ಷಿಪಣಿ ದಾಳಿImage Credit source: AP
TV9 Web
| Edited By: |

Updated on:Jul 16, 2022 | 8:32 AM

Share

ಕೈವ್: ಉಕ್ರೇನ್‌ನ ಡ್ನಿಪ್ರೊ (Dnipro) ನಗರದ ಮೇಲೆ ರಷ್ಯಾದಿಂದ ಶುಕ್ರವಾರ ನಡೆದ ಕ್ಷಿಪಣಿ ದಾಳಿಯಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ವ್ಯಾಲೆಂಟಿನ್ ರೆಜ್ನಿಚೆಂಕೊ ಹೇಳಿದ್ದಾರೆ. ರಾಕೆಟ್‌ಗಳು ಕೈಗಾರಿಕಾ ಸ್ಥಾವರ ಮತ್ತು ಅದರ ಪಕ್ಕದ ಜನನಿಬಿಡ ಬೀದಿಗೆ ಅಪ್ಪಳಿಸಿವೆ ಎಂದು ರೆಜಿನ್‌ಚೆಂಕೊ ತನ್ನ ಫೇಸ್‌ಬುಕ್ (Facebook) ಪುಟದಲ್ಲಿ ಪೋಸ್ಟ್​ ಮಾಡಿದ್ದಾರೆ. ರಷ್ಯಾದ (Russia) ಕ್ಷಿಪಣಿ ದಾಳಿಯು ಉಕ್ರೇನ್​ನ 3 ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇನ್ನೂ 15 ಜನರು ಗಾಯಗೊಂಡಿದ್ದಾರೆ. ಹಾನಿಯ ಪ್ರಮಾಣ ಎಷ್ಟಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಪ್ರಾದೇಶಿಕ ಗವರ್ನರ್ ವ್ಯಾಲೆಂಟಿನ್ ರೆಜ್ನಿಚೆಂಕೊ ಪ್ರಕಾರ, ಶುಕ್ರವಾರ ಮಧ್ಯ ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ನಡೆದ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು

“ರಾಕೆಟ್‌ಗಳು ಕೈಗಾರಿಕಾ ಸ್ಥಾವರವನ್ನು ಮತ್ತು ಅದರ ಪಕ್ಕದ ಜನನಿಬಿಡ ರಸ್ತೆಯನ್ನು ಅಪ್ಪಳಿಸಿವೆ” ಎಂದು ರೆಜಿಂಚೆಂಕೊ ತನ್ನ ಫೇಸ್‌ಬುಕ್ ಪೇಜ್​ನಲ್ಲಿ ತಿಳಿಸಿದ್ದಾರೆ. ಕ್ಯಾಸ್ಪಿಯನ್ ಸಮುದ್ರದ ಮೇಲೆ ಆಯಕಟ್ಟಿನ ಬಾಂಬರ್‌ಗಳಿಂದ ಹಾರಿಸಲಾದ ಹಲವಾರು ಕ್ರೂಸ್ ಕ್ಷಿಪಣಿಗಳು ರಾತ್ರಿ 10 ಗಂಟೆಗೆ ಡ್ನಿಪರ್ ನದಿಯ ಪ್ರಮುಖ ನಗರವಾದ ಡ್ನಿಪ್ರೊದಲ್ಲಿರುವ ಕಾರ್ಖಾನೆಯ ಮೇಲೆ ಅಪ್ಪಳಿಸಿವೆ ಎಂದು ಉಕ್ರೇನ್ ವಾಯುಪಡೆ ಹೇಳಿದೆ.

ರಾಜಧಾನಿ ಕೈವ್‌ನ ನೈಋತ್ಯದಲ್ಲಿರುವ ವಿನ್ನಿಟ್ಸಿಯಾದಲ್ಲಿ ರಷ್ಯಾದ ಕ್ಷಿಪಣಿ ದಾಳಿಯಲ್ಲಿ 23 ಜನ ಸಾವನ್ನಪ್ಪಿದ್ದರು. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಡ್ನಿಪ್ರೊ ಮೇಲಿನ ದಾಳಿ ನಡೆದಿದೆ.

Published On - 8:31 am, Sat, 16 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ