AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು

ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು
ರಷ್ಯಾದ ಕ್ಷಿಪಣಿ ದಾಳಿಯಿಂದ ಕುಸಿದು ಬಿದ್ದಿರುವ ಶಾಪಿಂಗ್ ಮಾಲ್
TV9 Web
| Edited By: |

Updated on:Jun 28, 2022 | 8:58 AM

Share

ಕೀವ್: ಉಕ್ರೇನ್​ನ ಕ್ರೆಮೆನ್​ಚುಕ್​ನಲ್ಲಿರುವ ಶಾಪಿಂಗ್​ ಮಾಲ್ ಒಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ (Russia Missile Attack) ನಡೆಸಿದೆ. ದಾಳಿ ನಡೆದಾಗ ಮಾಲ್​ನಲ್ಲಿ ಸುಮಾರು 1,000 ಮಂದಿ ಇದ್ದರು. ಬಾಂಬ್ ಸ್ಫೋಟಿಸಿದಾಗ ಸುಮಾರು 16 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು, ನೂರಾರು ಮಂದಿಗೆ ಗಾಯಗಳಾಗಿವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ (Ukraine President Volodymyr Zelensky ಹೇಳಿದ್ದಾರೆ. ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

‘ಮುಗ್ಧ ನಾಗರಿಕರ ಮೇಲೆ ಮನಬಂದಂತೆ ದಾಳಿ ನಡೆಸುವುದು ಯುದ್ಧಾಪರಾಧವಾಗುತ್ತದೆ. ರಷ್ಯಾದ ಈ ದಾಳಿಗೆ ಕ್ಷಮೆಗೆ ಅರ್ಹವಾದುದಲ್ಲ’ ಎಂದು ಜಿ7 ದೇಶಗಳ ಒಕ್ಕೂಟ ಕಟುವಾಗಿ ಟೀಕಿಸಿದೆ. ಪೂರ್ವ ಉಕ್ರೇನ್​ನ ಲುಹಾನ್​ಸ್ಕ್​ ಪ್ರಾಂತ್ಯದ ಲಿಸಿಚನ್​ಸ್ಕ್​ ಎನ್ನುವಲ್ಲಿಯೂ ನೀರು ಹಿಡಿಯುತ್ತಿದ್ದ ಜನರ ಮೇಲೆ ರಷ್ಯಾ ಪಡೆಗಳು ಗುಂಡು ಹಾರಿಸಿದ್ದ 8 ಮಂದಿ ಮೃತಪಟ್ಟಿದ್ದಾರೆ. ಖಾರ್ಕಿವ್ ನಗರದಲ್ಲಿ ರಷ್ಯಾ ಪಡೆಗಳ ಶೆಲ್ ದಾಳಿಗೆ ಐವರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ 22 ಮಂದಿ ಗಾಯಗೊಂಡಿದ್ದಾರೆ.

ಉಕ್ರೇನ್​ಗೆ ಹೊಸದಾಗಿ ಹಲವು ನೆರವು ಮತ್ತು ಯುದ್ಧೋಪಕರಣಗಳನ್ನು ಒದಗಿಸುವುದಾಗಿ ಅಮೆರಿಕ ಘೋಷಿಸಿದೆ. ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನೀಡಲಾಗುವುದು ಎಂದು ಅಮೆರಿಕ ಭರವಸೆ ನೀಡಿದೆ. ಸಂಭಾವ್ಯ ಸಂಘರ್ಷಕ್ಕೆ ನ್ಯಾಟೊ ಸಹ ಸಿದ್ಧತೆ ಆರಂಭಿಸಿದ್ದು, ಕ್ಷಿಪ್ರ ಕಾರ್ಯಪಡೆಗೆ ಸನ್ನದ್ಧ ಸ್ಥಿತಿಯಲ್ಲಿರುವ ಸೈನಿಕರ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಿದೆ.

ಗೆಲುವು ಮರೀಚಿಕೆ

ಉಕ್ರೇನ್​ನ ಪೂರ್ವ ಭಾಗದ ಬಹುತೇಕ ಪ್ರದೇಶಗಳನ್ನು ರಷ್ಯಾ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆಯಾದರೂ, ಉಕ್ರೇನ್​ ಸೇನಾಪಡೆಗಳು ಹೋರಾಟ ನಿಲ್ಲಿಸಿಲ್ಲ. ಹಲವು ಪ್ರದೇಶಗಳ ನಿಯಂತ್ರಣ ಎರಡೂ ಸೇನೆಗಳ ನಡುವೆ ಕೈಬದಲಿಯಾಗುತ್ತಿದೆ. ಯುದ್ಧದಿಂದಾಗಿ 10 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಚಳಿಗಾಲದ ಒಳಗೆ ಯುದ್ಧ ಅಂತ್ಯಗೊಳ್ಳದಿದ್ದರೆ ಜನಜೀವನ ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ.

Published On - 8:58 am, Tue, 28 June 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ