AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು

ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು
ರಷ್ಯಾದ ಕ್ಷಿಪಣಿ ದಾಳಿಯಿಂದ ಕುಸಿದು ಬಿದ್ದಿರುವ ಶಾಪಿಂಗ್ ಮಾಲ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 28, 2022 | 8:58 AM

Share

ಕೀವ್: ಉಕ್ರೇನ್​ನ ಕ್ರೆಮೆನ್​ಚುಕ್​ನಲ್ಲಿರುವ ಶಾಪಿಂಗ್​ ಮಾಲ್ ಒಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ (Russia Missile Attack) ನಡೆಸಿದೆ. ದಾಳಿ ನಡೆದಾಗ ಮಾಲ್​ನಲ್ಲಿ ಸುಮಾರು 1,000 ಮಂದಿ ಇದ್ದರು. ಬಾಂಬ್ ಸ್ಫೋಟಿಸಿದಾಗ ಸುಮಾರು 16 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು, ನೂರಾರು ಮಂದಿಗೆ ಗಾಯಗಳಾಗಿವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ (Ukraine President Volodymyr Zelensky ಹೇಳಿದ್ದಾರೆ. ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

‘ಮುಗ್ಧ ನಾಗರಿಕರ ಮೇಲೆ ಮನಬಂದಂತೆ ದಾಳಿ ನಡೆಸುವುದು ಯುದ್ಧಾಪರಾಧವಾಗುತ್ತದೆ. ರಷ್ಯಾದ ಈ ದಾಳಿಗೆ ಕ್ಷಮೆಗೆ ಅರ್ಹವಾದುದಲ್ಲ’ ಎಂದು ಜಿ7 ದೇಶಗಳ ಒಕ್ಕೂಟ ಕಟುವಾಗಿ ಟೀಕಿಸಿದೆ. ಪೂರ್ವ ಉಕ್ರೇನ್​ನ ಲುಹಾನ್​ಸ್ಕ್​ ಪ್ರಾಂತ್ಯದ ಲಿಸಿಚನ್​ಸ್ಕ್​ ಎನ್ನುವಲ್ಲಿಯೂ ನೀರು ಹಿಡಿಯುತ್ತಿದ್ದ ಜನರ ಮೇಲೆ ರಷ್ಯಾ ಪಡೆಗಳು ಗುಂಡು ಹಾರಿಸಿದ್ದ 8 ಮಂದಿ ಮೃತಪಟ್ಟಿದ್ದಾರೆ. ಖಾರ್ಕಿವ್ ನಗರದಲ್ಲಿ ರಷ್ಯಾ ಪಡೆಗಳ ಶೆಲ್ ದಾಳಿಗೆ ಐವರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ 22 ಮಂದಿ ಗಾಯಗೊಂಡಿದ್ದಾರೆ.

ಉಕ್ರೇನ್​ಗೆ ಹೊಸದಾಗಿ ಹಲವು ನೆರವು ಮತ್ತು ಯುದ್ಧೋಪಕರಣಗಳನ್ನು ಒದಗಿಸುವುದಾಗಿ ಅಮೆರಿಕ ಘೋಷಿಸಿದೆ. ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನೀಡಲಾಗುವುದು ಎಂದು ಅಮೆರಿಕ ಭರವಸೆ ನೀಡಿದೆ. ಸಂಭಾವ್ಯ ಸಂಘರ್ಷಕ್ಕೆ ನ್ಯಾಟೊ ಸಹ ಸಿದ್ಧತೆ ಆರಂಭಿಸಿದ್ದು, ಕ್ಷಿಪ್ರ ಕಾರ್ಯಪಡೆಗೆ ಸನ್ನದ್ಧ ಸ್ಥಿತಿಯಲ್ಲಿರುವ ಸೈನಿಕರ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಿದೆ.

ಗೆಲುವು ಮರೀಚಿಕೆ

ಉಕ್ರೇನ್​ನ ಪೂರ್ವ ಭಾಗದ ಬಹುತೇಕ ಪ್ರದೇಶಗಳನ್ನು ರಷ್ಯಾ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆಯಾದರೂ, ಉಕ್ರೇನ್​ ಸೇನಾಪಡೆಗಳು ಹೋರಾಟ ನಿಲ್ಲಿಸಿಲ್ಲ. ಹಲವು ಪ್ರದೇಶಗಳ ನಿಯಂತ್ರಣ ಎರಡೂ ಸೇನೆಗಳ ನಡುವೆ ಕೈಬದಲಿಯಾಗುತ್ತಿದೆ. ಯುದ್ಧದಿಂದಾಗಿ 10 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಚಳಿಗಾಲದ ಒಳಗೆ ಯುದ್ಧ ಅಂತ್ಯಗೊಳ್ಳದಿದ್ದರೆ ಜನಜೀವನ ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ.

Published On - 8:58 am, Tue, 28 June 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು