AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು

ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

Russia Ukraine War: ಉಕ್ರೇನ್​ನ ಶಾಪಿಂಗ್ ಮಾಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, 16 ಮಂದಿ ಸಾವು
ರಷ್ಯಾದ ಕ್ಷಿಪಣಿ ದಾಳಿಯಿಂದ ಕುಸಿದು ಬಿದ್ದಿರುವ ಶಾಪಿಂಗ್ ಮಾಲ್
TV9 Web
| Edited By: |

Updated on:Jun 28, 2022 | 8:58 AM

Share

ಕೀವ್: ಉಕ್ರೇನ್​ನ ಕ್ರೆಮೆನ್​ಚುಕ್​ನಲ್ಲಿರುವ ಶಾಪಿಂಗ್​ ಮಾಲ್ ಒಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ (Russia Missile Attack) ನಡೆಸಿದೆ. ದಾಳಿ ನಡೆದಾಗ ಮಾಲ್​ನಲ್ಲಿ ಸುಮಾರು 1,000 ಮಂದಿ ಇದ್ದರು. ಬಾಂಬ್ ಸ್ಫೋಟಿಸಿದಾಗ ಸುಮಾರು 16 ಮಂದಿ ಸ್ಥಳದಲ್ಲಿಯೇ ಮೃತಪಟ್ಟರು, ನೂರಾರು ಮಂದಿಗೆ ಗಾಯಗಳಾಗಿವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್​ಸ್ಕಿ (Ukraine President Volodymyr Zelensky ಹೇಳಿದ್ದಾರೆ. ಶಾಪಿಂಗ್ ಮಾಲ್ ಮೇಲೆ ನಡೆಸಿರುವ ದಾಳಿಯನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ.

‘ಮುಗ್ಧ ನಾಗರಿಕರ ಮೇಲೆ ಮನಬಂದಂತೆ ದಾಳಿ ನಡೆಸುವುದು ಯುದ್ಧಾಪರಾಧವಾಗುತ್ತದೆ. ರಷ್ಯಾದ ಈ ದಾಳಿಗೆ ಕ್ಷಮೆಗೆ ಅರ್ಹವಾದುದಲ್ಲ’ ಎಂದು ಜಿ7 ದೇಶಗಳ ಒಕ್ಕೂಟ ಕಟುವಾಗಿ ಟೀಕಿಸಿದೆ. ಪೂರ್ವ ಉಕ್ರೇನ್​ನ ಲುಹಾನ್​ಸ್ಕ್​ ಪ್ರಾಂತ್ಯದ ಲಿಸಿಚನ್​ಸ್ಕ್​ ಎನ್ನುವಲ್ಲಿಯೂ ನೀರು ಹಿಡಿಯುತ್ತಿದ್ದ ಜನರ ಮೇಲೆ ರಷ್ಯಾ ಪಡೆಗಳು ಗುಂಡು ಹಾರಿಸಿದ್ದ 8 ಮಂದಿ ಮೃತಪಟ್ಟಿದ್ದಾರೆ. ಖಾರ್ಕಿವ್ ನಗರದಲ್ಲಿ ರಷ್ಯಾ ಪಡೆಗಳ ಶೆಲ್ ದಾಳಿಗೆ ಐವರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ 22 ಮಂದಿ ಗಾಯಗೊಂಡಿದ್ದಾರೆ.

ಉಕ್ರೇನ್​ಗೆ ಹೊಸದಾಗಿ ಹಲವು ನೆರವು ಮತ್ತು ಯುದ್ಧೋಪಕರಣಗಳನ್ನು ಒದಗಿಸುವುದಾಗಿ ಅಮೆರಿಕ ಘೋಷಿಸಿದೆ. ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನೀಡಲಾಗುವುದು ಎಂದು ಅಮೆರಿಕ ಭರವಸೆ ನೀಡಿದೆ. ಸಂಭಾವ್ಯ ಸಂಘರ್ಷಕ್ಕೆ ನ್ಯಾಟೊ ಸಹ ಸಿದ್ಧತೆ ಆರಂಭಿಸಿದ್ದು, ಕ್ಷಿಪ್ರ ಕಾರ್ಯಪಡೆಗೆ ಸನ್ನದ್ಧ ಸ್ಥಿತಿಯಲ್ಲಿರುವ ಸೈನಿಕರ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಿದೆ.

ಗೆಲುವು ಮರೀಚಿಕೆ

ಉಕ್ರೇನ್​ನ ಪೂರ್ವ ಭಾಗದ ಬಹುತೇಕ ಪ್ರದೇಶಗಳನ್ನು ರಷ್ಯಾ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆಯಾದರೂ, ಉಕ್ರೇನ್​ ಸೇನಾಪಡೆಗಳು ಹೋರಾಟ ನಿಲ್ಲಿಸಿಲ್ಲ. ಹಲವು ಪ್ರದೇಶಗಳ ನಿಯಂತ್ರಣ ಎರಡೂ ಸೇನೆಗಳ ನಡುವೆ ಕೈಬದಲಿಯಾಗುತ್ತಿದೆ. ಯುದ್ಧದಿಂದಾಗಿ 10 ಲಕ್ಷಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ. ಚಳಿಗಾಲದ ಒಳಗೆ ಯುದ್ಧ ಅಂತ್ಯಗೊಳ್ಳದಿದ್ದರೆ ಜನಜೀವನ ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ.

Published On - 8:58 am, Tue, 28 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್