AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನ ಪೋಲ್ಟವಾದಲ್ಲಿ ರಷ್ಯಾದಿಂದ ಕ್ಷಿಪಣಿ ದಾಳಿ; 41 ಮಂದಿ ಸಾವು

ರಷ್ಯಾದ ಪಡೆಗಳು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಅದು ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ಸ್ ಕಟ್ಟಡವನ್ನು ಹಾನಿಗೊಳಿಸಿದವು ಎಂದು ಝೆಲೆನ್ಸ್ಕಿ ವಿಡಿಯೊದಲ್ಲಿ ಹೇಳಿದ್ದಾರೆ.

ಉಕ್ರೇನ್‌ನ ಪೋಲ್ಟವಾದಲ್ಲಿ ರಷ್ಯಾದಿಂದ ಕ್ಷಿಪಣಿ ದಾಳಿ; 41 ಮಂದಿ ಸಾವು
ಕ್ಷಿಪಣಿ ದಾಳಿಯಲ್ಲಿ ಕಟ್ಟಡಕ್ಕೆ ಹಾನಿಯಾಗಿರುವುದು
Follow us
ರಶ್ಮಿ ಕಲ್ಲಕಟ್ಟ
|

Updated on:Sep 03, 2024 | 6:00 PM

ಕೈವ್ ಸೆಪ್ಟೆಂಬರ್ 03: ಉಕ್ರೇನ್‌ನ (Ukraine) ಪೋಲ್ಟವಾ ನಗರದಲ್ಲಿ ಮಂಗಳವಾರ ರಷ್ಯಾದ (Russia) ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ ಮತ್ತು 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelenskiy) ಹೇಳಿದ್ದಾರೆ. ರಷ್ಯಾದ ಪಡೆಗಳು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಅದು ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ಸ್ ಕಟ್ಟಡವನ್ನು ಹಾನಿಗೊಳಿಸಿದವು ಎಂದು ಝೆಲೆನ್ಸ್ಕಿ ವಿಡಿಯೊದಲ್ಲಿ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ವೆಬ್‌ಸೈಟ್ ಎಕ್ಸ್‌ನಲ್ಲಿ ಈ ಬಗ್ಗೆ ಬರೆದ ಝೆಲೆನ್ಸ್ಕಿ, “ಪೋಲ್ಟವಾದಲ್ಲಿ ರಷ್ಯಾದ ದಾಳಿ ಬಗ್ಗೆ ನನಗೆ ಪ್ರಾಥಮಿಕ ವರದಿಗಳು ಬಂದವು. ಲಭ್ಯವಿರುವ ಮಾಹಿತಿಯ ಪ್ರಕಾರ, ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಈ ಪ್ರದೇಶ ಮೇಲೆ ದಾಳಿ ನಡೆದಿದೆ. ಅವರು ಶಿಕ್ಷಣ ಸಂಸ್ಥೆ ಮತ್ತು ಹತ್ತಿರದ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡರು, ದೂರಸಂಪರ್ಕ ಸಂಸ್ಥೆಯ ಕಟ್ಟಡಗಳಲ್ಲಿ ಒಂದನ್ನು ಭಾಗಶಃ ನಾಶಪಡಿಸಿದರು.

ಅನೇಕರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ಇದೆ. ದಾಳಿಯಲ್ಲಿ 41 ಜನರು ಸಾವಿಗೀಡಾಗಿದ್ದು, 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಅವಶೇಷಗಳಡಿಯಲ್ಲಿ ಜನರು ಸಿಲುಕಿಕೊಂಡಿದ್ದರು. ಅನೇಕ ಜನರನ್ನು ರಕ್ಷಿಸಲಾಯಿತು, ಆದರೆ 180 ಕ್ಕೂ ಹೆಚ್ಚು ಜನರು ಗಾಯಗೊಂಡರು. ದುರದೃಷ್ಟವಶಾತ್, ಅನೇಕ ಸಾವುನೋವುಗಳು ಇವೆ. ಇಲ್ಲಿಯವರೆಗೆ 41 ಜನರು ಸಾವಿಗೀಡಾಗಿದ್ದಾರೆ ಎಂದು ನಮಗೆ ತಿಳಿದಿದೆ. ಅವರ ಎಲ್ಲಾ ಸಂಬಂಧಿಕರು ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು” ಎಂದು ಅಧ್ಯಕ್ಷ ಝೆಲೆನ್ಸ್ಕಿ ಬರೆದಿದ್ದಾರೆ.

“ಈ  ದಾಳಿಗೆ  ರಷ್ಯಾವನ್ನು ಖಂಡಿತವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂದು ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗೋ: ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನ, 129 ಕೈದಿಗಳು ಸಾವು, 59 ಜನರಿಗೆ ಗಾಯ

ಉಕ್ರೇನ್ ಅನ್ನು ರಕ್ಷಿಸುವ ಸಲುವಾಗಿ ತಮ್ಮ ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳನ್ನು ರಷ್ಯಾದ ಭೂಪ್ರದೇಶದ ಆಳವಾದ ದಾಳಿಗಳಿಗೆ ಬಳಸಲು ಅನುಮತಿಸುವಂತೆ ಮಿತ್ರರಾಷ್ಟ್ರಗಳನ್ನು ಒತ್ತಾಯಿಸಿದ ಝೆಲೆನ್ಸ್ಕಿ, ಈ ಭಯೋತ್ಪಾದನೆಯನ್ನು ತಡೆಯುವ ಶಕ್ತಿಯನ್ನು ಹೊಂದಿರುವ ಪ್ರಪಂಚದ ಪ್ರತಿಯೊಬ್ಬರಿಗೂ ನಾವು ಹೇಳುತ್ತಲೇ ಇರುತ್ತೇವೆ. ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ಕ್ಷಿಪಣಿಗಳು ಉಕ್ರೇನ್‌ನಲ್ಲಿ ಅಗತ್ಯವಿದೆಯೇ ಹೊರತು ಎಲ್ಲೋ ಗೋದಾಮಿನಲ್ಲಿ ಅಲ್ಲ ಎಂದಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Tue, 3 September 24

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್