AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೆಟ್ ಉಡಾವಣಾ ಸ್ಥಳದಲ್ಲಿ ಕಿಮ್ ಜಾಂಗ್ ಉನ್​​ರನ್ನು ಭೇಟಿಯಾದ ರಷ್ಯಾ ಅಧ್ಯಕ್ಷ ಪುಟಿನ್

Putin and Kim meeting: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ರಷ್ಯಾದ ಅತ್ಯಂತ ಆಧುನಿಕ ಬಾಹ್ಯಾಕಾಶ ರಾಕೆಟ್ ಉಡಾವಣಾ ತಾಣದಲ್ಲಿ ಬುಧವಾರ ಭೇಟಿಯಾಗಿದ್ದಾರೆ

ರಾಕೆಟ್ ಉಡಾವಣಾ ಸ್ಥಳದಲ್ಲಿ ಕಿಮ್ ಜಾಂಗ್ ಉನ್​​ರನ್ನು ಭೇಟಿಯಾದ ರಷ್ಯಾ ಅಧ್ಯಕ್ಷ ಪುಟಿನ್
ಕಿಮ್ ಜಾಂಗ್ ಉನ್​​-ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ
ಅಕ್ಷಯ್​ ಪಲ್ಲಮಜಲು​​
|

Updated on:Sep 13, 2023 | 10:49 AM

Share

ವ್ಲಾಡಿವೋಸ್ಟೋಕ್, ಸೆ.13 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  (Russian President Vladimir Putin) ಅವರು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ರಷ್ಯಾದ ಪೂರ್ವ ಭಾಗದಲ್ಲಿರುವ ಅತ್ಯಂತ ಆಧುನಿಕ ಬಾಹ್ಯಾಕಾಶ ರಾಕೆಟ್ ಉಡಾವಣಾ ಸ್ಥಳದಲ್ಲಿ ಇಂದು (ಸೆ.13) ಭೇಟಿಯಾಗಿದ್ದಾರೆ ಎಂದು ಟಾಸ್ ವರದಿ ಮಾಡಿದೆ. ಇದೀಗ ಉಭಯ ನಾಯಕ ಭೇಟಿಯು ವಿಶ್ವ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉತ್ತರ ಕೊರಿಯಾದ ನಾಯಕ ಕಿಮ್ ಜೊಂಗ್ ಉನ್ ಅವರು ರಷ್ಯಾದ ದೂರದ ಪೂರ್ವದಲ್ಲಿರುವ ಬಾಹ್ಯಾಕಾಶ ಕೇಂದ್ರದಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಯ ಹಿಂದೆ ಮಹತ್ವ ಹೆಜ್ಜೆಯೊಂದು ಇದೆ ಎಂದು ಹೇಳಲಾಗಿದೆ. ಉಕ್ರೇನ್ ಯುದ್ಧದ ಸಮಯದಲ್ಲಿ ರಷ್ಯಾ ಉತ್ತರ ಕೊರಿಯಾದ ಮಾಸ್ಕೋದ ಬಳಕೆಗಾಗಿ ಪ್ಯೊಂಗ್ಯಾಂಗ್ ಶಸ್ತ್ರಾಸ್ತ್ರಗಳನ್ನು ಪೂರೈಸುವ ಶಸ್ತ್ರಾಸ್ತ್ರ ಒಪ್ಪಂದವನ್ನು ಮಾಡಲಾಗಿತ್ತು. ಇದೀಗ ಇದಕ್ಕೆ ಬದಲಾಗಿ ರಷ್ಯಾ ಉತ್ತರ ಕೊರಿಯಾಕ್ಕೆ ಉಪಗ್ರಹ ಉಡಾವಣಾ ತಂತ್ರಜ್ಞಾನ ನೀಡುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು ಈ ಭೇಟಿಯ ವೇಳೆ ಇಬ್ಬರು ನಾಯಕರು ಪರಸ್ಪರ ಕೈಕುಲುಕಿದರು. ಜತೆಗೆ ಸ್ವಲ್ಪ ಸಮಯಗಳ ವರೆಗೆ ಸಂಕ್ಷಿಪ್ತವಾಗಿ ಮಾತಕತೆ ನಡೆಸಿದ್ದಾರೆ. ರಷ್ಯಾದ ಪೂರ್ವ ಬಾಹ್ಯಾಕಾಶ ಕೇಂದ್ರದಲ್ಲಿ ಈ ಭೇಟಿ ತುಂಬಾ ವಿಶೇಷವಾಗಿದೆ. ವರದಿಗಳ ಪ್ರಕಾರ ಉಕ್ರೇನ್‌ನ ಮೇಲೆ ರಷ್ಯಾ ಯುದ್ಧವನ್ನು ನಡೆಸಿದಾಗ, ಉತ್ತರ ಕೊರಿಯಾ ಮಾಸ್ಕೋದ ಯುದ್ಧ ಸಲಕರಣೆಗಳನ್ನು ಬಳಸಿಕೊಳ್ಳುತ್ತಿತ್ತು. ಇದೀಗ ಇದಕ್ಕೆ ಬದಲಾಗಿ ಉತ್ತರ ಕೊರಿಯಾ ರಷ್ಯಾದ ಉಪಗ್ರಹ ಉಡಾವಣಾ ತಂತ್ರಜ್ಞಾನವನ್ನು ತೆಗೆದುಕೊಳ್ಳವ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವ್ಲಾಡಿಮಿರ್ ಪುಟಿನ್‌ ಹತ್ಯೆಗೆ ಉಕ್ರೇನ್ ಯತ್ನ ನಡೆಸಿದೆ: ರಷ್ಯಾ ಆರೋಪ

ರಷ್ಯಾವು ಉಕ್ರೇನ್‌ನ ಮೇಲೆ ಸುಮಾರು 18 ತಿಂಗಳುಗಳಿಗಿಂತಲ್ಲೂ ಹೆಚ್ಚು ಕಾಲ ಯುದ್ಧ ನಡೆಸಿತ್ತು. ಈ ಸಂದರ್ಭದಲ್ಲಿ ಮಾಸ್ಕೋಗೆ ಹೊಸ ಮದ್ದುಗುಂಡುಗಳು ಮತ್ತು ಶೆಲ್‌ಗಳ ಅವಶ್ಯಕತೆಯಿತ್ತು, ಇದಕ್ಕಾಗಿ ರಷ್ಯಾ ಉತ್ತರ ಕೊರಿಯಾವನ್ನು ಆಶ್ರಯಿಸಿತ್ತು ಎಂದು ಹೇಳಲಾಗಿದೆ. ಆದರೆ ಉತ್ತರ ಕೊರಿಯಾವು ತನ್ನ ಪರಮಾಣು ಶಸ್ತ್ರಾಸ್ತ್ರಗಳ ಯೋಜನೆಯ ಮೇಲೆ ವರ್ಷಗಳ ಅಂತರರಾಷ್ಟ್ರೀಯ ನಿರ್ಬಂಧಗಳನ್ನು ಎದುರಿಸುತ್ತಿದೆ. ಅದಕ್ಕಾಗಿ ಇದೀಗ ಈ ಯೋಜನೆಗಳನ್ನು ಪೂರ್ಣಗೊಳಿಸಲು ರಷ್ಯಾದ ಸಹಾಯ ಬೇಕಾಗಿದೆ, ಅದಕ್ಕಾಗಿ ಈ ಮಹತ್ವ ಭೇಟಿಯನ್ನು ಮುಂದಿಟ್ಟಿದೆ.

ತನ್ನ ಪತ್ತೇದಾರಿ ಉಪಗ್ರಹವನ್ನು ಕಕ್ಷೆಗೆ ತಲುಪಿಸುವಲ್ಲಿ ವಿಫಲವಾಗಿರುವ ಉತ್ತರ ಕೊರಿಯಾಕ್ಕೆ ಇದೀಗ ಬಾಹ್ಯಾಕಾಶ ತಂತ್ರಜ್ಞಾನವೂ ತುಂಬಾ ಮುಖ್ಯವಾಗಿದೆ. ಈ ಕಾರಣಕ್ಕೆ ತನ್ನದೇ ಅಲ್ಪ-ಸ್ವಲ್ಪ ವಿಚಾರಧಾರೆಗಳನ್ನು ಹೊಂದಿರುವ ರಷ್ಯಾದ ಜತೆಗೆ ಮಹತ್ವ ಮಾತುಕತೆಯನ್ನು ನಡೆಸಲು ಮುಂದಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 13 September 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ