AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?

ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎನ್ನಲಾಗಿದೆ.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
TV9 Web
| Edited By: |

Updated on: May 02, 2022 | 12:34 PM

Share

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅನಾರೋಗ್ಯದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಹಬ್ಬಿವೆ. ಪುಟಿನ್​ ಆರೋಗ್ಯ ಸರಿಯಿಲ್ಲ, ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಬಗ್ಗೆ ದಿ ಡೈಲಿ ಮೇಲ್ ಸೇರಿ ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಲೇಇವೆ. ಈ ಮಧ್ಯೆ ಈಗ ವಿಯಾನ್​ ಮತ್ತೊಂದು ವರದಿ ಪ್ರಕಟಿಸಿದ್ದು, ಅದರಲ್ಲಿ ವ್ಲಾದಿಮಿರ್​ ಪುಟಿನ್​ ಕೆಲವೇ ದಿನಗಳಲ್ಲಿ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದೆ.  ವ್ಲಾದಿಮಿರ್ ಪುಟಿನ್​ ಕ್ಯಾನ್ಸರ್​ ಆಪರೇಶನ್​​ಗೆ ಒಳಗಾಗಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್​​ನಲ್ಲಿ ರಷ್ಯಾದ ಆಕ್ರಮಣದ ಪ್ರಮಾಣವೂ ಕಡಿಮೆಯಾಗಬಹುದು. ಕೆಲವು ದಿನಗಳ ಮಟ್ಟಿಗೆ ಉಕ್ರೇನ್​ ಮೇಲಿನ ಹಿಡಿತವನ್ನು ಸಡಿಲಿಸುವಂತೆ ಅವರು ರಷ್ಯಾ ಸೇನೆಗೆ ಆದೇಶ ಹೊರಡಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳಿಂದಲೇ ಮಾಹಿತಿ ಸಿಕ್ಕಿದ್ದಾಗಿ ವಿಯಾನ್ ಹೇಳಿದೆ.

ಪುಟಿನ್​ ಶಸ್ತ್ರಚಿಕಿತ್ಸೆಗೆ ಹೋದಾಕ್ಷಣ ಯುದ್ಧನಿಲ್ಲುವುದಿಲ್ಲ. ಆದರೆ ತೀವ್ರತೆ ಸ್ವಲ್ಪ ಕಡಿಮೆಯಾಗಬಬಹುದು. ಇನ್ನು ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎಂದೂ ಹೇಳಲಾಗಿದೆ.  ಪಟ್ರುಶೆವ್​​ಗೆ 70 ವರ್ಷ ವಯಸ್ಸಾಗಿದ್ದು, ಯುದ್ಧತಂತ್ರದ ವಾಸ್ತುಶಿಲ್ಪಿ ಎಂದೇ ಖ್ಯಾತರಾಗಿದ್ದಾರೆ.

ಪುಟಿನ್  ಹೊಟ್ಟೆಗೆ ಸಂಬಂಧಪಟ್ಟ ಕ್ಯಾನ್ಸರ್​​ನಿಂದ ಬಳಲುತ್ತಿದ್ದಾರೆ. ಹಾಗೇ, 18 ತಿಂಗಳಿಂದಲೂ ಅವರಿಗೆ ಪಾರ್ಕಿನ್​ಸನ್​ ಕಾಯಿಲೆ ಕಾಡುತ್ತಿದೆ ಎಂದು ಖ್ಯಾತ ಟೆಲಿಗ್ರಾಮ್​ ಚಾನೆಲ್​ ಜನರಲ್​ ಎಸ್​ವಿಆರ್​ ವರದಿ ಮಾಡಿದೆ.  ಇದನ್ನು ರಷ್ಯಾ ಸರ್ಕಾರದ ನಂಬಲರ್ಹ ಮೂಲಗಳೇ ತಿಳಿಸಿದ್ದಾಗಿಯೂ ಹೇಳಲಾಗಿದೆ.  ಪುಟಿನ್​ ಸರ್ಜರಿಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಆದರೆ ಎಷ್ಟಾಗತ್ತೋ ಅಷ್ಟು ಬೇಗ ಸರ್ಜರಿಗೆ ಒಳಗಾಗುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ಮೇ 9ರಂದು ರಷ್ಯಾ, ಎರಡನೇ ಯುದ್ಧದಲ್ಲಿ ಗೆಲುವು ಸಾಧಿಸಿದ ದಿನವನ್ನು, ರೆಡ್​ಸ್ಕ್ವೇರ್​​ನಲ್ಲಿ ಆಚರಿಸಲಿದೆ.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ