AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?

ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎನ್ನಲಾಗಿದೆ.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
TV9 Web
| Updated By: Lakshmi Hegde|

Updated on: May 02, 2022 | 12:34 PM

Share

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅನಾರೋಗ್ಯದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಹಬ್ಬಿವೆ. ಪುಟಿನ್​ ಆರೋಗ್ಯ ಸರಿಯಿಲ್ಲ, ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಬಗ್ಗೆ ದಿ ಡೈಲಿ ಮೇಲ್ ಸೇರಿ ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಲೇಇವೆ. ಈ ಮಧ್ಯೆ ಈಗ ವಿಯಾನ್​ ಮತ್ತೊಂದು ವರದಿ ಪ್ರಕಟಿಸಿದ್ದು, ಅದರಲ್ಲಿ ವ್ಲಾದಿಮಿರ್​ ಪುಟಿನ್​ ಕೆಲವೇ ದಿನಗಳಲ್ಲಿ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದೆ.  ವ್ಲಾದಿಮಿರ್ ಪುಟಿನ್​ ಕ್ಯಾನ್ಸರ್​ ಆಪರೇಶನ್​​ಗೆ ಒಳಗಾಗಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್​​ನಲ್ಲಿ ರಷ್ಯಾದ ಆಕ್ರಮಣದ ಪ್ರಮಾಣವೂ ಕಡಿಮೆಯಾಗಬಹುದು. ಕೆಲವು ದಿನಗಳ ಮಟ್ಟಿಗೆ ಉಕ್ರೇನ್​ ಮೇಲಿನ ಹಿಡಿತವನ್ನು ಸಡಿಲಿಸುವಂತೆ ಅವರು ರಷ್ಯಾ ಸೇನೆಗೆ ಆದೇಶ ಹೊರಡಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳಿಂದಲೇ ಮಾಹಿತಿ ಸಿಕ್ಕಿದ್ದಾಗಿ ವಿಯಾನ್ ಹೇಳಿದೆ.

ಪುಟಿನ್​ ಶಸ್ತ್ರಚಿಕಿತ್ಸೆಗೆ ಹೋದಾಕ್ಷಣ ಯುದ್ಧನಿಲ್ಲುವುದಿಲ್ಲ. ಆದರೆ ತೀವ್ರತೆ ಸ್ವಲ್ಪ ಕಡಿಮೆಯಾಗಬಬಹುದು. ಇನ್ನು ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎಂದೂ ಹೇಳಲಾಗಿದೆ.  ಪಟ್ರುಶೆವ್​​ಗೆ 70 ವರ್ಷ ವಯಸ್ಸಾಗಿದ್ದು, ಯುದ್ಧತಂತ್ರದ ವಾಸ್ತುಶಿಲ್ಪಿ ಎಂದೇ ಖ್ಯಾತರಾಗಿದ್ದಾರೆ.

ಪುಟಿನ್  ಹೊಟ್ಟೆಗೆ ಸಂಬಂಧಪಟ್ಟ ಕ್ಯಾನ್ಸರ್​​ನಿಂದ ಬಳಲುತ್ತಿದ್ದಾರೆ. ಹಾಗೇ, 18 ತಿಂಗಳಿಂದಲೂ ಅವರಿಗೆ ಪಾರ್ಕಿನ್​ಸನ್​ ಕಾಯಿಲೆ ಕಾಡುತ್ತಿದೆ ಎಂದು ಖ್ಯಾತ ಟೆಲಿಗ್ರಾಮ್​ ಚಾನೆಲ್​ ಜನರಲ್​ ಎಸ್​ವಿಆರ್​ ವರದಿ ಮಾಡಿದೆ.  ಇದನ್ನು ರಷ್ಯಾ ಸರ್ಕಾರದ ನಂಬಲರ್ಹ ಮೂಲಗಳೇ ತಿಳಿಸಿದ್ದಾಗಿಯೂ ಹೇಳಲಾಗಿದೆ.  ಪುಟಿನ್​ ಸರ್ಜರಿಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಆದರೆ ಎಷ್ಟಾಗತ್ತೋ ಅಷ್ಟು ಬೇಗ ಸರ್ಜರಿಗೆ ಒಳಗಾಗುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ಮೇ 9ರಂದು ರಷ್ಯಾ, ಎರಡನೇ ಯುದ್ಧದಲ್ಲಿ ಗೆಲುವು ಸಾಧಿಸಿದ ದಿನವನ್ನು, ರೆಡ್​ಸ್ಕ್ವೇರ್​​ನಲ್ಲಿ ಆಚರಿಸಲಿದೆ.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ