ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?

ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎನ್ನಲಾಗಿದೆ.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
Follow us
| Updated By: Lakshmi Hegde

Updated on: May 02, 2022 | 12:34 PM

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅನಾರೋಗ್ಯದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಹಬ್ಬಿವೆ. ಪುಟಿನ್​ ಆರೋಗ್ಯ ಸರಿಯಿಲ್ಲ, ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಬಗ್ಗೆ ದಿ ಡೈಲಿ ಮೇಲ್ ಸೇರಿ ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಲೇಇವೆ. ಈ ಮಧ್ಯೆ ಈಗ ವಿಯಾನ್​ ಮತ್ತೊಂದು ವರದಿ ಪ್ರಕಟಿಸಿದ್ದು, ಅದರಲ್ಲಿ ವ್ಲಾದಿಮಿರ್​ ಪುಟಿನ್​ ಕೆಲವೇ ದಿನಗಳಲ್ಲಿ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದೆ.  ವ್ಲಾದಿಮಿರ್ ಪುಟಿನ್​ ಕ್ಯಾನ್ಸರ್​ ಆಪರೇಶನ್​​ಗೆ ಒಳಗಾಗಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್​​ನಲ್ಲಿ ರಷ್ಯಾದ ಆಕ್ರಮಣದ ಪ್ರಮಾಣವೂ ಕಡಿಮೆಯಾಗಬಹುದು. ಕೆಲವು ದಿನಗಳ ಮಟ್ಟಿಗೆ ಉಕ್ರೇನ್​ ಮೇಲಿನ ಹಿಡಿತವನ್ನು ಸಡಿಲಿಸುವಂತೆ ಅವರು ರಷ್ಯಾ ಸೇನೆಗೆ ಆದೇಶ ಹೊರಡಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳಿಂದಲೇ ಮಾಹಿತಿ ಸಿಕ್ಕಿದ್ದಾಗಿ ವಿಯಾನ್ ಹೇಳಿದೆ.

ಪುಟಿನ್​ ಶಸ್ತ್ರಚಿಕಿತ್ಸೆಗೆ ಹೋದಾಕ್ಷಣ ಯುದ್ಧನಿಲ್ಲುವುದಿಲ್ಲ. ಆದರೆ ತೀವ್ರತೆ ಸ್ವಲ್ಪ ಕಡಿಮೆಯಾಗಬಬಹುದು. ಇನ್ನು ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎಂದೂ ಹೇಳಲಾಗಿದೆ.  ಪಟ್ರುಶೆವ್​​ಗೆ 70 ವರ್ಷ ವಯಸ್ಸಾಗಿದ್ದು, ಯುದ್ಧತಂತ್ರದ ವಾಸ್ತುಶಿಲ್ಪಿ ಎಂದೇ ಖ್ಯಾತರಾಗಿದ್ದಾರೆ.

ಪುಟಿನ್  ಹೊಟ್ಟೆಗೆ ಸಂಬಂಧಪಟ್ಟ ಕ್ಯಾನ್ಸರ್​​ನಿಂದ ಬಳಲುತ್ತಿದ್ದಾರೆ. ಹಾಗೇ, 18 ತಿಂಗಳಿಂದಲೂ ಅವರಿಗೆ ಪಾರ್ಕಿನ್​ಸನ್​ ಕಾಯಿಲೆ ಕಾಡುತ್ತಿದೆ ಎಂದು ಖ್ಯಾತ ಟೆಲಿಗ್ರಾಮ್​ ಚಾನೆಲ್​ ಜನರಲ್​ ಎಸ್​ವಿಆರ್​ ವರದಿ ಮಾಡಿದೆ.  ಇದನ್ನು ರಷ್ಯಾ ಸರ್ಕಾರದ ನಂಬಲರ್ಹ ಮೂಲಗಳೇ ತಿಳಿಸಿದ್ದಾಗಿಯೂ ಹೇಳಲಾಗಿದೆ.  ಪುಟಿನ್​ ಸರ್ಜರಿಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಆದರೆ ಎಷ್ಟಾಗತ್ತೋ ಅಷ್ಟು ಬೇಗ ಸರ್ಜರಿಗೆ ಒಳಗಾಗುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ಮೇ 9ರಂದು ರಷ್ಯಾ, ಎರಡನೇ ಯುದ್ಧದಲ್ಲಿ ಗೆಲುವು ಸಾಧಿಸಿದ ದಿನವನ್ನು, ರೆಡ್​ಸ್ಕ್ವೇರ್​​ನಲ್ಲಿ ಆಚರಿಸಲಿದೆ.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ