AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?

ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎನ್ನಲಾಗಿದೆ.

ಶೀಘ್ರದಲ್ಲೇ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರಂತೆ ರಷ್ಯಾ ಅಧ್ಯಕ್ಷ ಪುಟಿನ್​; ಉಕ್ರೇನ್​ ಯುದ್ಧ ಮುನ್ನಡೆಸುವ ಹೊಣೆ ಯಾರಿಗೆ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
TV9 Web
| Edited By: |

Updated on: May 02, 2022 | 12:34 PM

Share

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅನಾರೋಗ್ಯದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಹಬ್ಬಿವೆ. ಪುಟಿನ್​ ಆರೋಗ್ಯ ಸರಿಯಿಲ್ಲ, ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಬಗ್ಗೆ ದಿ ಡೈಲಿ ಮೇಲ್ ಸೇರಿ ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡುತ್ತಲೇಇವೆ. ಈ ಮಧ್ಯೆ ಈಗ ವಿಯಾನ್​ ಮತ್ತೊಂದು ವರದಿ ಪ್ರಕಟಿಸಿದ್ದು, ಅದರಲ್ಲಿ ವ್ಲಾದಿಮಿರ್​ ಪುಟಿನ್​ ಕೆಲವೇ ದಿನಗಳಲ್ಲಿ ಕ್ಯಾನ್ಸರ್​ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದೆ.  ವ್ಲಾದಿಮಿರ್ ಪುಟಿನ್​ ಕ್ಯಾನ್ಸರ್​ ಆಪರೇಶನ್​​ಗೆ ಒಳಗಾಗಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್​​ನಲ್ಲಿ ರಷ್ಯಾದ ಆಕ್ರಮಣದ ಪ್ರಮಾಣವೂ ಕಡಿಮೆಯಾಗಬಹುದು. ಕೆಲವು ದಿನಗಳ ಮಟ್ಟಿಗೆ ಉಕ್ರೇನ್​ ಮೇಲಿನ ಹಿಡಿತವನ್ನು ಸಡಿಲಿಸುವಂತೆ ಅವರು ರಷ್ಯಾ ಸೇನೆಗೆ ಆದೇಶ ಹೊರಡಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳಿಂದಲೇ ಮಾಹಿತಿ ಸಿಕ್ಕಿದ್ದಾಗಿ ವಿಯಾನ್ ಹೇಳಿದೆ.

ಪುಟಿನ್​ ಶಸ್ತ್ರಚಿಕಿತ್ಸೆಗೆ ಹೋದಾಕ್ಷಣ ಯುದ್ಧನಿಲ್ಲುವುದಿಲ್ಲ. ಆದರೆ ತೀವ್ರತೆ ಸ್ವಲ್ಪ ಕಡಿಮೆಯಾಗಬಬಹುದು. ಇನ್ನು ತಾವು ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ, ಉಕ್ರೇನ್​ನಲ್ಲಿ ನಡೆಯುತ್ತಿರುವ ಯುದ್ಧವನ್ನು ಮುನ್ನಡೆಸುವ ಹೊಣೆಯನ್ನು ಪುಟಿನ್​ ಅವರು ರಷ್ಯಾದ ಭದ್ರತಾ ಮಂಡಳಿ ಮುಖ್ಯಸ್ಥ, ಮಾಜಿ ಎಫ್​ಎಸ್​ಬಿ ಕಮಾಂಡರ್​ ನಿಕೊಲಾಯ್ ಪಟ್ರುಶೆವ್ ಅವರಿಗೆ ವಹಿಸಲಿದ್ದಾರೆ ಎಂದೂ ಹೇಳಲಾಗಿದೆ.  ಪಟ್ರುಶೆವ್​​ಗೆ 70 ವರ್ಷ ವಯಸ್ಸಾಗಿದ್ದು, ಯುದ್ಧತಂತ್ರದ ವಾಸ್ತುಶಿಲ್ಪಿ ಎಂದೇ ಖ್ಯಾತರಾಗಿದ್ದಾರೆ.

ಪುಟಿನ್  ಹೊಟ್ಟೆಗೆ ಸಂಬಂಧಪಟ್ಟ ಕ್ಯಾನ್ಸರ್​​ನಿಂದ ಬಳಲುತ್ತಿದ್ದಾರೆ. ಹಾಗೇ, 18 ತಿಂಗಳಿಂದಲೂ ಅವರಿಗೆ ಪಾರ್ಕಿನ್​ಸನ್​ ಕಾಯಿಲೆ ಕಾಡುತ್ತಿದೆ ಎಂದು ಖ್ಯಾತ ಟೆಲಿಗ್ರಾಮ್​ ಚಾನೆಲ್​ ಜನರಲ್​ ಎಸ್​ವಿಆರ್​ ವರದಿ ಮಾಡಿದೆ.  ಇದನ್ನು ರಷ್ಯಾ ಸರ್ಕಾರದ ನಂಬಲರ್ಹ ಮೂಲಗಳೇ ತಿಳಿಸಿದ್ದಾಗಿಯೂ ಹೇಳಲಾಗಿದೆ.  ಪುಟಿನ್​ ಸರ್ಜರಿಯನ್ನು ಮುಂದೂಡುತ್ತಲೇ ಬಂದಿದ್ದಾರೆ. ಆದರೆ ಎಷ್ಟಾಗತ್ತೋ ಅಷ್ಟು ಬೇಗ ಸರ್ಜರಿಗೆ ಒಳಗಾಗುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ಮೇ 9ರಂದು ರಷ್ಯಾ, ಎರಡನೇ ಯುದ್ಧದಲ್ಲಿ ಗೆಲುವು ಸಾಧಿಸಿದ ದಿನವನ್ನು, ರೆಡ್​ಸ್ಕ್ವೇರ್​​ನಲ್ಲಿ ಆಚರಿಸಲಿದೆ.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​