AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬೀರಿಯಾ ಕಾಡಿನಲ್ಲಿ ರಷ್ಯಾ ಅಧ್ಯಕ್ಷ; ಮೀನು ಹಿಡಿದು, ಗುಡ್ಡ ಹತ್ತಿದ ವ್ಲಾದಿಮಿರ್​ ಪುತಿನ್​

ವ್ಲಾದಿಮಿರ್​ ಪುತಿನ್​ ಅವರು ವಿಭಿನ್ನ ಉಡುಗೆಯನ್ನು ಧರಿಸಿ ಹುಲ್ಲುಗಾವಲುಗಳ ಮೇಲೆ ಕಾಲ್ನಡಿಗೆಯಲ್ಲಿ ಓಡಾಡಿದ್ದಾರೆ. ಮರಕ್ಕೆ ಆತುನಿಂತು ಪೋಸ್​ ಕೊಟ್ಟಿದ್ದಾರೆ. 

ಸೈಬೀರಿಯಾ ಕಾಡಿನಲ್ಲಿ ರಷ್ಯಾ ಅಧ್ಯಕ್ಷ; ಮೀನು ಹಿಡಿದು, ಗುಡ್ಡ ಹತ್ತಿದ ವ್ಲಾದಿಮಿರ್​ ಪುತಿನ್​
ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುತಿನ್​
TV9 Web
| Edited By: |

Updated on:Sep 26, 2021 | 4:41 PM

Share

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುತಿನ್ (Vladimir Putin) ಸೆಪ್ಟೆಂಬರ್​ ಪ್ರಾರಂಭದಲ್ಲಿ ಸೈಬೀರಿಯಾದಲ್ಲಿ ತುಂಬ ಜಾಲಿಯಾಗಿ ದಿನ ಕಳೆದಿದ್ದಾರೆ. ಬೆಟ್ಟ-ಗುಡ್ಡ ಹತ್ತಿ, ಹೊಳೆಯಲ್ಲಿ ಇಳಿದು ನಡೆದಾಡಿದ್ದಾರೆ. ಮೀನು ಹಿಡಿದಿದ್ದಾರೆ. ವ್ಲಾದಿಮಿರ್​ ಪುತಿನ್​ರ ಈ ವಿಶೇಷ ಕ್ಷಣಗಳ ಫೋಟೋವನ್ನು ರಷ್ಯಾ ಸರ್ಕಾರ ಇದೀಗ ಬಿಡುಗಡೆ ಮಾಡಿದೆ.  ರಷ್ಯಾ ಸರ್ಕಾರದ ವೆಬ್​ಸೈಟ್​​ನಲ್ಲಿ ಒಟ್ಟು 20 ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ಅಧ್ಯಕ್ಷ ವ್ಲಾದಿಮಿರ್​ ಪುತಿನ್​ ಅವರು ಕೆಲ ಕಾಲ ತಮ್ಮ ಸರ್ಕಾರಿ ಕೆಲಸಗಳಿಂದ ಬಿಡುವು ಪಡೆದು, ಸೈಬೀರಿಯಾದ ಅಪರಿಚಿತ ಸ್ಥಳದಲ್ಲಿ ಸಮಯ ಕಳೆದಿದ್ದಾರೆ ಎಂದು ಹೇಳಿದೆ. 

ಸೆಪ್ಟೆಂಬರ್​ ಪ್ರಾರಂಭದಲ್ಲಿ ವ್ಲಾದಿಮಿರ್​ ಪುತಿನ್​ ಅವರ ಸುತ್ತಲಿನ ಹಲವು ಜನರಲ್ಲಿ ಕೊವಿಡ್​ 19 ಕಾಣಿಸಿಕೊಂಡಿದ್ದರಿಂದ ಅವರೂ ಕೂಡ ಐಸೋಲೇಟ್​ ಆಗಬೇಕಾಗಿತ್ತು. ತಜಕಿಸ್ತಾನದ ಪ್ರವಾಸವನ್ನೂ ರದ್ದುಗೊಳಿಸಲಾಗಿತ್ತು. ಹೀಗೆ ಐಸೋಲೇಟ್​ ಆಗಬೇಕಾದ ಸಂದರ್ಭವನ್ನು ಪುತಿನ್ ಸೈಬೀರಿಯಾದ ಸುಂದರ ಜಾಗದಲ್ಲಿ ಕಳೆದಿದ್ದಾರೆ.  ಸದಾ ರಾಜಕೀಯ ಕೆಲಸದಲ್ಲಿ ತೊಡಗಿಕೊಳ್ಳುವ ಅಧ್ಯಕ್ಷರು, ಇದೀಗ ವಿಭಿನ್ನ ಉಡುಗೆಯನ್ನು ಧರಿಸಿ ಹುಲ್ಲುಗಾವಲುಗಳ ಮೇಲೆ ಕಾಲ್ನಡಿಗೆಯಲ್ಲಿ ಓಡಾಡಿದ್ದಾರೆ. ಮರಕ್ಕೆ ಆತುನಿಂತು ಪೋಸ್​ ಕೊಟ್ಟಿದ್ದಾರೆ.

ಈ ಹಿಂದೆ ರಷ್ಯಾ ಅಧ್ಯಕ್ಷರು ಶರ್ಟ್​ ಹಾಕದೆ, ಸನ್​ಗ್ಲಾಸ್ ಹಾಕಿಕೊಂಡಿರುವ ಫೋಟೋ ಕೂಡ ವೈರಲ್ ಆಗಿತ್ತು. ರೈಫಲ್​ ಹಿಡಿದ, ಫೈಟರ್​ ಜೆಟ್​​ನ ಪೈಲಟ್​ ಸ್ಥಳದಲ್ಲಿ ಕುಳಿತ ಫೋಟೋಗಳೂ ಕೂಡ ಆಕರ್ಷಿಸಿದ್ದವು. ವ್ಲಾದಿಮಿರ್​ ಪುತಿನ್​ಗೆ 68 ವರ್ಷ ವಯಸ್ಸಾಗಿದ್ದು, ಸ್ಪುಟ್ನಿಕ್​ ವಿ ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿದ್ದಾರೆ. ಅವರೀಗ ಆರೋಗ್ಯವಾಗಿದ್ದಾರೆ ಎಂದು ರಷ್ಯಾ ಅಧ್ಯಕ್ಷರ ಕಚೇರಿ ತಿಳಿಸಿದೆ.

ಇದನ್ನೂ ಓದಿ: Viral Video: ಶಾಪಿಂಗ್​ಗೆಂದು 10 ನಿಮಿಷ ಜೀಪ್ ನಿಲ್ಲಿಸಿ ಹೋದ ವ್ಯಕ್ತಿ; ಮರಳಿದಾಗ ಎದುರುಗೊಂಡಿದ್ದು ಜೇನುನೊಣಗಳು!

ಮುಂದಕ್ಕೆ ಹೋಗುತ್ತಾ ‘ಕೋಟಿಗೊಬ್ಬ 3’ ರಿಲೀಸ್ ಡೇಟ್? ನಾಳೆ ಸುದೀಪ್ ಜತೆ ‘ಸಲಗ’ ನಿರ್ಮಾಪಕರ ಭೇಟಿ

(Russian President Vladimir Putin Fishing and Hiking In Siberia)

Published On - 4:39 pm, Sun, 26 September 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ