AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ; ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​

ಉಕ್ರೇನ್​ ಮೇಲೆ ಸೇನಾ ಕಾರ್ಯಾಚರಣೆ ಘೋಷಿಸಿದ ಪುತಿನ್​ ನಿರ್ಧಾರವನ್ನು ಯುಎಸ್​ ಅಧ್ಯಕ್ಷ ಜೋ ಬೈಡನ್​ ಖಂಡಿಸಿದ್ದಾರೆ. ಈ ದಾಳಿಯಿಂದ ಉಂಟಾಗುವ ಸಾವು, ಹಾನಿ, ವಿನಾಶಗಳಿಗೆ ರಷ್ಯಾ ಮಾತ್ರ ಹೊಣೆಗಾರನಾಗಿರುತ್ತದೆ ಎಂದಿದ್ದಾರೆ.

Russia Ukraine War: ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ; ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
TV9 Web
| Updated By: Lakshmi Hegde|

Updated on:Feb 24, 2022 | 1:24 PM

Share

ನಮಗೆ ಉಕ್ರೇನ್​ ಮೇಲೆ ಯುದ್ಧ ಸಾರುವ ಇರಾದೆಯಿಲ್ಲ ಎಂದು ಹೇಳುತ್ತಲೇ ಬಂದಿದ್ದ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ (Vladimir Putin)​ ಇಂದು ಉಕ್ರೇನ್​ ವಿರುದ್ಧ ಸೇನಾ ಕಾರ್ಯಾಚರಣೆ ಘೋಷಿಸಿದ್ದಾರೆ. ಟಿವಿ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್​ ಮೇಲೆ ಆಕ್ರಮಣಕ್ಕೆ ಆದೇಶ ನೀಡಿದ್ದಾರೆ. ಉಕ್ರೇನ್ (Ukraine)​ ಮೇಲೆ ಸೇನಾ ಕಾರ್ಯಾಚರಣೆ ನಡೆಸಲಾಗುವುದು. ಹಾಗಂತ ಮಾಸ್ಕೋ ಉಕ್ರೇನ್​ನ್ನು ಅತಿಕ್ರಮಣ ಮಾಡಿಕೊಳ್ಳಲು ಪ್ರಯತ್ನ ಮಾಡುವುದಿಲ್ಲ. ಗಡಿಯಲ್ಲಿ ಉಕ್ರೇನ್​ ನಿಯೋಜಿಸಿರುವ ಸೈನ್ಯವನ್ನು ಹಿಂಪಡೆಯುವಂತೆ ಮಾಡಲು ಮತ್ತು ಉಕ್ರೇನ್​ನಿಂದ ನಮ್ಮ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ತಡೆಯುವುದಕ್ಕೋಸ್ಕರ ಈ ಕಾರ್ಯಾಚರಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಉಕ್ರೇನಿಯನ್​ ಸೇನಾಪಡೆಗಳು ಶಸ್ತ್ರಗಳನ್ನು ತ್ಯಜಿಸಿ ಕೂಡಲೇ ವಾಪಸ್​ ಹೋಗದೆ ಇದ್ದರೆ, ರಷ್ಯಾ ಮತ್ತು ಉಕ್ರೇನ್​​ ನಡುವೆ ಘರ್ಷಣೆ ಅನಿವಾರ್ಯವಾಗಲಿದೆ ಎಂದು ಪುತಿನ್ ಹೇಳಿದ್ದಾರೆ. ಹಾಗೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​ ಉಕ್ರೇನ್​ ಮೇಲೆ ಸೇನಾ ಕಾರ್ಯಾಚರಣೆ ಘೋಷಣೆ ಮಾಡುತ್ತಿದ್ದಂತೆ ಅತ್ತ ಉಕ್ರೇನ್​​ನ ಕೈವ್ ಮತ್ತು ಖಾರ್ಕಿವ್ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಬಂದಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗುವಂತಾಯ್ತು ಎಂದು ವರದಿಯಾಗಿದೆ.

ಇನ್ನು ಪುತಿನ್​ ಯುಎಸ್​ ಮತ್ತು ಮೈತ್ರಿ ರಾಷ್ಟ್ರಗಳಿಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಉಕ್ರೇನ್​​ನ್ನು ನ್ಯಾಟೋ (ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ (North Atlantic Treaty Organization- NATO )ಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಮಾಸ್ಕೋ ಭದ್ರತಾ ಖಾತರಿ ಭರವಸೆ ನೀಡಬೇಕು ಎಂಬ ರಷ್ಯಾದ ಮನವಿಯನ್ನು ಯುಎಸ್​ ಮತ್ತು ಇತರ ಮೈತ್ರಿ ರಾಷ್ಟ್ರಗಳು ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ, ಹಾಗೇ, ರಷ್ಯಾ-ಉಕ್ರೇನ್​ ಮಧ್ಯೆ ಹೊರಗಿನವರು ಯಾರೇ ಹಸ್ತಕ್ಷೇಪ ಮಾಡಿದರೂ ನಾವು ಸುಮ್ಮನಿರುವುದಿಲ್ಲ. ಇತಹಾಸ ಕಂಡರಿಯದ ಪರಿಣಾಮವನ್ನು ಅವರು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಯುಎಸ್​ ಪ್ರತಿಕ್ರಿಯೆ: ಉಕ್ರೇನ್​ ಮೇಲೆ ಸೇನಾ ಕಾರ್ಯಾಚರಣೆ ಘೋಷಿಸಿದ ಪುತಿನ್​ ನಿರ್ಧಾರವನ್ನು ಯುಎಸ್​ ಅಧ್ಯಕ್ಷ ಜೋ ಬೈಡನ್​ ಖಂಡಿಸಿದ್ದಾರೆ. ಈ ದಾಳಿಯಿಂದ ಉಂಟಾಗುವ ಸಾವು, ಹಾನಿ, ವಿನಾಶಗಳಿಗೆ ರಷ್ಯಾ ಮಾತ್ರ ಹೊಣೆಗಾರನಾಗಿರುತ್ತದೆ. ಯುಎಸ್ ಹಾಗೂ ಅದರ ಮೈತ್ರಿ ರಾಷ್ಟ್ರಗಳು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕವಾಗಿ ವರ್ತಿಸುತ್ತಿವೆ.  ಯುದ್ಧ ನಡೆದರೆ ಅದರ ಸಂಪೂರ್ಣ ಹೊಣೆ ರಷ್ಯಾದ್ದೇ ಆಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಇಡೀ ವಿಶ್ವದ ಜನರ ಪ್ರಾರ್ಥನೆ ಉಕ್ರೇನ್​ನೊಂದಿಗೆ ಇದೆ. ಉಕ್ರೇನ್​ ಜನರು ರಷ್ಯಾ ಸೇನಾ ಪಡೆಗಳಿಂದ ಅಪ್ರಚೋದಿತ ಮತ್ತು ಅನ್ಯಾಯಯುತ ದಾಳಿಗೆ ಒಳಗಾಗುತ್ತಿದ್ದಾರೆ.   ಪುತಿನ್​ ಕೊನೆಗೂ ಯುದ್ಧದ ದಾರಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇದು ಪೂರ್ವ ಯೋಜಿತವಾಗಿದೆ. ಈ ಯುದ್ಧ ಖಂಡಿತವಾಗಿಯೂ ಜೀವ ಹಾನಿ ಉಂಟು ಮಾಡುತ್ತದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಆಹಾರವನ್ನು ನುಂಗಲು ತೊಂದರೆಯಾಗುವುದು ಕೂಡ ಶ್ವಾಸಕೋಶದ ಕ್ಯಾನ್ಸರ್​ ಲಕ್ಷಣವಾಗಿರಬಹುದು; ಇಲ್ಲಿದೆ ತಜ್ಞರ ಸಲಹೆ

Published On - 9:22 am, Thu, 24 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?