AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ; ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​

ಉಕ್ರೇನ್​ ಮೇಲೆ ಸೇನಾ ಕಾರ್ಯಾಚರಣೆ ಘೋಷಿಸಿದ ಪುತಿನ್​ ನಿರ್ಧಾರವನ್ನು ಯುಎಸ್​ ಅಧ್ಯಕ್ಷ ಜೋ ಬೈಡನ್​ ಖಂಡಿಸಿದ್ದಾರೆ. ಈ ದಾಳಿಯಿಂದ ಉಂಟಾಗುವ ಸಾವು, ಹಾನಿ, ವಿನಾಶಗಳಿಗೆ ರಷ್ಯಾ ಮಾತ್ರ ಹೊಣೆಗಾರನಾಗಿರುತ್ತದೆ ಎಂದಿದ್ದಾರೆ.

Russia Ukraine War: ಉಕ್ರೇನ್​ ವಿರುದ್ಧ ಸಮರ ಸಾರಿದ ರಷ್ಯಾ; ಸೇನಾ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
TV9 Web
| Edited By: |

Updated on:Feb 24, 2022 | 1:24 PM

Share

ನಮಗೆ ಉಕ್ರೇನ್​ ಮೇಲೆ ಯುದ್ಧ ಸಾರುವ ಇರಾದೆಯಿಲ್ಲ ಎಂದು ಹೇಳುತ್ತಲೇ ಬಂದಿದ್ದ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ (Vladimir Putin)​ ಇಂದು ಉಕ್ರೇನ್​ ವಿರುದ್ಧ ಸೇನಾ ಕಾರ್ಯಾಚರಣೆ ಘೋಷಿಸಿದ್ದಾರೆ. ಟಿವಿ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್​ ಮೇಲೆ ಆಕ್ರಮಣಕ್ಕೆ ಆದೇಶ ನೀಡಿದ್ದಾರೆ. ಉಕ್ರೇನ್ (Ukraine)​ ಮೇಲೆ ಸೇನಾ ಕಾರ್ಯಾಚರಣೆ ನಡೆಸಲಾಗುವುದು. ಹಾಗಂತ ಮಾಸ್ಕೋ ಉಕ್ರೇನ್​ನ್ನು ಅತಿಕ್ರಮಣ ಮಾಡಿಕೊಳ್ಳಲು ಪ್ರಯತ್ನ ಮಾಡುವುದಿಲ್ಲ. ಗಡಿಯಲ್ಲಿ ಉಕ್ರೇನ್​ ನಿಯೋಜಿಸಿರುವ ಸೈನ್ಯವನ್ನು ಹಿಂಪಡೆಯುವಂತೆ ಮಾಡಲು ಮತ್ತು ಉಕ್ರೇನ್​ನಿಂದ ನಮ್ಮ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ತಡೆಯುವುದಕ್ಕೋಸ್ಕರ ಈ ಕಾರ್ಯಾಚರಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಉಕ್ರೇನಿಯನ್​ ಸೇನಾಪಡೆಗಳು ಶಸ್ತ್ರಗಳನ್ನು ತ್ಯಜಿಸಿ ಕೂಡಲೇ ವಾಪಸ್​ ಹೋಗದೆ ಇದ್ದರೆ, ರಷ್ಯಾ ಮತ್ತು ಉಕ್ರೇನ್​​ ನಡುವೆ ಘರ್ಷಣೆ ಅನಿವಾರ್ಯವಾಗಲಿದೆ ಎಂದು ಪುತಿನ್ ಹೇಳಿದ್ದಾರೆ. ಹಾಗೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುತಿನ್​ ಉಕ್ರೇನ್​ ಮೇಲೆ ಸೇನಾ ಕಾರ್ಯಾಚರಣೆ ಘೋಷಣೆ ಮಾಡುತ್ತಿದ್ದಂತೆ ಅತ್ತ ಉಕ್ರೇನ್​​ನ ಕೈವ್ ಮತ್ತು ಖಾರ್ಕಿವ್ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಬಂದಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗುವಂತಾಯ್ತು ಎಂದು ವರದಿಯಾಗಿದೆ.

ಇನ್ನು ಪುತಿನ್​ ಯುಎಸ್​ ಮತ್ತು ಮೈತ್ರಿ ರಾಷ್ಟ್ರಗಳಿಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಉಕ್ರೇನ್​​ನ್ನು ನ್ಯಾಟೋ (ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ (North Atlantic Treaty Organization- NATO )ಕ್ಕೆ ಸೇರ್ಪಡೆಗೊಳಿಸಬಾರದು ಮತ್ತು ಮಾಸ್ಕೋ ಭದ್ರತಾ ಖಾತರಿ ಭರವಸೆ ನೀಡಬೇಕು ಎಂಬ ರಷ್ಯಾದ ಮನವಿಯನ್ನು ಯುಎಸ್​ ಮತ್ತು ಇತರ ಮೈತ್ರಿ ರಾಷ್ಟ್ರಗಳು ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ, ಹಾಗೇ, ರಷ್ಯಾ-ಉಕ್ರೇನ್​ ಮಧ್ಯೆ ಹೊರಗಿನವರು ಯಾರೇ ಹಸ್ತಕ್ಷೇಪ ಮಾಡಿದರೂ ನಾವು ಸುಮ್ಮನಿರುವುದಿಲ್ಲ. ಇತಹಾಸ ಕಂಡರಿಯದ ಪರಿಣಾಮವನ್ನು ಅವರು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಯುಎಸ್​ ಪ್ರತಿಕ್ರಿಯೆ: ಉಕ್ರೇನ್​ ಮೇಲೆ ಸೇನಾ ಕಾರ್ಯಾಚರಣೆ ಘೋಷಿಸಿದ ಪುತಿನ್​ ನಿರ್ಧಾರವನ್ನು ಯುಎಸ್​ ಅಧ್ಯಕ್ಷ ಜೋ ಬೈಡನ್​ ಖಂಡಿಸಿದ್ದಾರೆ. ಈ ದಾಳಿಯಿಂದ ಉಂಟಾಗುವ ಸಾವು, ಹಾನಿ, ವಿನಾಶಗಳಿಗೆ ರಷ್ಯಾ ಮಾತ್ರ ಹೊಣೆಗಾರನಾಗಿರುತ್ತದೆ. ಯುಎಸ್ ಹಾಗೂ ಅದರ ಮೈತ್ರಿ ರಾಷ್ಟ್ರಗಳು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕವಾಗಿ ವರ್ತಿಸುತ್ತಿವೆ.  ಯುದ್ಧ ನಡೆದರೆ ಅದರ ಸಂಪೂರ್ಣ ಹೊಣೆ ರಷ್ಯಾದ್ದೇ ಆಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಇಡೀ ವಿಶ್ವದ ಜನರ ಪ್ರಾರ್ಥನೆ ಉಕ್ರೇನ್​ನೊಂದಿಗೆ ಇದೆ. ಉಕ್ರೇನ್​ ಜನರು ರಷ್ಯಾ ಸೇನಾ ಪಡೆಗಳಿಂದ ಅಪ್ರಚೋದಿತ ಮತ್ತು ಅನ್ಯಾಯಯುತ ದಾಳಿಗೆ ಒಳಗಾಗುತ್ತಿದ್ದಾರೆ.   ಪುತಿನ್​ ಕೊನೆಗೂ ಯುದ್ಧದ ದಾರಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇದು ಪೂರ್ವ ಯೋಜಿತವಾಗಿದೆ. ಈ ಯುದ್ಧ ಖಂಡಿತವಾಗಿಯೂ ಜೀವ ಹಾನಿ ಉಂಟು ಮಾಡುತ್ತದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಆಹಾರವನ್ನು ನುಂಗಲು ತೊಂದರೆಯಾಗುವುದು ಕೂಡ ಶ್ವಾಸಕೋಶದ ಕ್ಯಾನ್ಸರ್​ ಲಕ್ಷಣವಾಗಿರಬಹುದು; ಇಲ್ಲಿದೆ ತಜ್ಞರ ಸಲಹೆ

Published On - 9:22 am, Thu, 24 February 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?