Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯ ‘ಭಾರತ ಮೊದಲು’, ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶ್ಲಾಘನೆ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಉತ್ಪಾದನೆಯನ್ನು ಉತ್ತೇಜಿಸುವ ಮತ್ತು ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ಹೊಂದಿರುವ "ಮೇಕ್ ಇನ್ ಇಂಡಿಯಾ" ಉಪಕ್ರಮವು ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಸ್ಥಾನವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದಾರೆ.

ಪ್ರಧಾನಿ ಮೋದಿಯ 'ಭಾರತ ಮೊದಲು', 'ಮೇಕ್ ಇನ್ ಇಂಡಿಯಾ' ಉಪಕ್ರಮಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶ್ಲಾಘನೆ
ಪುಟಿನ್- ಮೋದಿ
Follow us
ಸುಷ್ಮಾ ಚಕ್ರೆ
|

Updated on: Dec 05, 2024 | 5:05 PM

ನವದೆಹಲಿ: 15ನೇ ವಿಟಿಬಿ ರಷ್ಯಾ ಕಾಲಿಂಗ್ ಇನ್ವೆಸ್ಟ್‌ಮೆಂಟ್ ಫೋರಮ್‌ನಲ್ಲಿ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿಯವರ “ಭಾರತ ಮೊದಲು” ನೀತಿ ಮತ್ತು “ಮೇಕ್ ಇನ್ ಇಂಡಿಯಾ” ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಮೋದಿ ಭಾರತದ ಆರ್ಥಿಕ ಬೆಳವಣಿಗೆ ಮತ್ತು ಜಾಗತಿಕ ಸ್ಥಾನಮಾನದ ಪರಿವರ್ತಕರು ಎಂದು ಬಣ್ಣಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಪ್ರಕಾರ, ಉತ್ಪಾದನೆಯನ್ನು ಉತ್ತೇಜಿಸುವ ಮತ್ತು ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ಹೊಂದಿರುವ “ಮೇಕ್ ಇನ್ ಇಂಡಿಯಾ” ಉಪಕ್ರಮವು ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಸ್ಥಾನವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ಹೇಳಿಕೆಗಳು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದ ಆರ್ಥಿಕ ಪ್ರಗತಿಯನ್ನು ಒತ್ತಿಹೇಳಿವೆ.

ಇದನ್ನೂ ಓದಿ: ಗುಲಾಮರಿಗಾಗಿ ಮಾಡಿದ ಕಾನೂನುಗಳನ್ನು ಏಕೆ ಮುಂದುವರಿಸಬೇಕು?; 3 ಕ್ರಿಮಿನಲ್ ಕಾನೂನುಗಳಿಗೆ ಮೋದಿ ಚಾಲನೆ

ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ (ಎಸ್‌ಎಂಇ) “ಸ್ಥಿರ ಪರಿಸ್ಥಿತಿಗಳನ್ನು” ರಚಿಸುವಲ್ಲಿ ಭಾರತ ಸರ್ಕಾರ ಮತ್ತು ಅದರ ಪ್ರಯತ್ನಗಳನ್ನು ಪುಟಿನ್ ಶ್ಲಾಘಿಸಿದ್ದಾರೆ. ವಿಶೇಷವಾಗಿ “ಮೇಕ್ ಇನ್ ಇಂಡಿಯಾ” ಕಾರ್ಯಕ್ರಮದ ಮೇಲೆ ಗಮನಹರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮುನ್ನಡೆಸಿದ ಆರ್ಥಿಕ ಉಪಕ್ರಮಗಳನ್ನು ಎತ್ತಿ ತೋರಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್ ಅವರು ಭಾರತದಲ್ಲಿ ಉತ್ಪಾದನಾ ಕಾರ್ಯಾಚರಣೆಗಳನ್ನು ಸ್ಥಾಪಿಸಲು ರಷ್ಯಾದ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಹೂಡಿಕೆ ಲಾಭದಾಯಕವಾಗಿದೆ. ಭಾರತದ ನಾಯಕತ್ವವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಆದ್ಯತೆ ನೀಡುವತ್ತ ಗಮನಹರಿಸಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ‘ಮೋದಿ ಅದಾನಿ ಒಂದೇ’ ಎಂದು ಬರೆದ ಜಾಕೆಟ್‌ ಧರಿಸಿ ಸಂಸತ್ ಹೊರಗೆ ಇಂಡಿಯಾ ಬಣ ಪ್ರತಿಭಟನೆ

“ಪ್ರಧಾನಿ ಮೋದಿ ಮೇಕ್ ಇನ್ ಇಂಡಿಯಾ ಎಂಬ ಕಾರ್ಯಕ್ರಮವನ್ನು ಪ್ರಚಾರ ಮಾಡುತ್ತಿದ್ದಾರೆ. ನಾವು ಭಾರತದಲ್ಲಿ ನಮ್ಮ ಉತ್ಪಾದನಾ ಕಾರ್ಯಾಚರಣೆಗಳನ್ನು ಸ್ಥಾಪಿಸಲು ಸಿದ್ಧರಿದ್ದೇವೆ. ಪ್ರಧಾನ ಮಂತ್ರಿ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ಭಾರತಕ್ಕೆ ಮೊದಲ ಸ್ಥಾನ ನೀಡುವ ನೀತಿಯಿಂದ ಸ್ಥಿರವಾದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಿದೆ. ಭಾರತದಲ್ಲಿ ಹೂಡಿಕೆ ಮಾಡುವುದು ಲಾಭದಾಯಕ ಎಂದು ನಾವು ನಂಬುತ್ತೇವೆ” ಎಂದು ರಷ್ಯಾದ ಅಧ್ಯಕ್ಷ ಪುಟಿನ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ