AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vladimir Putin ಕ್ರಿಮಿಯನ್ ಸೇತುವೆ ಮೇಲೆ ಮರ್ಸಿಡಿಸ್ ಕಾರು ಚಲಾಯಿಸಿದ ವ್ಲಾಡಿಮಿರ್ ಪುಟಿನ್; ವಿಡಿಯೊ ನೋಡಿ

2018 ರಲ್ಲಿ ವ್ಲಾಡಿಮಿರ್ ಪುಟಿನ್ ಅವರು ವೈಯಕ್ತಿಕವಾಗಿ ತೆರೆದ 19 ಕಿಮೀ ರಸ್ತೆ ಮತ್ತು ರೈಲು ಸೇತುವೆ ಮೇಲೆ ಅಕ್ಟೋಬರ್ 8 ರಂದು ಉಕ್ರೇನ್ ಬಾಂಬ್ ದಾಳಿ ನಡೆಸಿದೆ ಎಂದು ರಷ್ಯಾ ಹೇಳಿತ್ತು. ಆದರೆ ಉಕ್ರೇನ್ ಎಂದಿಗೂ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ

Vladimir Putin ಕ್ರಿಮಿಯನ್ ಸೇತುವೆ ಮೇಲೆ ಮರ್ಸಿಡಿಸ್ ಕಾರು ಚಲಾಯಿಸಿದ ವ್ಲಾಡಿಮಿರ್ ಪುಟಿನ್; ವಿಡಿಯೊ ನೋಡಿ
ವ್ಲಾಡಿಮಿರ್ ಪುಟಿನ್ Image Credit source: Kremlinpool_RIA Twitter handle
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 06, 2022 | 1:52 PM

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರು ರಷ್ಯಾ ಮತ್ತು ಸ್ವಾಧೀನ ಪಡಿಸಿಕೊಂಡ ಕ್ರಿಮಿಯನ್ ಪರ್ಯಾಯ ದ್ವೀಪಕ್ಕೆ ಸಂಪರ್ಕಿಸುವ ಕ್ರಿಮಿಯನ್ ಸೇತುವೆಯಲ್ಲಿ (Crimean Bridge) ಮರ್ಸಿಡಿಸ್ ಕಾರು ಚಾಲನೆ ಮಾಡುತ್ತಿರುವುದು ಕಂಡುಬಂದಿದೆ.ಕೆಲವು ತಿಂಗಳ ಹಿಂದೆ ಈ ಸೇತುವೆ ಮೇಲೆ ಸ್ಫೋಟ ನಡೆದಿತ್ತು.2018 ರಲ್ಲಿ ವ್ಲಾಡಿಮಿರ್ ಪುಟಿನ್ ಅವರು ವೈಯಕ್ತಿಕವಾಗಿ ತೆರೆದ 19 ಕಿಮೀ ರಸ್ತೆ ಮತ್ತು ರೈಲು ಸೇತುವೆ ಮೇಲೆ ಅಕ್ಟೋಬರ್ 8 ರಂದು ಉಕ್ರೇನ್ ಬಾಂಬ್ ದಾಳಿ ನಡೆಸಿದೆ ಎಂದು ರಷ್ಯಾ ಹೇಳಿತ್ತು. ಆದರೆ ಉಕ್ರೇನ್ ಎಂದಿಗೂ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಪುಟಿನ್, ಉಪ ಪ್ರಧಾನ ಮಂತ್ರಿ ಮರಾತ್ ಖುಸ್ನುಲಿನ್ ಅವರೊಂದಿಗೆ ಮರ್ಸಿಡಿಸ್ ಕಾರು ಚಲಾಯಿಸುತ್ತಿರುವುದನ್ನು ರಾಜ್ಯ ದೂರದರ್ಶನ ಪ್ರಸಾರ ಮಾಡಿದ್ದು, ದಾಳಿ ಎಲ್ಲಿ ನಡೆಯಿತು ಎಂಬ ಪ್ರಶ್ನೆ ಕೇಳಿದೆ.ಸೇತುವೆಯ ಎಡಭಾಗ, ನಾನು ಅರ್ಥಮಾಡಿಕೊಂಡಂತೆ ನಿರ್ಮಾಣ ಸ್ಥಿತಿಯಲ್ಲಿದೆ. ಆದರೆ ಅದೇನೇ ಇದ್ದರೂ ಅದನ್ನು ಪೂರ್ಣಗೊಳಿಸಬೇಕಾಗಿದೆ. ಅದಕ್ಕೆ ಸ್ವಲ್ಪ ಹಾನಿಯಾಗಿದೆ. ನಾವು ಅದನ್ನು ಸುಸ್ಥಿತಿಗೆ ತರಬೇಕಾಗಿದೆ ಎಂದು ರಷ್ಯಾದ ದೂರದರ್ಶನ ಜತೆ ಮಾತನಾಡಿದ ವ್ಲಾಡಿಮಿರ್ ಪುಟಿನ್ ಹೇಳಿದರು.ವ್ಲಾಡಿಮಿರ್ ಪುಟಿನ್ ಅವರು ಸೇತುವೆಯ ಭಾಗಗಳಲ್ಲಿ ನಡೆದಿದ್ದು , ಹಾನಿಯಾದ ಭಾಗಗಳನ್ನು ಪರಿಶೀಲಿಸಿದರು.

ಸ್ಫೋಟದಲ್ಲಿ ರಸ್ತೆ ಸೇತುವೆಯ ಒಂದು ಭಾಗವನ್ನು ಧ್ವಂಸಗೊಂಡಿದ್ದು ಕೆರ್ಚ್ ಜಲಸಂಧಿಯಾದ್ಯಂತ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ನೆರೆಯ ದಕ್ಷಿಣ ರಷ್ಯಾದಿಂದ ಸ್ವಾಧೀನಪಡಿಸಿಕೊಂಡ ಕ್ರಿಮಿಯಾನ್ ಪರ್ಯಾಯ ದ್ವೀಪದ ಕಡೆಗೆ ಹೋಗುತ್ತಿದ್ದ ರೈಲಿನಲ್ಲಿದ್ದ ಹಲವಾರು ಇಂಧನ ಟ್ಯಾಂಕರ್‌ಗಳು ಸ್ಫೋಟದಿಂದ ನಾಶವಾಗಿವೆ. ಇದಕ್ಕೆ ಪ್ರತಿಯಾಗಿ ನಾಗರಿಕ ಪ್ರದೇಶಗಳು ಮತ್ತು ಉಕ್ರೇನ್‌ನ ಪವರ್ ಗ್ರಿಡ್‌ನ ಮೇಲೆ ವೈಮಾನಿಕ ದಾಳಿಯೊಂದಿಗೆ ಪುಟಿನ್ ಪ್ರತೀಕಾರ ತೀರಿಸಿಕೊಂಡಿದ್ದರು.

Published On - 1:50 pm, Tue, 6 December 22

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ