AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vladimir Putin ಕ್ರಿಮಿಯನ್ ಸೇತುವೆ ಮೇಲೆ ಮರ್ಸಿಡಿಸ್ ಕಾರು ಚಲಾಯಿಸಿದ ವ್ಲಾಡಿಮಿರ್ ಪುಟಿನ್; ವಿಡಿಯೊ ನೋಡಿ

2018 ರಲ್ಲಿ ವ್ಲಾಡಿಮಿರ್ ಪುಟಿನ್ ಅವರು ವೈಯಕ್ತಿಕವಾಗಿ ತೆರೆದ 19 ಕಿಮೀ ರಸ್ತೆ ಮತ್ತು ರೈಲು ಸೇತುವೆ ಮೇಲೆ ಅಕ್ಟೋಬರ್ 8 ರಂದು ಉಕ್ರೇನ್ ಬಾಂಬ್ ದಾಳಿ ನಡೆಸಿದೆ ಎಂದು ರಷ್ಯಾ ಹೇಳಿತ್ತು. ಆದರೆ ಉಕ್ರೇನ್ ಎಂದಿಗೂ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ

Vladimir Putin ಕ್ರಿಮಿಯನ್ ಸೇತುವೆ ಮೇಲೆ ಮರ್ಸಿಡಿಸ್ ಕಾರು ಚಲಾಯಿಸಿದ ವ್ಲಾಡಿಮಿರ್ ಪುಟಿನ್; ವಿಡಿಯೊ ನೋಡಿ
ವ್ಲಾಡಿಮಿರ್ ಪುಟಿನ್ Image Credit source: Kremlinpool_RIA Twitter handle
TV9 Web
| Edited By: |

Updated on:Dec 06, 2022 | 1:52 PM

Share

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರು ರಷ್ಯಾ ಮತ್ತು ಸ್ವಾಧೀನ ಪಡಿಸಿಕೊಂಡ ಕ್ರಿಮಿಯನ್ ಪರ್ಯಾಯ ದ್ವೀಪಕ್ಕೆ ಸಂಪರ್ಕಿಸುವ ಕ್ರಿಮಿಯನ್ ಸೇತುವೆಯಲ್ಲಿ (Crimean Bridge) ಮರ್ಸಿಡಿಸ್ ಕಾರು ಚಾಲನೆ ಮಾಡುತ್ತಿರುವುದು ಕಂಡುಬಂದಿದೆ.ಕೆಲವು ತಿಂಗಳ ಹಿಂದೆ ಈ ಸೇತುವೆ ಮೇಲೆ ಸ್ಫೋಟ ನಡೆದಿತ್ತು.2018 ರಲ್ಲಿ ವ್ಲಾಡಿಮಿರ್ ಪುಟಿನ್ ಅವರು ವೈಯಕ್ತಿಕವಾಗಿ ತೆರೆದ 19 ಕಿಮೀ ರಸ್ತೆ ಮತ್ತು ರೈಲು ಸೇತುವೆ ಮೇಲೆ ಅಕ್ಟೋಬರ್ 8 ರಂದು ಉಕ್ರೇನ್ ಬಾಂಬ್ ದಾಳಿ ನಡೆಸಿದೆ ಎಂದು ರಷ್ಯಾ ಹೇಳಿತ್ತು. ಆದರೆ ಉಕ್ರೇನ್ ಎಂದಿಗೂ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಪುಟಿನ್, ಉಪ ಪ್ರಧಾನ ಮಂತ್ರಿ ಮರಾತ್ ಖುಸ್ನುಲಿನ್ ಅವರೊಂದಿಗೆ ಮರ್ಸಿಡಿಸ್ ಕಾರು ಚಲಾಯಿಸುತ್ತಿರುವುದನ್ನು ರಾಜ್ಯ ದೂರದರ್ಶನ ಪ್ರಸಾರ ಮಾಡಿದ್ದು, ದಾಳಿ ಎಲ್ಲಿ ನಡೆಯಿತು ಎಂಬ ಪ್ರಶ್ನೆ ಕೇಳಿದೆ.ಸೇತುವೆಯ ಎಡಭಾಗ, ನಾನು ಅರ್ಥಮಾಡಿಕೊಂಡಂತೆ ನಿರ್ಮಾಣ ಸ್ಥಿತಿಯಲ್ಲಿದೆ. ಆದರೆ ಅದೇನೇ ಇದ್ದರೂ ಅದನ್ನು ಪೂರ್ಣಗೊಳಿಸಬೇಕಾಗಿದೆ. ಅದಕ್ಕೆ ಸ್ವಲ್ಪ ಹಾನಿಯಾಗಿದೆ. ನಾವು ಅದನ್ನು ಸುಸ್ಥಿತಿಗೆ ತರಬೇಕಾಗಿದೆ ಎಂದು ರಷ್ಯಾದ ದೂರದರ್ಶನ ಜತೆ ಮಾತನಾಡಿದ ವ್ಲಾಡಿಮಿರ್ ಪುಟಿನ್ ಹೇಳಿದರು.ವ್ಲಾಡಿಮಿರ್ ಪುಟಿನ್ ಅವರು ಸೇತುವೆಯ ಭಾಗಗಳಲ್ಲಿ ನಡೆದಿದ್ದು , ಹಾನಿಯಾದ ಭಾಗಗಳನ್ನು ಪರಿಶೀಲಿಸಿದರು.

ಸ್ಫೋಟದಲ್ಲಿ ರಸ್ತೆ ಸೇತುವೆಯ ಒಂದು ಭಾಗವನ್ನು ಧ್ವಂಸಗೊಂಡಿದ್ದು ಕೆರ್ಚ್ ಜಲಸಂಧಿಯಾದ್ಯಂತ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ನೆರೆಯ ದಕ್ಷಿಣ ರಷ್ಯಾದಿಂದ ಸ್ವಾಧೀನಪಡಿಸಿಕೊಂಡ ಕ್ರಿಮಿಯಾನ್ ಪರ್ಯಾಯ ದ್ವೀಪದ ಕಡೆಗೆ ಹೋಗುತ್ತಿದ್ದ ರೈಲಿನಲ್ಲಿದ್ದ ಹಲವಾರು ಇಂಧನ ಟ್ಯಾಂಕರ್‌ಗಳು ಸ್ಫೋಟದಿಂದ ನಾಶವಾಗಿವೆ. ಇದಕ್ಕೆ ಪ್ರತಿಯಾಗಿ ನಾಗರಿಕ ಪ್ರದೇಶಗಳು ಮತ್ತು ಉಕ್ರೇನ್‌ನ ಪವರ್ ಗ್ರಿಡ್‌ನ ಮೇಲೆ ವೈಮಾನಿಕ ದಾಳಿಯೊಂದಿಗೆ ಪುಟಿನ್ ಪ್ರತೀಕಾರ ತೀರಿಸಿಕೊಂಡಿದ್ದರು.

Published On - 1:50 pm, Tue, 6 December 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​