AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ

ರಷ್ಯಾದ ಅಧ್ಯಕ್ಷರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ವಿವಿಧ ವದಂತಿಗಳಿರುವಾಗ ಈ ಹೊಸ ಬೆಳವಣಿಗೆಯು ಬಂದಿದೆ.ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಈ ವಿವರವನ್ನು ಜನರಲ್ ಎಸ್‌ವಿಆರ್ ಟೆಲಿಗ್ರಾಮ್ ಚಾನೆಲ್ ಮಾಡಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ
ವ್ಲಾಡಿಮಿರ್ ಪುಟಿನ್
ರಶ್ಮಿ ಕಲ್ಲಕಟ್ಟ
|

Updated on: Apr 11, 2023 | 10:10 PM

Share

ಕಳೆದ ವರ್ಷ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ, ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಆರೋಗ್ಯ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಈಗ, ಹೊಸ ವರದಿಯೊಂದು ಅವರ ಆರೋಗ್ಯ ಹದಗೆಟ್ಟಿದೆ ಎಂದು ಹೇಳುತ್ತದೆ. ಅದೇನೆಂದರೆ ರಷ್ಯಾ ಅಧ್ಯಕ್ಷರಿಗೆ ತಲೆಯಲ್ಲಿ ತೀವ್ರವಾದ ನೋವು ಇದ್ದು ಅವರ ದೃಷ್ಟಿ ಮಸುಕಾಗಿದೆ. ಅವರು ನಾಲಿಗೆಯ ಮರಗಟ್ಟುವಿಕೆಯಿಂದ ಬಳಲುತ್ತಿದ್ದಾರೆ ವೈದ್ಯರು ಹೇಳಿರುವುದಾಗಿ ಮೆಟ್ರೋ ವರದಿ ಮಾಡಿದೆ. ರಷ್ಯಾದ ಅಧ್ಯಕ್ಷರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ವಿವಿಧ ವದಂತಿಗಳಿರುವಾಗ ಈ ಹೊಸ ಬೆಳವಣಿಗೆಯು ಬಂದಿದೆ.ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಈ ವಿವರವನ್ನು ಜನರಲ್ ಎಸ್‌ವಿಆರ್ ಟೆಲಿಗ್ರಾಮ್ ಚಾನೆಲ್ ಮಾಡಿದೆ.

ಪುಟಿನ್ ಅವರ ಬಲಗೈ ಮತ್ತು ಕಾಲಿನ ಸಂವೇದನೆಯ ಭಾಗಶಃ ನಷ್ಟ ಆಗಿದೆ. ಅವರಿಗೆ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ವರದಿ ಹೇಳಿದೆ. ವೈದ್ಯರ ಕೌನ್ಸಿಲ್ ಪ್ರಥಮ ಚಿಕಿತ್ಸೆ ನೀಡಿತು. ನಂತರ ಔಷಧಿಗಳನ್ನು ತೆಗೆದುಕೊಳ್ಳಲು ಮತ್ತು ಹಲವಾರು ದಿನಗಳವರೆಗೆ ವಿಶ್ರಾಂತಿ ಪಡೆಯಲು ಪುಟಿನ್ ಅವರಿಗೆ ನಿರ್ದೇಶಿಸಿತು ಎಂದು ವರದಿ ಹೇಳಿದೆ.

ಆದಾಗ್ಯೂ, ರಷ್ಯಾದ ಅಧ್ಯಕ್ಷರು ವಿಶ್ರಾಂತಿ ಪಡೆಯಲು ನಿರಾಕರಿಸಿದರು ಮತ್ತು ಬದಲಿಗೆ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮಾಡಿತು. ಅವರ ಸ್ಥಿತಿ ಸುಧಾರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಅಧ್ಯಕ್ಷರ ಸಂಬಂಧಿಕರು ಹೆಚ್ಚು ಚಿಂತಿತರಾಗಿದ್ದರು. ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯದಲ್ಲಿ ಅಂತಹ ತೀಕ್ಷ್ಣವಾದ ಕ್ಷೀಣ ನೋಡಿ ಹೆಚ್ಚು ಭಯಭೀತರಾಗಿದ್ದರು. ಅಧ್ಯಕ್ಷರ ಆರೋಗ್ಯದಲ್ಲಿ ತಾತ್ಕಾಲಿಕ ತೀವ್ರ ಕ್ಷೀಣತೆ ಈಗಾಗಲೇ ಅವರ ಹತ್ತಿರವಿರುವವರನ್ನು ಉದ್ವಿಗ್ನಗೊಳಿಸಿದೆ ಎಂದು ಜನರಲ್ ಎಸ್‌ವಿಆರ್  ಹೇಳಿದೆ.

ಇದನ್ನೂ ಓದಿ: ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಶಿವೆಲುಚ್ ಜ್ವಾಲಾಮುಖಿ ಸ್ಫೋಟ; ವಿಮಾನಯಾನಕ್ಕೆ ಅಡ್ಡಿ

ಫೆಬ್ರವರಿ 2023 ರಲ್ಲಿ, ಅಧ್ಯಕ್ಷರ ಅಸಾಮಾನ್ಯ ಪಾದಗಳ ಚಲನೆಯ ವೀಡಿಯೊ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿತು. ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರೊಂದಿಗಿನ ಭೇಟಿಯ ಸಮಯದಲ್ಲಿ, ರಷ್ಯಾದ ಅಧ್ಯಕ್ಷರ ಪಾದಗಳು ನಡುಗುತ್ತಿರುವ ವಿಡಿಯೊ ಎಲ್ಲೆಡೆ ಹರಿದಾಡಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ