ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ

ರಷ್ಯಾದ ಅಧ್ಯಕ್ಷರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ವಿವಿಧ ವದಂತಿಗಳಿರುವಾಗ ಈ ಹೊಸ ಬೆಳವಣಿಗೆಯು ಬಂದಿದೆ.ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಈ ವಿವರವನ್ನು ಜನರಲ್ ಎಸ್‌ವಿಆರ್ ಟೆಲಿಗ್ರಾಮ್ ಚಾನೆಲ್ ಮಾಡಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ
ವ್ಲಾಡಿಮಿರ್ ಪುಟಿನ್
Follow us
|

Updated on: Apr 11, 2023 | 10:10 PM

ಕಳೆದ ವರ್ಷ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ, ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಆರೋಗ್ಯ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಈಗ, ಹೊಸ ವರದಿಯೊಂದು ಅವರ ಆರೋಗ್ಯ ಹದಗೆಟ್ಟಿದೆ ಎಂದು ಹೇಳುತ್ತದೆ. ಅದೇನೆಂದರೆ ರಷ್ಯಾ ಅಧ್ಯಕ್ಷರಿಗೆ ತಲೆಯಲ್ಲಿ ತೀವ್ರವಾದ ನೋವು ಇದ್ದು ಅವರ ದೃಷ್ಟಿ ಮಸುಕಾಗಿದೆ. ಅವರು ನಾಲಿಗೆಯ ಮರಗಟ್ಟುವಿಕೆಯಿಂದ ಬಳಲುತ್ತಿದ್ದಾರೆ ವೈದ್ಯರು ಹೇಳಿರುವುದಾಗಿ ಮೆಟ್ರೋ ವರದಿ ಮಾಡಿದೆ. ರಷ್ಯಾದ ಅಧ್ಯಕ್ಷರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ ಎಂದು ವಿವಿಧ ವದಂತಿಗಳಿರುವಾಗ ಈ ಹೊಸ ಬೆಳವಣಿಗೆಯು ಬಂದಿದೆ.ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಈ ವಿವರವನ್ನು ಜನರಲ್ ಎಸ್‌ವಿಆರ್ ಟೆಲಿಗ್ರಾಮ್ ಚಾನೆಲ್ ಮಾಡಿದೆ.

ಪುಟಿನ್ ಅವರ ಬಲಗೈ ಮತ್ತು ಕಾಲಿನ ಸಂವೇದನೆಯ ಭಾಗಶಃ ನಷ್ಟ ಆಗಿದೆ. ಅವರಿಗೆ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ವರದಿ ಹೇಳಿದೆ. ವೈದ್ಯರ ಕೌನ್ಸಿಲ್ ಪ್ರಥಮ ಚಿಕಿತ್ಸೆ ನೀಡಿತು. ನಂತರ ಔಷಧಿಗಳನ್ನು ತೆಗೆದುಕೊಳ್ಳಲು ಮತ್ತು ಹಲವಾರು ದಿನಗಳವರೆಗೆ ವಿಶ್ರಾಂತಿ ಪಡೆಯಲು ಪುಟಿನ್ ಅವರಿಗೆ ನಿರ್ದೇಶಿಸಿತು ಎಂದು ವರದಿ ಹೇಳಿದೆ.

ಆದಾಗ್ಯೂ, ರಷ್ಯಾದ ಅಧ್ಯಕ್ಷರು ವಿಶ್ರಾಂತಿ ಪಡೆಯಲು ನಿರಾಕರಿಸಿದರು ಮತ್ತು ಬದಲಿಗೆ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮಾಡಿತು. ಅವರ ಸ್ಥಿತಿ ಸುಧಾರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಅಧ್ಯಕ್ಷರ ಸಂಬಂಧಿಕರು ಹೆಚ್ಚು ಚಿಂತಿತರಾಗಿದ್ದರು. ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯದಲ್ಲಿ ಅಂತಹ ತೀಕ್ಷ್ಣವಾದ ಕ್ಷೀಣ ನೋಡಿ ಹೆಚ್ಚು ಭಯಭೀತರಾಗಿದ್ದರು. ಅಧ್ಯಕ್ಷರ ಆರೋಗ್ಯದಲ್ಲಿ ತಾತ್ಕಾಲಿಕ ತೀವ್ರ ಕ್ಷೀಣತೆ ಈಗಾಗಲೇ ಅವರ ಹತ್ತಿರವಿರುವವರನ್ನು ಉದ್ವಿಗ್ನಗೊಳಿಸಿದೆ ಎಂದು ಜನರಲ್ ಎಸ್‌ವಿಆರ್  ಹೇಳಿದೆ.

ಇದನ್ನೂ ಓದಿ: ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಶಿವೆಲುಚ್ ಜ್ವಾಲಾಮುಖಿ ಸ್ಫೋಟ; ವಿಮಾನಯಾನಕ್ಕೆ ಅಡ್ಡಿ

ಫೆಬ್ರವರಿ 2023 ರಲ್ಲಿ, ಅಧ್ಯಕ್ಷರ ಅಸಾಮಾನ್ಯ ಪಾದಗಳ ಚಲನೆಯ ವೀಡಿಯೊ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿತು. ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರೊಂದಿಗಿನ ಭೇಟಿಯ ಸಮಯದಲ್ಲಿ, ರಷ್ಯಾದ ಅಧ್ಯಕ್ಷರ ಪಾದಗಳು ನಡುಗುತ್ತಿರುವ ವಿಡಿಯೊ ಎಲ್ಲೆಡೆ ಹರಿದಾಡಿತ್ತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ