AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Nov 27, 2020 | 7:55 PM

Share

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ರಷ್ಯಾದ ಗಮಾಲೆಯಾ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಲಸಿಕೆಯನ್ನು ಆಸ್ಟ್ರಾಜೆನೆಕಾ ಲಸಿಕೆಯೊಂದಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಬೆರೆಸಿದರೆ ಲಸಿಕೆಯ ಶಕ್ತಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ, ಈ ಪ್ರಯೋಗ ಮಾಡುವುದು ಸೂಕ್ತ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಪ್ರಸ್ತುತ ಅಧ್ಯಯನ ಪ್ರಕಾರ ಆಸ್ಟ್ರಾಜೆನೆಕಾ ಲಸಿಕೆ ಶೇ.62ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ. ಆದರೆ, ಆಗಸ್ಟ್​ನಲ್ಲಿ ತಯಾರಾದ ಸ್ಪುಟ್ನಿಕ್ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಅದನ್ನು ತಯಾರಿಸಿದ ಗಮಾಲೆಯಾ ಸಂಸ್ಥೆ ತಿಳಿಸಿತ್ತು. ಈಗ ಅದೇ ಆಧಾರದ ಮೇಲೆ ಈ 2 ಲಸಿಕೆಗಳ ಮಿಶ್ರಣವನ್ನು ಪ್ರಯೋಗಿಸುವ ಸಲಹೆ ವ್ಯಕ್ತವಾಗಿದೆ.

2020ರ ಅಂತ್ಯದ ವೇಳೆಗೆ ಆಸ್ಟ್ರಾಜೆನೆಕಾದ 20 ಕೋಟಿ ಲಸಿಕೆಗಳು ಸಿದ್ಧವಾಗಲಿದೆ ಎಂದು ತಯಾರಿಕಾ ಕಂಪನಿ ಹೇಳಿದರೂ ಇನ್ನೂ ಕೆಲ ಹಂತದ ಪ್ರಯೋಗಗಳು ಬಾಕಿ ಇವೆ. ಸದ್ಯ, ಆಸ್ಟ್ರಾಜೆನೆಕಾ ಲಸಿಕೆ ಅತ್ಯಂತ ಕಡಿಮೆ ದರದಲ್ಲಿ ಪರಿಣಾಮಕಾರಿ ಲಸಿಕೆಯಾಗಿ ಕಾಣುತ್ತಿದ್ದು ರಷ್ಯಾದ ತಜ್ಞರ ಸಲಹೆ ಒಂದು ವೇಳೆ ಯಶಸ್ಸು ಕಂಡರೆ ಈ ಲಸಿಕೆಗಾಗಿ ಇಡೀ ವಿಶ್ವದಲ್ಲಿ ಬೇಡಿಕೆ ಹೆಚ್ಚುವ ಸಾಧ್ಯತೆ ಇದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್