AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Nov 27, 2020 | 7:55 PM

Share

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ರಷ್ಯಾದ ಗಮಾಲೆಯಾ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಲಸಿಕೆಯನ್ನು ಆಸ್ಟ್ರಾಜೆನೆಕಾ ಲಸಿಕೆಯೊಂದಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಬೆರೆಸಿದರೆ ಲಸಿಕೆಯ ಶಕ್ತಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ, ಈ ಪ್ರಯೋಗ ಮಾಡುವುದು ಸೂಕ್ತ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಪ್ರಸ್ತುತ ಅಧ್ಯಯನ ಪ್ರಕಾರ ಆಸ್ಟ್ರಾಜೆನೆಕಾ ಲಸಿಕೆ ಶೇ.62ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ. ಆದರೆ, ಆಗಸ್ಟ್​ನಲ್ಲಿ ತಯಾರಾದ ಸ್ಪುಟ್ನಿಕ್ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಅದನ್ನು ತಯಾರಿಸಿದ ಗಮಾಲೆಯಾ ಸಂಸ್ಥೆ ತಿಳಿಸಿತ್ತು. ಈಗ ಅದೇ ಆಧಾರದ ಮೇಲೆ ಈ 2 ಲಸಿಕೆಗಳ ಮಿಶ್ರಣವನ್ನು ಪ್ರಯೋಗಿಸುವ ಸಲಹೆ ವ್ಯಕ್ತವಾಗಿದೆ.

2020ರ ಅಂತ್ಯದ ವೇಳೆಗೆ ಆಸ್ಟ್ರಾಜೆನೆಕಾದ 20 ಕೋಟಿ ಲಸಿಕೆಗಳು ಸಿದ್ಧವಾಗಲಿದೆ ಎಂದು ತಯಾರಿಕಾ ಕಂಪನಿ ಹೇಳಿದರೂ ಇನ್ನೂ ಕೆಲ ಹಂತದ ಪ್ರಯೋಗಗಳು ಬಾಕಿ ಇವೆ. ಸದ್ಯ, ಆಸ್ಟ್ರಾಜೆನೆಕಾ ಲಸಿಕೆ ಅತ್ಯಂತ ಕಡಿಮೆ ದರದಲ್ಲಿ ಪರಿಣಾಮಕಾರಿ ಲಸಿಕೆಯಾಗಿ ಕಾಣುತ್ತಿದ್ದು ರಷ್ಯಾದ ತಜ್ಞರ ಸಲಹೆ ಒಂದು ವೇಳೆ ಯಶಸ್ಸು ಕಂಡರೆ ಈ ಲಸಿಕೆಗಾಗಿ ಇಡೀ ವಿಶ್ವದಲ್ಲಿ ಬೇಡಿಕೆ ಹೆಚ್ಚುವ ಸಾಧ್ಯತೆ ಇದೆ.

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು