AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ಆಸ್ಟ್ರಾಜೆನೆಕಾ ಲಸಿಕೆಗೆ ಸ್ಪುಟ್ನಿಕ್ ವಿ ಬಲ -ಇದು ರಷ್ಯಾ ತಜ್ಞರ ‘ಡಬಲ್​ ಪವರ್’ ಸಲಹೆ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Nov 27, 2020 | 7:55 PM

Share

ಕೊವಿಡ್ ತಡೆಗಟ್ಟಲು ಔಷಧಿ ತಯಾರಿಕಾ ಕಂಪನಿ ಆಸ್ಟ್ರಾಜೆನೆಕಾ (AstraZeneca) ತಯಾರಿಸಿರುವ ಲಸಿಕೆಗೆ ಮತ್ತಷ್ಟು ಬಲ ತುಂಬಲು ಸ್ಪುಟ್ನಿಕ್ ವಿ (Sputnik V) ಲಸಿಕೆ ಸಹಕಾರಿಯಾಗಲಿದೆ ಎಂದು ರಷ್ಯಾದ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ರಷ್ಯಾದ ಗಮಾಲೆಯಾ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಲಸಿಕೆಯನ್ನು ಆಸ್ಟ್ರಾಜೆನೆಕಾ ಲಸಿಕೆಯೊಂದಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಬೆರೆಸಿದರೆ ಲಸಿಕೆಯ ಶಕ್ತಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಆದ್ದರಿಂದ, ಈ ಪ್ರಯೋಗ ಮಾಡುವುದು ಸೂಕ್ತ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಪ್ರಸ್ತುತ ಅಧ್ಯಯನ ಪ್ರಕಾರ ಆಸ್ಟ್ರಾಜೆನೆಕಾ ಲಸಿಕೆ ಶೇ.62ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ. ಆದರೆ, ಆಗಸ್ಟ್​ನಲ್ಲಿ ತಯಾರಾದ ಸ್ಪುಟ್ನಿಕ್ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಅದನ್ನು ತಯಾರಿಸಿದ ಗಮಾಲೆಯಾ ಸಂಸ್ಥೆ ತಿಳಿಸಿತ್ತು. ಈಗ ಅದೇ ಆಧಾರದ ಮೇಲೆ ಈ 2 ಲಸಿಕೆಗಳ ಮಿಶ್ರಣವನ್ನು ಪ್ರಯೋಗಿಸುವ ಸಲಹೆ ವ್ಯಕ್ತವಾಗಿದೆ.

2020ರ ಅಂತ್ಯದ ವೇಳೆಗೆ ಆಸ್ಟ್ರಾಜೆನೆಕಾದ 20 ಕೋಟಿ ಲಸಿಕೆಗಳು ಸಿದ್ಧವಾಗಲಿದೆ ಎಂದು ತಯಾರಿಕಾ ಕಂಪನಿ ಹೇಳಿದರೂ ಇನ್ನೂ ಕೆಲ ಹಂತದ ಪ್ರಯೋಗಗಳು ಬಾಕಿ ಇವೆ. ಸದ್ಯ, ಆಸ್ಟ್ರಾಜೆನೆಕಾ ಲಸಿಕೆ ಅತ್ಯಂತ ಕಡಿಮೆ ದರದಲ್ಲಿ ಪರಿಣಾಮಕಾರಿ ಲಸಿಕೆಯಾಗಿ ಕಾಣುತ್ತಿದ್ದು ರಷ್ಯಾದ ತಜ್ಞರ ಸಲಹೆ ಒಂದು ವೇಳೆ ಯಶಸ್ಸು ಕಂಡರೆ ಈ ಲಸಿಕೆಗಾಗಿ ಇಡೀ ವಿಶ್ವದಲ್ಲಿ ಬೇಡಿಕೆ ಹೆಚ್ಚುವ ಸಾಧ್ಯತೆ ಇದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು