AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನ ಶಾಲೆ, ಸಾಂಸ್ಕೃತಿಕ ಕೇಂದ್ರದ ಮೇಲೆ ರಷ್ಯಾದ ಶೆಲ್ ದಾಳಿ; 21 ಸಾವು

ಗುರುವಾರ ಮುಂಜಾನೆ ಖಾರ್ಕಿವ್ ನಗರದ ಹೊರಗಿನ ಮೆರೆಫಾ ಪಟ್ಟಣದಲ್ಲಿರುವ ಶಾಲೆ ಮತ್ತು ಸಾಂಸ್ಕೃತಿಕ ಕೇಂದ್ರದ ಮೇಲೆ ದಾಳಿ ನಡೆದಿದೆ ಎಂದು ಪ್ರಾದೇಶಿಕ ಪ್ರಾಸಿಕ್ಯೂಟರ್‌ಗಳು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಉಕ್ರೇನ್‌ನ ಶಾಲೆ, ಸಾಂಸ್ಕೃತಿಕ ಕೇಂದ್ರದ ಮೇಲೆ ರಷ್ಯಾದ ಶೆಲ್ ದಾಳಿ; 21 ಸಾವು
ಉಕ್ರೇನ್ ಯೋಧರು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Mar 17, 2022 | 9:24 PM

Share

ಕೀವ್: ಪೂರ್ವ ಉಕ್ರೇನ್‌ನಲ್ಲಿ(Ukraine) ರಷ್ಯಾದ (Russia) ಪಡೆಗಳು ಗುರುವಾರ ಶೆಲ್ ದಾಳಿ ನಡೆಸಿದ್ದು ಇದರಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. ಗುರುವಾರ ಮುಂಜಾನೆ ಖಾರ್ಕಿವ್ ನಗರದ ಹೊರಗಿನ ಮೆರೆಫಾ ಪಟ್ಟಣದಲ್ಲಿರುವ ಶಾಲೆ ಮತ್ತು ಸಾಂಸ್ಕೃತಿಕ ಕೇಂದ್ರದ ಮೇಲೆ ದಾಳಿ ನಡೆದಿದೆ ಎಂದು ಪ್ರಾದೇಶಿಕ ಪ್ರಾಸಿಕ್ಯೂಟರ್‌ಗಳು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ 10 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಸಿಕ್ಯೂಟರ್‌ಗಳ ಹೇಳಿಕೆಯ ಜೊತೆಯಲ್ಲಿರುವ ಫೋಟೋವು ಹಲವಾರು ಮಹಡಿಗಳ ಕಟ್ಟಡವನ್ನು ತೋರಿಸಿದೆ. ಆ ಕಟ್ಟಡದ ಮಧ್ಯದಲ್ಲಿ ಕಿಟಕಿಗಳು ಹಾರಿಹೋಗಿವೆ ಮತ್ತು ರಕ್ಷಣಾ ಕಾರ್ಯಕರ್ತರು ಅವಶೇಷಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಖಾರ್ಕಿವ್, ಉಕ್ರೇನ್‌ನ ಎರಡನೇ ಅತಿದೊಡ್ಡ ನಗರ. ಇದು ಮೆರೆಫಾದಿಂದ ಉತ್ತರಕ್ಕೆ ಸುಮಾರು 30 ಕಿಲೋಮೀಟರ್ (18 ಮೈಲುಗಳು) ದೂರದಲ್ಲಿದ್ದು , ಇತ್ತೀಚಿನ ವಾರಗಳಲ್ಲಿ ರಷ್ಯಾದ ತೀವ್ರವಾದ ವೈಮಾನಿಕ ದಾಳಿಗೆ ಗುರಿಯಾಗಿದೆ. ಮುತ್ತಿಗೆ ಹಾಕಿದ ನಗರವಾದ ಮಾರಿಯುಪೋಲ್‌ನಲ್ಲಿ ರಷ್ಯಾದ ವೈಮಾನಿಕ ದಾಳಿಯಿಂದ ಧ್ವಂಸಗೊಂಡ ಥಿಯೇಟರ್‌ನಲ್ಲಿ ನೂರಾರು ನಾಗರಿಕರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಮರಿಯುಪೋಲ್ ಸಿಟಿ ಕೌನ್ಸಿಲ್ ಬಿಡುಗಡೆ ಮಾಡಿದ ಫೋಟೋವು 3-ಅಂತಸ್ತಿನ ರಂಗಮಂದಿರದ ಸಂಪೂರ್ಣ ಕುಸಿದಿದ್ದು ಅಲ್ಲಿ ನಾಗರಿಕರು ಆಶ್ರಯ ಪಡೆದಿದ್ದರು.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು “ಯುದ್ಧ ಅಪರಾಧಿ” ಎಂದು ಉಲ್ಲೇಖಿಸಿದ ಯುಎಸ್ ಅಧ್ಯಕ್ಷರ ಬಗ್ಗೆ ಪ್ರತಿಕ್ರಿಯಿಸಿದ ಕ್ರೆಮ್ಲಿನ್ ಪ್ರೆಸ್ ಸೆಕ್ರೆಟರಿ ಬಿಡೆನ್ ಅವರ ಹೇಳಿಕೆಗಳು “ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದ ಮಾತು” ಎಂದು ಹೇಳಿದರು. ಏತನ್ಮಧ್ಯೆ, ಉಕ್ರೇನಿಯನ್ ರಾಜಧಾನಿ ಕೀವ್ ನಲ್ಲಿರುವ ವಸತಿ ಕಟ್ಟಡಕ್ಕೆ ಉರುಳಿದ ಕ್ಷಿಪಣಿಯ ಅವಶೇಷಗಳು ಬಡಿದ ನಂತರ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ತುರ್ತು ಸೇವೆ ಗುರುವಾರ ತಿಳಿಸಿದೆ.

ರಷ್ಯಾದಿಂದ ಬಾಂಬ್ ದಾಳಿಗೊಳಗಾದ ಮಾರಿಯುಪೋಲ್ ಥಿಯೇಟರ್‌ನಿಂದ 130 ನಾಗರಿಕರ ರಕ್ಷಣೆ ಉಕ್ರೇನ್‌ನ ಮಾರಿಯುಪೋಲ್‌ನ ಥಿಯೇಟರ್‌ನಲ್ಲಿದ್ದ ಅವಶೇಷಗಳು ಮತ್ತು ಕಾಂಕ್ರೀಟ್‌ನಿಂದ 130 ನಾಗರಿಕರನ್ನು ಹೊರತೆಗೆಯಲಾಗಿದೆ ಎಂದು ಕೈವ್ ಇಂಡಿಪೆಂಡೆಂಟ್ ಗುರುವಾರ ಸಂಜೆ ಹೇಳಿದೆ. ಉಕ್ರೇನ್ ಅಧಿಕಾರಿಗಳು ಈ ಹಿಂದೆ ಸಾವಿರಾರು ಮಂದಿ ರಷ್ಯಾದ ಬಾಂಬ್‌ ಆಕ್ರಮಣದಿಂದ ತಪ್ಪಿಸಿಕೊಳ್ಳಲು ಅಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಹೇಳಿದ್ದರು. ಉಳಿದವರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ. ಡೊನೆಟ್ಸ್ಕ್ ಆಡಳಿತದ ಮುಖ್ಯಸ್ಥ ಪಾವ್ಲೋ ಕೈರಿಲೆಂಕೊ, ರಂಗಮಂದಿರದ ಕೆಲವು ಭಾಗಗಳ ಪ್ರವೇಶದ್ವಾರವನ್ನು ಕಲ್ಲುಮಣ್ಣುಗಳು ಹೂತುಹಾಕಿವೆ ಎಂದು ಹೇಳಿದರು.

ಇದನ್ನೂ ಓದಿ: Russia-Ukraine war: ಭಾರತದ ನಿಲುವಿನಿಂದ ತುಂಬಾ ನಿರಾಶೆಯಾಗಿದೆ ಎಂದ ಬ್ರಿಟನ್ ಸಚಿವೆ

Published On - 9:07 pm, Thu, 17 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ