AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರು ಪ್ರತಿಭಾವಂತರು, ಪರಿಶ್ರಮಿಗಳು; ಹಾಡಿ ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಭಾರತೀಯರು ಪ್ರತಿಭಾವಂತರು ಹಾಗೂ ಪರಿಶ್ರಮಿಗಳು. ಅಭಿವೃದ್ಧಿಯ ವಿಚಾರದಲ್ಲಿ ಅತ್ಯದ್ಭುತ ಫಲಿತಾಂಶ ಕಂಡುಕೊಳಲು ಬೇಕಾದಷ್ಟು ಸಾಮರ್ಥ್ಯ ಭಾರತೀಯರಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬಣ್ಣಿಸಿದ್ದಾರೆ.

ಭಾರತೀಯರು ಪ್ರತಿಭಾವಂತರು, ಪರಿಶ್ರಮಿಗಳು; ಹಾಡಿ ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
TV9 Web
| Updated By: Ganapathi Sharma|

Updated on: Nov 05, 2022 | 10:45 AM

Share

ಮಾಸ್ಕೋ: ಸ್ವತಂತ್ರ ವಿದೇಶಾಂಗ ನೀತಿ ಬಗ್ಗೆ ಕಳೆದ ವಾರವಷ್ಟೇ ಭಾರತವನ್ನು (India) ಹೊಗಳಿದ್ದ ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin), ಇದೀಗ ಮತ್ತೆ ಭಾರತೀಯರ ಬಗ್ಗೆ ಬಹಳ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಭಾರತೀಯರು ಪ್ರತಿಭಾವಂತರು ಹಾಗೂ ಪರಿಶ್ರಮಿಗಳು ಎಂದು ಅವರು ಬಣ್ಣಿಸಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಅತ್ಯದ್ಭುತ ಫಲಿತಾಂಶ ಕಂಡುಕೊಳಲು ಬೇಕಾದಷ್ಟು ಸಾಮರ್ಥ್ಯ ಭಾರತದಲ್ಲಿದೆ ಎಂಬ ಕುರಿತು ಅನುಮಾನವೇ ಬೇಡ ಎಂದು ಅವರು ಹೇಳಿದ್ದಾರೆ.

ರಷ್ಯಾದ ಏಕತಾ ದಿನದಂದು ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಭಾರತವು ಅತ್ಯುತ್ತಮ ಫಲಿತಾಂಶ ಹೊಂದಲಿದೆ ಎಂಬ ವಿಚಾರದಲ್ಲಿ ಅನುಮಾನವೇ ಬೇಡ. ಭಾರತದಲ್ಲಿರುವ ಸುಮಾರು ಒಂದೂವರೆ ಶತಕೋಟಿ ಜನರಲ್ಲಿ ಆ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ. ಪುಟಿನ್ ರಷ್ಯಾ ಭಾಷೆಯಲ್ಲಿ ಮಾಡಿರುವ ಭಾಷಣದ ಇಂಗ್ಲಿಷ್ ಅನುವಾದವನ್ನು ರಾಯಿಟರ್ಸ್ ಸುದ್ದಿ ಸಂಸ್ಥೆ ಪ್ರಕಟಿಸಿದೆ.

ಆಫ್ರಿಕಾದ ವಸಾಹತುಶಾಹಿ, ಭಾರತದ ಸಾಮರ್ಥ್ಯ ಹಾಗೂ ರಷ್ಯಾದ ನಾಗರಿಕತೆ, ಸಂಸ್ಕೃತಿಯ ಬಗ್ಗೆ ಕೂಡ ಪುಟಿನ್ ಮಾತನಾಡಿದ್ದಾರೆ.

ಭಾರತದ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ್ದ ಪುಟಿನ್

ಜಾಗತಿಕ ಒತ್ತಡಗಳ ನಡುವೆಯೂ ವಿದೇಶಾಂಗ ನೀತಿಯಲ್ಲಿ ಸ್ವತಂತ್ರ ನಿಲುವು ಕಾಯ್ದುಕೊಂಡ ಬಗ್ಗೆ ಇತ್ತೀಚೆಗೆ ಭಾರತವನ್ನು ಪುಟಿನ್ ಶ್ಲಾಘಿಸಿದ್ದರು. ವಿದೇಶಾಂಗ ನೀತಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.

‘ಮೇಕ್ ಇನ್ ಇಂಡಿಯಾ’ ಯೋಜನೆಯನ್ನು ಉಲ್ಲೇಖಿಸಿ, ಮೋದಿ ಓರ್ವ ದೇಶಭಕ್ತ ಎಂದು ಬಣ್ಣಿಸಿದ್ದರು. ನರೇಂದ್ರ ಮೋದಿ ಅವರು ಒತ್ತಡಗಳ ನಡುವೆಯೂ ತಮ್ಮ ದೇಶ ಮತ್ತು ಜನರ ಹಿತಾಸಕ್ತಿಗೆ ಪೂರಕವಾಗಿ ಸ್ವತಂತ್ರ ವಿದೇಶಾಂಗ ನೀತಿಯನ್ನು ಅನುಸರಿಸಲು ಸಮರ್ಥರಾಗಿರುವ ವಿಶ್ವದ ನಾಯಕರಲ್ಲಿ ಒಬ್ಬರಾಗಿದ್ದಾರೆ ಎಂದು ಪುಟಿನ್ ಬಣ್ಣಿಸಿದ್ದರು.

ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತ ತಟಸ್ಥ ನಿಲುವು ತಳೆದಿರುವುದು ಪುಟಿನ್ ಅವರ ಭಾರತದ ಕುರಿತ ಒಲವಿಗೆ ಕಾರಣವಾಗಿದೆ ಎನ್ನಲಾಗಿದೆ. ಯುದ್ಧವನ್ನು ಖಂಡಿಸಿ ರಷ್ಯಾದಿಂದ ಯುರೋಪ್ ದೇಶಗಳು ತೈಲ ಆಮದು ನಿಲ್ಲಿಸಿದಾಗ, ಭಾರತ ಹೆಚ್ಚೆಚ್ಚು ಕಚ್ಚಾ ತೈಲ ಆಮದಿಗೆ ಮುಂದಾಗಿತ್ತು. ಆ ಮೂಲಕ ರಷ್ಯಾಕ್ಕೆ ಪರೋಕ್ಷವಾಗಿ ನೆರವಾಗಿತ್ತು.

ಇದನ್ನೂ ಓದಿ: ಒತ್ತಡಗಳ ನಡುವೆಯೂ ವಿದೇಶಾಂಗ ನೀತಿಯಲ್ಲಿ ಸ್ವಾತಂತ್ರ್ಯ ಕಾಯ್ದುಕೊಂಡ ಭಾರತ: ಮೋದಿ ನಿಲುವಿಗೆ ಪುಟಿನ್ ಶ್ಲಾಘನೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?