AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್

ಇಸ್ಲಾಮಾಬಾದ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ಗಡಿಯಾಚೆಗಿನ ಚಟುವಟಿಕೆಗಳು ಭಯೋತ್ಪಾದನೆ, ಉಗ್ರವಾದ ಮತ್ತು ಪ್ರತ್ಯೇಕತಾವಾದ ದಿಂದ ಕೂಡಿದ್ದರೆ ವ್ಯಾಪಾರವನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ನೆಲದಲ್ಲಿ ಉಗ್ರವಾದದ ವಿರುದ್ಧ ಗುಡುಗಿದ ಜೈಶಂಕರ್
ಎಸ್ ಜೈಶಂಕರ್ Image Credit source: India Today
ನಯನಾ ರಾಜೀವ್
|

Updated on:Oct 16, 2024 | 12:48 PM

Share

ಎರಡು ರಾಷ್ಟ್ರಗಳ ನಡುವಿನ ಗಡಿಯಾಚೆಗಿನ ಚಟುವಟಿಕೆಗಳು ಉಗ್ರವಾದ ಮತ್ತು ಪ್ರತ್ಯೇಕತಾವಾದದಿಂದ ಕೂಡಿದ್ದರೆ, ಅದು ದ್ವಿಪಕ್ಷೀಯ ವ್ಯಾಪಾರ, ಸಂಬಂಧಗಳಿಗೆ ಸಹಕಾರಿಯಲ್ಲ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಭಿವೃದ್ಧಿ ಮತ್ತು ಬೆಳವಣಿಗೆಗೆ ಶಾಂತಿ ಮತ್ತು ಸ್ಥಿರತೆಯ ಅಗತ್ಯವಿದೆ ಎಂಬುದು ಮೂಲತತ್ವವಾಗಿದೆ ಎಂದರು.

ಏಕಪಕ್ಷೀಯ ಅಜೆಂಡಾಗಳ ಮೂಲಕ ಸಂಬಂಧಗಳು ಪ್ರಗತಿ ಹೊಂದಲು ಸಾಧ್ಯವಿಲ್ಲ, ಅಭಿವೃದ್ಧಿ ಮತ್ತು ಪ್ರಗತಿಗೆ ಶಾಂತಿ ಮತ್ತು ಸ್ಥಿರತೆ ಅಗತ್ಯ ಎಂಬುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಈ ಕೆಲಸಗಳು ಆಗದಿದ್ದರೆ ಅಭಿವೃದ್ಧಿಯ ಮಾತೇ ಇಲ್ಲ ಎಂದು ಹೇಳಿದರು.

ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜೈಶಂಕರ್ ಒತ್ತಿ ಹೇಳಿದರು. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಘರ್ಷಣೆಗಳು ಮತ್ತು ಮಧ್ಯಪ್ರಾಚ್ಯ ಉದ್ವಿಗ್ನತೆಯ ಬಗ್ಗೆ ಮಾತನಾಡಿದ ಅವರು, ಎಸ್‌ಸಿಒ ಸಭೆಯು ವಿಶ್ವ ವ್ಯವಹಾರಗಳಲ್ಲಿ ಕಠಿಣ ಸಮಯದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಇಸ್ಲಮಾಬಾದ್​ನಲ್ಲಿ ಎಸ್​ಸಿಒ​ ಶೃಂಗಸಭೆ; ಭಾರತದ ಸಚಿವ ಜೈಶಂಕರ್​ ಕೈ ಕುಲುಕಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು, 9 ವರ್ಷಗಳ ನಂತರ ಭಾರತದ ವಿದೇಶಾಂಗ ಸಚಿವರೊಬ್ಬರ ಮೊದಲ ಭೇಟಿಯಾಗಿದೆ. ಜೈಶಂಕರ್ ಮಂಗಳವಾರ ಸಂಜೆ ಇಸ್ಲಾಮಾಬಾದ್​ಗೆ ಹೋಗಿದ್ದರು. SCO ಸಭೆಯ ಆಹ್ವಾನಿತ ಗಣ್ಯರಿಗೆ ಮಂಗಳವಾರ ರಾತ್ರಿ ಶೆಹಬಾಜ್ ಷರೀಪ್ ಅವರು ತಮ್ಮ ನಿವಾಸದಲ್ಲಿ ಔತಣಕೂಟದ ಏರ್ಪಡಿಸಿದ್ದರು.

ಈ ವೇಳೆ ಷರೀಪ್ ಹಾಗೂ ಜೈಶಂಕರ್ ಅವರು ಔಪಚಾರಿಕವಾಗಿ ಅಷ್ಟೇ ಮಾತುಕತೆ ನಡೆಸಿದರು. ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ಸಚಿವರಾಗಿದ್ದಾಗ 2015ರ ಡಿಸೆಂಬರ್‌ನಲ್ಲಿ ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ರಷ್ಯಾ ಮತ್ತು ಚೀನಾ 1996 ಮತ್ತು 2001ರ ನಡುವೆ ನ್ಯಾಟೊಗೆ ಪ್ರತಿಯಾಗಿ ಕಾರ್ಯತಂತ್ರದ ಭಾಗವಾಗಿ ಕಾರ್ಯನಿರ್ವಹಿಸಲು ಎಸ್‌ಸಿಒ ಪ್ರಾರಂಭಿಸಿದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:47 pm, Wed, 16 October 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ