AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನಿಮ್ಮ ಕರ್ಮದ ಫಲ, ಜಗತ್ತನ್ನು ದೂಷಿಸಬೇಡಿ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಜೈಶಂಕರ್

ಇದು ನಿಮ್ಮ ಕರ್ಮದ ಫಲ, ಜಗತ್ತನ್ನು ದೂಷಿಸಬೇಡಿ ಎಂದು ವಿದೇಶಾಂಗ ಸಚಿವ ಎಚ್​ ಜೈಶಂಕರ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇದು ನಿಮ್ಮ ಕರ್ಮದ ಫಲ, ಜಗತ್ತನ್ನು ದೂಷಿಸಬೇಡಿ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಜೈಶಂಕರ್
ಜೈಶಂಕರ್Image Credit source: PTI
ನಯನಾ ರಾಜೀವ್
|

Updated on: Sep 29, 2024 | 9:19 AM

Share

ಇದು ನಿಮ್ಮ ಕರ್ಮದ ಫಲ, ಜಗತ್ತನ್ನು ದೂಷಿಸಬೇಡಿ ಎಂದು ವಿದೇಶಾಂಗ ಸಚಿವ ಎಚ್​ ಜೈಶಂಕರ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪಾಕಿಸ್ತಾನದ ಜಿಡಿಪಿಯನ್ನು ಮೂಲಭೂತವಾದ ಮತ್ತು ಭಯೋತ್ಪಾದನೆಯನ್ನು ಹರಡುವ ದೃಷ್ಟಿಯಿಂದ ಮಾತ್ರ ಅಳೆಯಬಹುದು, ಇದಕ್ಕಾಗಿ ಅವರು ಜಗತ್ತನ್ನು ದೂಷಿಸಲು ಸಾಧ್ಯವಿಲ್ಲ, ಅದು ಅವರ ಕರ್ಮ ಎಂದರು. ಕೆಲವು ದೇಶಗಳು ನಮ್ಮ ನಿಯಂತ್ರಣದಲ್ಲಿಲ್ಲ, ಇನ್ನೂ ಕೆಲವು ದೇಶಗಳು ಉದ್ದೇಶಪೂರ್ವಕವಾಗಿಯೇ ಹಾನಿಕಾರಕ ಪರಿಣಾಮವನ್ನು ಉಂಟುಮಾಡುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ, ಇದಕ್ಕೆ ಪಾಕಿಸ್ತಾನವೇ ದೊಡ್ಡ ಉದಾಹರಣೆ.

ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ನೀತಿಯು ಎಂದಿಗೂ ಯಶಸ್ವಿಯಾಗುವುದಿಲ್ಲ, 1947 ರಲ್ಲಿ ರಚನೆಯಾದಾಗಿನಿಂದ ತನ್ನ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನವು ತನ್ನ ಪ್ರಜ್ಞಾಪೂರ್ವಕ ಆಯ್ಕೆಗಳಿಂದಾಗಿಯೇ ಹಿಂದುಳಿದಿದೆ ಎಂದರು.

ಮತ್ತಷ್ಟು ಓದಿ: ಗಾಜಾದಲ್ಲಿನ ಪರಿಸ್ಥಿತಿ ಅತ್ಯಂತ ಕಳವಳಕಾರಿ, ಕದನ ವಿರಾಮಕ್ಕೆ ಭಾರತ ಬೆಂಬಲ: ಜೈಶಂಕರ್

ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಪ್ಯಾಲೆಸ್ತೀನ್‌ನೊಂದಿಗೆ ಹೋಲಿಸಿದ್ದಾರೆ ಮತ್ತು ಜನರು ತಮ್ಮ ಸ್ವಾತಂತ್ರ್ಯ ಮತ್ತು ಸ್ವ-ನಿರ್ಣಯದ ಹಕ್ಕಿಗಾಗಿ ಶತಮಾನದಿಂದ ಹೋರಾಡಿದ್ದಾರೆ ಎಂದು ಹೇಳಿದ್ದರು. ಯುಎನ್ ಸೆಕ್ಯುರಿಟಿ ಕೌನ್ಸಿಲ್ ನಿರ್ಣಯಗಳು ಮತ್ತು ಕಾಶ್ಮೀರಿ ಜನರ ಇಚ್ಛೆಗೆ ಅನುಗುಣವಾಗಿ ಮಾತುಕತೆ ನಡೆಸಬೇಕೆಂದು ಅವರು ಒತ್ತಾಯಿಸಿದರು.

ಪರಸ್ಪರ ವ್ಯೂಹಾತ್ಮಕ ಸಂಯಮದ ವ್ಯವಸ್ಥೆಗಾಗಿ ಪಾಕಿಸ್ತಾನದ ಪ್ರಸ್ತಾವನೆಯನ್ನು ಭಾರತ ತಿರಸ್ಕರಿಸಿದೆ ಎಂದು ಪಾಕಿಸ್ತಾನದ ಪ್ರಧಾನಿ ಹೇಳಿಕೊಂಡರು, ಭಾರತೀಯ ನಾಯಕತ್ವವು “ಆಜಾದ್ ಕಾಶ್ಮೀರ” ಎಂದು ಕರೆಯುವ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಲು ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದ್ದರು.

ಶೆಹಬಾಜ್ ಷರೀಫ್ ಅವರ ಹೇಳಿಕೆಯನ್ನು ಭಾರತ ತೀವ್ರವಾಗಿ ಟೀಕಿಸಿದೆ. ಭಾರತೀಯ ರಾಯಭಾರಿ ಭಾವಿಕಾ ಮಂಗಳಾನಂದನ್, ಜಗತ್ತಿಗೆ ತಿಳಿದಿರುವಂತೆ, ಪಾಕಿಸ್ತಾನವು ತನ್ನ ನೆರೆಹೊರೆಯವರ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಿಕೊಂಡಿದೆ ಎಂದು ಹೇಳಿದರು ಅಂತಹ ದೇಶವು ಎಲ್ಲಿಯಾದರೂ ಹಿಂಸೆಯ ಬಗ್ಗೆ ಮಾತನಾಡುವುದು ಬೂಟಾಟಿಕೆಯಾಗಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ