AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿ ರೂವಾರಿ ಸೈಫುಲ್ಲಾ ಕಸೂರಿಯಿಂದ ಪಾಕ್​ನಲ್ಲಿ ಭಾರತ ವಿರೋಧಿ ರ್‍ಯಾಲಿ

ಪಹಲ್ಗಾಮ್(Pahalgam) ದಾಳಿ ಬಳಿಕ ತಲೆ ಮರೆಸಿಕೊಂಡಿದ್ದ ದಾಳಿ ರೂವಾರಿ ಸೈಫುಲ್ಲಾ ಕಸೂರಿ ಈಗ ಮತ್ತೆ ಬಾಲ ಬಿಚ್ಚಿದ್ದು, ಭಾರತ ವಿರೋಧಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನಾವಂತೂ ಉಗ್ರರನ್ನು ಸಲಹುತ್ತಿಲ್ಲ, ನಮಗೆ ಅವರಿಗೆ ಸಂಬಂಧವಿಲ್ಲ ಎಂದು ಹೇಳುತ್ತಲೇ ಪಾಕಿಸ್ತಾನದ ಅಧಿಕಾರಿಗಳು ಉಗ್ರರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆ ಮಾಡಲಾಗಿತ್ತು.

ಪಹಲ್ಗಾಮ್ ದಾಳಿ ರೂವಾರಿ ಸೈಫುಲ್ಲಾ ಕಸೂರಿಯಿಂದ ಪಾಕ್​ನಲ್ಲಿ ಭಾರತ ವಿರೋಧಿ ರ್‍ಯಾಲಿ
ಸೈಫುಲ್ಲಾ ಕಸೂರಿ
ನಯನಾ ರಾಜೀವ್
|

Updated on: May 29, 2025 | 12:55 PM

Share

ಇಸ್ಲಾಮಾಬಾದ್, ಮೇ 29: ಪಹಲ್ಗಾಮ್(Pahalgam) ದಾಳಿ ಬಳಿಕ ತಲೆ ಮರೆಸಿಕೊಂಡಿದ್ದ ದಾಳಿ ರೂವಾರಿ ಸೈಫುಲ್ಲಾ ಕಸೂರಿ ಈಗ ಮತ್ತೆ ಬಾಲ ಬಿಚ್ಚಿದ್ದು, ಭಾರತ ವಿರೋಧಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನಾವಂತೂ ಉಗ್ರರನ್ನು ಸಲಹುತ್ತಿಲ್ಲ, ನಮಗೆ ಅವರಿಗೆ ಸಂಬಂಧವಿಲ್ಲ ಎಂದು ಹೇಳುತ್ತಲೇ ಪಾಕಿಸ್ತಾನದ ಅಧಿಕಾರಿಗಳು ಉಗ್ರರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿ ಅಮಾಯಕರನ್ನು ಹತ್ಯೆ ಮಾಡಲಾಗಿತ್ತು. ಲಷ್ಕರ್​​ ಎ ತೊಯ್ಬಾದ ಕಮಾಂಡರ್ ಸೈಫುಲ್ಲಾ ಸಾರ್ವಕನಿಕವಾಗಿ ಕಾಣಸಿಕೊಂಡಿದ್ದಾರೆ. ಪಾಕಿಸ್ತಾನಿ ರಾಜಕೀಯ ನಾಯಕರು ಮತ್ತು ಇತರ ವಾಂಟೆಡ್ ಭಯೋತ್ಪಾದಕರೊಂದಿಗೆ ರಾಜಕೀಯ ರ್‍ಯಾಲಿಯಲ್ಲಿ ವೇದಿಕೆಯನ್ನು ಹಂಚಿಕೊಂಡರು.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಕಸೂರ್​ನಲ್ಲಿ ಪಾಕಿಸ್ತಾನ್ ಮರ್ಕಜಿ ಮುಸ್ಲಿಂ ಲೀಗ್ (ಪಿಎಂಎಂಎಲ್) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈತ ಭಾಗವಹಿಸಿದ್ದ. ಈ ರ್‍ಯಾಲಿಯಲ್ಲಿ ಭಾರತ ವಿರೋಧಿ ಘೋಷಣೆಗಳು ಕೂಡ ಇದ್ದವು. ಎಲ್‌ಇಟಿ ಸಂಸ್ಥಾಪಕ ಹಫೀಜ್ ಸಯೀದ್ ಅವರ ಪುತ್ರ ಮತ್ತು ತಲ್ಹಾ ಸಯೀದ್ ಕೂಡ ಇದ್ದ.

ಮತ್ತಷ್ಟು ಓದಿ: ಪಹಲ್ಗಾಮ್​ ದಾಳಿಗೆ ಒಂದು ತಿಂಗಳು, ಆಪರೇಷನ್​ ಸಿಂಧೂರ್​ನಿಂದ ಸರ್ವಪಕ್ಷ ಸಂಸದರ ನಿಯೋಗ ರಚನೆವರೆಗೆ ಇಲ್ಲಿದೆ ಮಾಹಿತಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಎಂದು ನನ್ನನ್ನು ದೂಷಿಸಲಾಯಿತು, ಈಗ ನನ್ನ ಹೆಸರು ಇಡೀ ಜಗತ್ತಿನಲ್ಲಿ ಪ್ರಸಿದ್ಧವಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಕಸೂರ್‌ನಲ್ಲಿ ಕಸೂರಿ ಹೇಳಿದ್ದಾರೆ. ಅಲಹಾಬಾದ್‌ನಲ್ಲಿ ಮುದಸ್ಸಿರ್ ಶಹೀದ್ ಹೆಸರಿನಲ್ಲಿ ಕೇಂದ್ರ, ರಸ್ತೆ ಮತ್ತು ಆಸ್ಪತ್ರೆಯನ್ನು ನಿರ್ಮಿಸುವ ಯೋಜನೆಯನ್ನು ಘೋಷಿಸಿದ್ದಾನೆ.

ಮೂಲಗಳ ಪ್ರಕಾರ, ಪಹಲ್ಗಾಮ್ ಹತ್ಯಾಕಾಂಡದ ನಂತರ ಭಾರತ ನಡೆಸಿದ ಪ್ರತೀಕಾರದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಹತರಾದ ಹಲವಾರು ಉನ್ನತ ಮಟ್ಟದ ಭಯೋತ್ಪಾದಕ ಕಾರ್ಯಕರ್ತರಲ್ಲಿ ಮುದಸ್ಸಿರ್ ಅಹ್ಮದ್ ಒಬ್ಬ. ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಪಟ್ಟಿಯಲ್ಲಿ 32 ನೇ ಸ್ಥಾನದಲ್ಲಿರುವ ತಲ್ಹಾ ಸಯೀದ್, ಈ ರ್‍ಯಾಲಿಯಲ್ಲಿ ಜಿಹಾದಿ ಘೋಷಣೆಗಳು ಮತ್ತು ನಾರಾ-ಎ-ತಕ್ಬೀರ್ಗಳಿಂದ ತುಂಬಿದ ಉದ್ರಿಕ್ತ ಭಾಷಣ ಮಾಡಿದರು.

ಪಾಕಿಸ್ತಾನದ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲಾಹೋರ್‌ನ NA-122 ಸ್ಥಾನದಿಂದ ಸಂಸತ್ತಿಗೆ ಸ್ಪರ್ಧಿಸಿ ವಿಫಲರಾದ ಸಯೀದ್, ನಿಷೇಧಿತ ಎಲ್‌ಇಟಿಯ ರಾಜಕೀಯ ಪಕ್ಷವೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಪಿಎಂಎಂಎಲ್‌ನೊಂದಿಗೆ ತನ್ನ ಸಾರ್ವಜನಿಕ ಸಂಬಂಧವನ್ನು ಮುಂದುವರೆಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್