AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಂಟಿಲೇಟರ್ ತೆರವು, ಸಲ್ಮಾನ್ ರಶ್ದಿ ಚೇತರಿಸಿಕೊಳ್ಳುತ್ತಿದ್ದಾರೆ: ಮಗ ಜಾಫರ್ ಟ್ವೀಟ್

ನಿನ್ನೆ ವೆಂಟಿಲೇಟರ್ ತೆರವು ಮಾಡಿದ್ದರಿಂದ ಮತ್ತು ಹೆಚ್ಚುವರಿ ಆಕ್ಸಿಜನ್ ತೆಗೆದಿರುವುದರಿಂದ ನಾವು ನಿಟ್ಟುಸಿರು ಬಿಟ್ಟಿದ್ದೇವೆ. ಅವರು ಈಗ ಕೆಲವು ಮಾತುಗಳನ್ನಾಡಲು ಸಾಧ್ಯವಾಗಿದೆ.

ವೆಂಟಿಲೇಟರ್ ತೆರವು, ಸಲ್ಮಾನ್ ರಶ್ದಿ ಚೇತರಿಸಿಕೊಳ್ಳುತ್ತಿದ್ದಾರೆ: ಮಗ ಜಾಫರ್ ಟ್ವೀಟ್
ಸಲ್ಮಾನ್ ರಶ್ದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 15, 2022 | 3:11 PM

Share

ಲಂಡನ್: ನ್ಯೂಯಾರ್ಕ್​​ ನಲ್ಲಿ (New York)ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಲೇಖಕ ಸಲ್ಮಾನ್ ರಶ್ದಿ (Salman Rushdie) ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ವೆಂಟಿಲೇಟರ್ ತೆರವು ಮಾಡಲಾಗಿದೆ ಎಂದು ಅವರ ಮಗ ಭಾನುವಾರ ಹೇಳಿದ್ದಾರೆ. ನಿನ್ನೆ ವೆಂಟಿಲೇಟರ್ ತೆರವು ಮಾಡಿದ್ದರಿಂದ ಮತ್ತು ಹೆಚ್ಚುವರಿ ಆಕ್ಸಿಜನ್ ತೆಗೆದಿರುವುದರಿಂದ ನಾವು ನಿಟ್ಟುಸಿರು ಬಿಟ್ಟಿದ್ದೇವೆ. ಅವರು ಈಗ ಕೆಲವು ಮಾತುಗಳನ್ನಾಡಲು ಸಾಧ್ಯವಾಗಿದೆ ಎಂದು ಮಗ ಜಾಫರ್ ಟ್ವೀಟ್ ಮಾಡಿದ್ದಾರೆ. ರಶ್ದಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಏಜೆಂಟ್ ಆಂಡ್ರ್ಯೂ ವಾಲಿ ಭಾನುವಾರ ಹೇಳಿದ್ದಾರೆ. ದಾಳಿಯಿಂದಾಗಿ ಅವರಿಗಾದ ಗಾಯ ಬದುಕು ಬದಲಿಸುವಂತದ್ದು ಮತ್ತು ಗಂಭೀರವಾದುದು. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಅವರ ರೇಗುವ ಮತ್ತು ಹಾಸ್ಯ ಪ್ರವೃತ್ತಿಗೆ ಕುಂದುಂಟಾಗಿಲ್ಲ ಎಂದಿದ್ದಾರೆ. ರಶ್ದಿ ಅವರ ಸಹಾಯಕ್ಕೆ ಬಂದು ಅವರಿಗೆ ರಕ್ಷಣೆ ನೀಡಿದ ಸಭಿಕರಿಗೆ ಮತ್ತು ಜಗತ್ತಿನಾದ್ಯಂತ ಅವರಿಗೆ ಹರಿದು ಬರುತ್ತಿರುವ ಪ್ರೀತಿ ಮತ್ತು ಬೆಂಬಲಕ್ಕೆ ಜಾಫರ್ ಧನ್ಯವಾದ ಹೇಳಿದ್ದಾರೆ. ರಶ್ದಿ ಅವರ ಹೊಟ್ಟೆಗೂ ಗಾಯಗಳಾಗಿದ್ದು, ಅವರು ಒಂದು ಕಣ್ಣು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಏಜೆಂಟ್ ಹೇಳಿದ್ದರು.

ಇರಾನಿನ ನಾಯಕ,  ರಶ್ದಿ ಅವರು “ದಿ ಸೈಟಾನಿಕ್ ವರ್ಸಸ್” ನಲ್ಲಿ ಇಸ್ಲಾಂ ಮತ್ತು ಪ್ರವಾದಿ ಮೊಹಮ್ಮದ್ ನಿಂದೆ ಮಾಡಿದ್ದಾರೆ ಎಂದು ಆರೋಪಿಸಿ ಕೊಲ್ಲಲು ಕರೆ ನೀಡಿದ ನಂತರ ರಶ್ದಿ ಪೊಲೀಸ್ ರಕ್ಷಣೆಯಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ. ಅವರು ಪಶ್ಚಿಮ ನ್ಯೂಯಾರ್ಕ್ ರಾಜ್ಯದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲು ಹೊರಟಿದ್ದಾಗ ಒಬ್ಬ ವ್ಯಕ್ತಿ ವೇದಿಕೆಯ ಮೇಲೆ ಧಾವಿಸಿ ಕುತ್ತಿಗೆ ಮತ್ತು ಹೊಟ್ಟೆಗೆ ಹಲವು ಬಾರಿ ಇರಿದಿದ್ದಾನೆ.

ಶಂಕಿತ ದಾಳಿಕೋರ, ಹಾದಿ ಮಾತರ್(24)ನ್ನು ಅಲ್ಲಿದ್ದಸಿಬ್ಬಂದಿ ಮತ್ತು ಇತರ ಪ್ರೇಕ್ಷಕರು ಹಿಡಿದು ಬೀಳಿಸಿದ ನಂತರ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದೆ. ಶನಿವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತಾನು ಕೊಲೆ ಯತ್ನ ಮಾಡಿ ತಪ್ಪೆಸಗಿಲ್ಲ ಎಂದು ಆತ ಹೇಳಿದ್ದಾನೆ.

ಇದನ್ನೂ ಓದಿ
Image
Salman Rushdie: ಚಾಕುವಿನಿಂದ ಇರಿತಕ್ಕೊಳಗಾದ ಲೇಖಕ ಸಲ್ಮಾನ್ ರಶ್ದಿಗೆ ವೆಂಟಿಲೇಟರ್​​ನಲ್ಲಿ ಚಿಕಿತ್ಸೆ; ಒಂದು ಕಣ್ಣಿಗೆ ತೀವ್ರ ಹಾನಿ
Image
Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ

 ವಿದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್