AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಶಾವರದಲ್ಲಿ ಇಳಿಯುತ್ತಿದ್ದಂತೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಪಾರು

ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ವಿಮಾನದ ಎಡ ಲ್ಯಾಂಡಿಂಗ್ ಗೇರ್‌ನಿಂದ ಹೊಗೆ ಮತ್ತು ಬೆಂಕಿಕಿಡಿಗಳು ಬರುತ್ತಿರುವುದನ್ನು ಕಂಡು ಪೈಲಟ್‌ಗಳಿಗೆ ಎಚ್ಚರಿಕೆ ನೀಡಿದರು. ಅವರು ವಿಮಾನ ನಿಲ್ದಾಣದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳಿಗೂ ಮಾಹಿತಿ ನೀಡಿದ್ದಾರೆ ಎಂದು ಸಿಎಎ ವಕ್ತಾರ ಸೈಫುಲ್ಲಾ  ಹೇಳಿದ್ದಾರೆ.ಸಿಎಎ ಅಗ್ನಿಶಾಮಕ ವಾಹನಗಳು ತ್ವರಿತವಾಗಿ ಆಗಮಿಸಿ ಲ್ಯಾಂಡಿಂಗ್ ಗೇರ್‌ನಲ್ಲಿದ್ದ ಬೆಂಕಿಯನ್ನು ನಂದಿಸಿದವು ಎಂದು ಹೇಳಿಕೆ ತಿಳಿಸಿದೆ.

ಪೇಶಾವರದಲ್ಲಿ ಇಳಿಯುತ್ತಿದ್ದಂತೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ; ಪ್ರಯಾಣಿಕರು ಪಾರು
ಸೌದಿ ಏರ್​​ಲೈನ್ಸ್
ರಶ್ಮಿ ಕಲ್ಲಕಟ್ಟ
|

Updated on:Jul 11, 2024 | 8:00 PM

Share

ಪೇಶಾವರ ಜುಲೈ 11: ರಿಯಾದ್‌ನಿಂದ ಬಂದ ಸೌದಿ ಏರ್‌ಲೈನ್ಸ್ (Saudi Airlines) ವಿಮಾನವು ಗುರುವಾರ ಪಾಕಿಸ್ತಾನದ (pakistan) ಪೇಶಾವರದ ಬಚಾ ಖಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಬೆಂಕಿ ಹೊತ್ತಿಕೊಂಡಿದೆ. ಎಲ್ಲಾ 276 ಪ್ರಯಾಣಿಕರು ಮತ್ತು 21 ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎ) ತಿಳಿಸಿದೆ ಎಂದು ಪಾಕಿಸ್ತಾನ ಮೂಲದ ಡಾನ್ ಪತ್ರಿಕೆ ವರದಿ ಮಾಡಿದೆ.

ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ವಿಮಾನದ ಎಡ ಲ್ಯಾಂಡಿಂಗ್ ಗೇರ್‌ನಿಂದ ಹೊಗೆ ಮತ್ತು ಬೆಂಕಿಕಿಡಿಗಳು ಬರುತ್ತಿರುವುದನ್ನು ಕಂಡು ಪೈಲಟ್‌ಗಳಿಗೆ ಎಚ್ಚರಿಕೆ ನೀಡಿದರು. ಅವರು ವಿಮಾನ ನಿಲ್ದಾಣದ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳಿಗೂ ಮಾಹಿತಿ ನೀಡಿದ್ದಾರೆ ಎಂದು ಸಿಎಎ ವಕ್ತಾರ ಸೈಫುಲ್ಲಾ  ಹೇಳಿದ್ದಾರೆ.

ಸಿಎಎ ಅಗ್ನಿಶಾಮಕ ವಾಹನಗಳು ತ್ವರಿತವಾಗಿ ಆಗಮಿಸಿ ಲ್ಯಾಂಡಿಂಗ್ ಗೇರ್‌ನಲ್ಲಿದ್ದ ಬೆಂಕಿಯನ್ನು ನಂದಿಸಿದವು ಎಂದು ಹೇಳಿಕೆ ತಿಳಿಸಿದೆ. ಅಗ್ನಿಶಾಮಕ ಟೆಂಡರ್‌ಗಳು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದವು. ತಕ್ಷಣ ಲ್ಯಾಂಡಿಂಗ್ ಗೇರ್‌ನಲ್ಲಿ ಬೆಂಕಿಯನ್ನು ನಿಯಂತ್ರಿಸಿ, ವಿಮಾನವನ್ನು ದೊಡ್ಡ ಅಪಘಾತದಿಂದ ರಕ್ಷಿಸಲಾಗಿದೆ. ಎಲ್ಲಾ 276 ಪ್ರಯಾಣಿಕರು ಮತ್ತು 21 ಸಿಬ್ಬಂದಿಯನ್ನು ತುಂಬಬಹುದಾದ ಸ್ಲೈಡ್‌ನೊಂದಿಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಸೈಫುಲ್ಲಾ ಹೇಳಿದ್ದಾರೆ.

ವಿಮಾನವನ್ನು ನಿಲ್ಲಿಸಿ ಅಧಿಕಾರಿಗಳಿಗೆ ತಿಳಿಸಲಾಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಏರ್‌ಲೈನ್ಸ್ ತಿಳಿಸಿದೆ.

SV792 ಫ್ಲೈಟ್‌ನಲ್ಲಿ ರಿಯಾದ್‌ನಿಂದ ಪೇಶಾವರಕ್ಕೆ ಬರುತ್ತಿದ್ದ ತನ್ನ ವಿಮಾನವು ಪಾಕಿಸ್ತಾನದ ಪೇಶಾವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಟೈರ್‌ಗಳಲ್ಲಿ ಹೊಗೆಯನ್ನು ಕಾಣಿಸಿದೆ ಎಂದು ಎಂದು ಸೌದಿಯಾ ಸ್ಪಷ್ಟಪಡಿಸಿದೆ. ವಿಮಾನವನ್ನು ತಕ್ಷಣವೇ ನಿಲ್ಲಿಸಲಾಯಿತು ಮತ್ತು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸುವ ಸ್ಲೈಡ್ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ವಿಮಾನವು ಈಗ ತಜ್ಞರಿಂದ ತಾಂತ್ರಿಕ ಮೌಲ್ಯಮಾಪನಕ್ಕೆ ಒಳಗಾಗುತ್ತಿದೆ. ಇದು ರಿಪೇರಿಗಳನ್ನು ಒಳಗೊಂಡಿರುತ್ತದೆ, ಜೊತೆಗೆ ಸಮಗ್ರ ತಪಾಸಣೆ ಮತ್ತು ಅದರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆ ಮಾಡಲಾಗುತ್ತದೆ ಎಂದು ಏರ್‌ಲೈನ್ಸ್ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಟೇಕ್​ಆಫ್​ಗೂ ಮುನ್ನ ರನ್​ವೇನಲ್ಲೇ ಅಮೆರಿಕನ್ ಏರ್​ಲೈನ್ಸ್​ ವಿಮಾನದ ಟೈರ್​ ಸ್ಫೋಟ, ವಿಡಿಯೋ ಇಲ್ಲಿದೆ

ರಫ್ ಲ್ಯಾಂಡಿಂಗ್ ಹೊರತಾಗಿಯೂ, ಯಾವುದೇ ಗಾಯಗಳಾಗಿಲ್ಲ. ನಾಗರಿಕ ವಿಮಾನಯಾನ ಪ್ರಾಧಿಕಾರ ಮತ್ತು ಅಗ್ನಿಶಾಮಕ ದಳದವರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಹೊಗೆಯನ್ನು ನಂದಿಸಿ ಎಲ್ಲರ ಸುರಕ್ಷತೆಯನ್ನು ಖಾತ್ರಿಪಡಿಸಿದರು. ಸೌದಿಯಾ ಏರ್‌ಲೈನ್ಸ್ ಸಾರ್ವಜನಿಕರಿಗೆ ತಮ್ಮ ಸುರಕ್ಷತಾ ಬದ್ಧತೆಯ ಬಗ್ಗೆ ಭರವಸೆ ನೀಡಿದ್ದು, ವಿಮಾನವನ್ನು ಶೀಘ್ರದಲ್ಲೇ ಸೇವೆಗೆ ತರಲು ಸಂಪೂರ್ಣ ತಪಾಸಣೆ ಮತ್ತು ರಿಪೇರಿ ನಡೆಯುತ್ತಿದೆ ಎಂದು ಹೇಳಿದೆ.

ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಮತ್ತು ಎಲ್ಲಾ ವಿಮಾನಗಳು ನಿಗದಿತವಾಗಿ ಮುಂದುವರಿಯುತ್ತದೆ ಎಂದು ಪೇಶಾವರ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Thu, 11 July 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ