Sign In

By signing in or creating an account, you agree with Associated Broadcasting Company's Terms & Conditions and Privacy Policy.

Saudi Arabia Bus Crash: ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರಿದ್ದ ಬಸ್ ಅಪಘಾತ, 20 ಮಂದಿ ಸಾವು, 29ಕ್ಕೂ ಅಧಿಕ ಜನರಿಗೆ ಗಾಯ

ಹಜ್ ಯಾತ್ರಿಕರಿದ್ದ ಬಸ್​ ಅಪಘಾತಕ್ಕೀಡಾಗಿ 20 ಮಂದಿ ಮೃತಪಟ್ಟಿದ್ದು, 29ಕ್ಕೂ ಹೆಚ್ಚಿನ ಜನರು ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.

Saudi Arabia Bus Crash: ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರಿದ್ದ ಬಸ್ ಅಪಘಾತ, 20 ಮಂದಿ ಸಾವು, 29ಕ್ಕೂ ಅಧಿಕ ಜನರಿಗೆ ಗಾಯ
ಬಸ್ ಅಪಘಾತ
Follow us
ನಯನಾ ರಾಜೀವ್
|

Updated on: Mar 28, 2023 | 11:31 AM

ಹಜ್ ಯಾತ್ರಿಕರಿದ್ದ ಬಸ್​ ಅಪಘಾತಕ್ಕೀಡಾಗಿ 20 ಮಂದಿ ಮೃತಪಟ್ಟಿದ್ದು, 29ಕ್ಕೂ ಹೆಚ್ಚಿನ ಜನರು ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಮುಸ್ಲಿಮರಿಗೆ ಮೆಕ್ಕಾ ಮದೀನಾ ಅತ್ಯಂತ ಪವಿತ್ರ ಸ್ಥಳವಾಗಿದೆ. ಪ್ರತಿ ವರ್ಷ ಲಕ್ಷಾಂತರ ಜನರು ಇಲ್ಲಿಗೆ ಹೋಗುತ್ತಾರೆ. ಸೋಮವಾರ (ಮಾರ್ಚ್ 27) ಪವಿತ್ರ ನಗರವಾದ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸೇತುವೆಗೆ ಡಿಕ್ಕಿ ಹೊಡೆದಿದೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಘರ್ಷಣೆಯ ನಂತರ, ಬಸ್​ಗೆ ಬೆಂಕಿ ಹೊತ್ತಿಕೊಂಡಿತ್ತು, ಇದರಲ್ಲಿ 20 ಜನರು ಸಾವನ್ನಪ್ಪಿದ್ದರು ಮತ್ತು ಎರಡು ಡಜನ್​ಗಿಂತ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಸ್ಲಾಂ ಧರ್ಮದ ಪವಿತ್ರ ನಗರಗಳಾದ ಮೆಕ್ಕಾ ಮತ್ತು ಮದೀನಾಕ್ಕೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುತ್ತಿರುವಾಗ ದಕ್ಷಿಣ ಪ್ರಾಂತ್ಯದ ಅಸಿರ್‌ನಲ್ಲಿ ಈ ಘಟನೆ ಸಂಭವಿಸಿದೆ.

ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ ರಂಜಾನ್ ತಿಂಗಳಿನಲ್ಲಿ ಸಾಮಾನ್ಯವಾಗಿ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ ಮತ್ತು ಒಟ್ಟು ಗಾಯಗೊಂಡವರ ಸಂಖ್ಯೆ ಸುಮಾರು 29 ಎಂದು ರಾಜ್ಯ-ಸಂಯೋಜಿತ ಅಲ್-ಎಖ್ಬರಿಯಾ ಚಾನೆಲ್ ತಿಳಿಸಿದೆ. ವರದಿಯ ಪ್ರಕಾರ, ಬಸ್ ಅಪಘಾತದಲ್ಲಿ ಮೃತಪಟ್ಟವರು ವಿವಿಧ ದೇಶಗಳ ನಿವಾಸಿಗಳಾಗಿದ್ದಾರೆ.

ಅಪಘಾತ ಹೇಗೆ ಸಂಭವಿಸಿತು

ಒಂದು ಚಾನೆಲ್ ತನ್ನ ವರದಿಯಲ್ಲಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದರೆ, ಇನ್ನೊಂದು ಚಾನೆಲ್ ಒಕಾಜ್ ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದೆ. ಸೇತುವೆಗೆ ಡಿಕ್ಕಿ ಹೊಡೆದ ನಂತರ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.

ಅಕ್ಟೋಬರ್ 2019 ರಲ್ಲಿ, ಮದೀನಾದಲ್ಲಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ