AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ

ಭಾರತೀಯರಿಗೆ ಸೌದಿ ಪ್ರವೇಶ ನಿರ್ಬಂಧವಿದೆಯೇ ಎನ್ನುವ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಕೊವಿಡ್ ಭೀತಿ: ಸೌದಿ ಪ್ರಜೆಗಳಿಗೆ ಭಾರತ ಸೇರಿ 15 ದೇಶಗಳಿಗೆ ಸಂಚಾರ ನಿರ್ಬಂಧ
ಸೌದಿ ಅರೇಬಿಯಾದಲ್ಲಿ ಕೊವಿಡ್ ಭೀತಿ ಎದುರಾಗಿದೆ.
TV9 Web
| Edited By: |

Updated on:May 23, 2022 | 11:00 AM

Share

ರಿಯಾದ್: ಭಾರತ ಸೇರಿ 15 ದೇಶಗಳಿಗೆ ಪ್ರಯಾಣಿಸುವುದನ್ನು ತನ್ನ ಪ್ರಜೆಗಳಿಗೆ ಸೌದಿ ಅರೇಬಿಯಾ (Soudi Arabia) ನಿರ್ಬಂಧಿಸಿದೆ. ಇತ್ತೀಚಿನ ದಿನಗಳಲ್ಲಿ ಕೊವಿಡ್-19 (Covid) ಪ್ರಕರಣಗಳು ಹೆಚ್ಚಾಗುತ್ತಿರುವುದು ಇದಕ್ಕೆ ಮುಖ್ಯ ಕಾರಣ. ಭಾರತದೊಂದಿಗೆ ಲೆಬನಾನ್, ಸಿರಿಯಾ, ಟರ್ಕಿ, ಇರಾನ್, ಅಫ್ಘಾನಿಸ್ತಾನ, ಯೆಮೆನ್, ಸೊಮಾಲಿಯಾ, ಇಥಿಯೋಪಿಯಾ, ಕಾಂಗೊ, ಲಿಬಿಯಾ, ಇಂಡೋನೇಷಿಯಾ, ವಿಯೆಟ್ನಾಂ, ಅರ್ಮೇನಿಯಾ, ಬೆಲರೂಸ್ ಮತ್ತು ವೆನಜುವೆಲಾ ದೇಶಗಳಿಗೂ ತನ್ನ ಪ್ರಜೆಗಳು ಪ್ರಯಾಣಿಸುವಂತಿಲ್ಲ ಎಂದು ಸೌದಿ ಸರ್ಕಾರ ಸ್ಪಷ್ಟಪಡಿಸಿದೆ.

ಸೌದಿ ಸರ್ಕಾರದ ಪಾಸ್​ಪೋರ್ಟ್​ ಇಲಾಖೆಯ ಪ್ರಧಾನ ನಿರ್ದೇಶಕರು ಈ ಆದೇಶದ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಮೇಲಿನ ದೇಶಗಳಿಗೆ ಸೌದಿ ಪ್ರಜೆಗಳು ತೆರಳುವಂತಿಲ್ಲ ಎಂದು ಈ ಆದೇಶ ಸ್ಪಷ್ಟಪಡಿಸುತ್ತದೆ. ಭಾರತೀಯರಿಗೆ ಸೌದಿ ಪ್ರವೇಶ ನಿರ್ಬಂಧವಿದೆಯೇ ಎನ್ನುವ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಉತ್ತರ ಕೊರಿಯಾ: ರಾಷ್ಟ್ರವ್ಯಾಪಿ ಲಾಕ್‌ಡೌನ್‌ಗೆ ಆದೇಶಿಸಿದ ಕಿಮ್ ಜಾಂಗ್

ಉತ್ತರ ಕೊರಿಯಾದಲ್ಲಿ (North Korea) ಮೊದಲ ಬಾರಿ ಕೊವಿಡ್-19 (Covid-19) ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ನಾಯಕ ಕಿಮ್ ಜಾಂಗ್ ಉನ್ (Kim Jong Un) ರಾಷ್ಟ್ರವ್ಯಾಪಿ ಲಾಕ್‌ಡೌನ್‌ಗೆ ಆದೇಶಿಸಿದ್ದಾರೆ. ಸ್ಟೆಲ್ತ್ ಒಮಿಕ್ರಾನ್ ಮ್ಯುಟೆಂಟ್ ವೈರಸ್ ನಿಂದಾಗಿ ಗಂಭೀರ ಪರಿಸ್ಥಿತಿ ಸೃಷ್ಟಿಸಲಾಗಿದೆ ಎಂದು ಉತ್ತರ ಕೊರಿಯಾದ ಅಧಿಕೃತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ ಹೇಳಿದೆ. ಗುರುವಾರ ಕಿಮ್ ಭಾಗವಹಿಸಿದ್ದ ಪಕ್ಷದ ಸಭೆಯಲ್ಲಿ ಅಧಿಕಾರಿಗಳು ದೇಶದ ರಾಷ್ಟ್ರೀಯ ಕ್ವಾರಂಟೈನ್ ಕ್ರಮಗಳನ್ನು ಗರಿಷ್ಠ ತುರ್ತುಸ್ಥಿತಿ ಎಂದು ಹೇಳಿದ್ದಾರೆ. ಕೆಸಿಎನ್ಎ ಪ್ರಕಾರ ವೈರಸ್ ಹರಡುವಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲು ಕಿಮ್ ದೇಶದಾದ್ಯಂತ ಎಲ್ಲಾ ನಗರಗಳು ಮತ್ತು ಕೌಂಟಿಗಳು ತಮ್ಮ ಪ್ರದೇಶಗಳನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಆದೇಶಿಸಿದರು.

ಪ್ಯೊಂಗ್ಯಾಂಗ್‌ನಲ್ಲಿ ಜ್ವರದಿಂದ ಬಳಲುತ್ತಿರುವ ರೋಗಿಗಳಿಂದ ಸಂಗ್ರಹಿಸಿದ ಮಾದರಿಗಳು ವೈರಸ್‌ನ ಹೆಚ್ಚು ಹರಡುವ ಒಮಿಕ್ರಾನ್ ರೂಪಾಂತರವನ್ನು ಹೊಂದಿದೆ ಎಂದು ಕೆಸಿಎನ್ಎ ಸುದ್ದಿ ಸಂಸ್ಥೆ ಹೇಳಿದೆ. ನಾಯಕ ಕಿಮ್ ಜಾಂಗ್ ಉನ್ ಸೇರಿದಂತೆ ದೇಶದ ಉನ್ನತ ಅಧಿಕಾರಿಗಳು ಈ ಬಗ್ಗೆ ಚರ್ಚಿಸಲು ಪೊಲಿಟ್‌ಬ್ಯೂರೊ ಸಭೆಯನ್ನು ನಡೆಸಿದ್ದು ಅವರು “ಗರಿಷ್ಠ ತುರ್ತು” ವೈರಸ್ ನಿಯಂತ್ರಣ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ಘೋಷಿಸಿದರು. ಕಡಿಮೆ ಅವಧಿಯಲ್ಲಿ ಮೂಲವನ್ನು ತೊಡೆದುಹಾಕುವುದು ಗುರಿಯಾಗಿದೆ” ಎಂದು ಕಿಮ್ ಸಭೆಯಲ್ಲಿ ಹೇಳಿದರು ಎಂದು ಕೆಸಿಎನ್ಎ ಹೇಳಿದೆ.

Published On - 10:59 am, Mon, 23 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ