AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಅರೇಬಿಯಾದಲ್ಲಿ ಮದುವೆಗೆ ಹೊಸ ನಿಯಮಗಳು; ವಿದೇಶಿ ಹುಡುಗಿ ಬೇಕು ಅಂದ್ರೆ ಇಷ್ಟೆಲ್ಲಾ ಕೆಲಸ ಮಾಡಬೇಕು

ಈಗಾಗಲೇ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ 5 ಲಕ್ಷ ಮಹಿಳೆಯರು ಇದ್ದಾರೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ ಎಂದೂ ಮಾಹಿತಿ ಲಭ್ಯವಾಗಿದೆ.

ಸೌದಿ ಅರೇಬಿಯಾದಲ್ಲಿ ಮದುವೆಗೆ ಹೊಸ ನಿಯಮಗಳು; ವಿದೇಶಿ ಹುಡುಗಿ ಬೇಕು ಅಂದ್ರೆ ಇಷ್ಟೆಲ್ಲಾ ಕೆಲಸ ಮಾಡಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 6:54 PM

Share

ರಿಯಾದ್: ಇಲ್ಲಿನ ಪುರುಷರು ಪಾಕಿಸ್ತಾನ, ಬಾಂಗ್ಲಾದೇಶ, ಚಡ್ ಹಾಗೂ ಮಯನ್ಮಾರ್​ನ ಮಹಿಳೆಯರನ್ನು ಮದುವೆ ಆಗಬಾರದು ಎಂದು ಸೌದಿ ಅರೇಬಿಯಾ ಆದೇಶಿಸಿದೆ. ಈ ನಾಲ್ಕು ದೇಶಗಳ ಹುಡುಗಿಯರನ್ನು ಸೌದಿ ಅರೇಬಿಯಾ ಹುಡುಗರು ಮದುವೆ ಆಗಬಾರದು ಎಂದು ತಿಳಿಸಿರುವ ಬಗ್ಗೆ ಡಾವ್ನ್ ಸುದ್ದಿಸಂಸ್ಥೆ ವರದಿ ಮಾಡಿದೆ. ಈಗಾಗಲೇ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ 5 ಲಕ್ಷ ಮಹಿಳೆಯರು ಇದ್ದಾರೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ ಎಂದೂ ಮಾಹಿತಿ ಲಭ್ಯವಾಗಿದೆ.

ಈ ನಿರ್ಬಂಧದಿಂದ ವಿದೇಶಿ ಹುಡುಗಿಯರನ್ನು ಮದುವೆ ಆಗಲು ಇಚ್ಛಿಸುವ ಸೌದಿ ಅರೇಬಿಯಾ ಹುಡುಗರಿಗೆ ಸಂಕಷ್ಟದ ಸ್ಥಿತಿ ಎದುರಾಗಿದೆ. ಸೌದಿ ಹುಡುಗರು ವಿದೇಶಿ ಹುಡುಗಿಯರೊಂದಿಗೆ ವಿವಾಹ ಸಂಬಂಧ ಬೆಳೆಸಬಾರದು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ವಿದೇಶದ ಹುಡುಗಿಯರನ್ನು ಮದುವೆ ಆಗಬೇಕಿದ್ದರೆ ವಿಶೇಷ ನಿಯಮಾವಳಿಗಳನ್ನು ಹಾಗೂ ಅನುಮತಿಯನ್ನು ಪಡೆಯಬೇಕು ಎಂಬ ಬಗ್ಗೆ ಡಾವ್ನ್ ವರದಿ ಮಾಡಿದೆ.

ಪಾಕಿಸ್ತಾನ, ಬಾಂಗ್ಲಾದೇಶ, ಚಡ್ ಮತ್ತು ಮಯನ್ಮಾರ್​ನ ಹುಡುಗಿಯರನ್ನು ಮದುವೆ ಆಗಲು ಇಚ್ಛಿಸುವ ಹುಡುಗರು ಮೊದಲು ಸರ್ಕಾರದ ಅನುಮತಿ ಪಡೆಯಬೇಕು. ಅಧಿಕೃತವಾಗಿ ವಿವಾಹ ಅರ್ಜಿಯನ್ನು ದಾಖಲಿಸಬೇಕು ಎಂದು ಮಕ್ಕಾ ಪೊಲೀಸ್ ನಿರ್ದೇಶಕ ಮೇಜರ್ ಜನರಲ್ ಅಸ್ಸಾಫ್ ಅಲ್-ಖುರೇಶಿ ತಿಳಿಸಿದ್ದಾರೆ.

ಜೊತೆಗೆ, ವಿಚ್ಛೇದನ ನೀಡಿರುವ ಪುರುಷರು ಆರು ತಿಂಗಳ ಒಳಗಾಗಿ ಮತ್ತೆ ಮದುವೆಗೆ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸುವ ಹುಡುಗರ ವಯೋಮಾನ 25 ದಾಟಿರಬೇಕು. ನಿಗದಿತ ದಾಖಲೆಗಳನ್ನು ಸ್ಥಳೀಯ ಜಿಲ್ಲಾ ಮೇಯರ್​ರ ಸಹಿಯೊಂದಿಗೆ ನೀಡಬೇಕು. ಫ್ಯಾಮಿಲಿ ಕಾರ್ಡ್​ನ್ನು ಕೂಡ ದಾಖಲೆಯಾಗಿ ಕೊಡಬೇಕು. ಅರ್ಜಿದಾರ ಈಗಾಗಲೇ ಮದುವೆ ಆಗಿದ್ದರೆ, ಆತನ ಮಡದಿ ಅನಾರೋಗ್ಯದಿಂದ ಇದ್ದಾಳೆ ಅಥವಾ ಬಂಜೆ ಎಂದು ಆಸ್ಪತ್ರೆಯಿಂದ ವರದಿ ಸಲ್ಲಿಸಬೇಕು ಎಂದೂ ಖುರೇಶಿ ಹೇಳಿದ್ದಾರೆ.

ಇದನ್ನೂ ಓದಿ: ಸೌದಿ ಅರೇಬಿಯಾಕ್ಕೆ ಸಡ್ಡು ಹೊಡೆದ ಭಾರತ, ಮೇ ತಿಂಗಳಿಂದ ತೈಲ ಆಮದು ಶೇ 25ರಷ್ಟು ಕಡಿತಕ್ಕೆ ಯೋಜನೆ

ಇದನ್ನೂ ಓದಿ: ಅಂಕಣಕಾರ ಖಶೋಗ್ಗಿ ಹತ್ಯೆಯಲ್ಲಿ ಸೌದಿ ರಾಜಕುಮಾರನ ಪಾತ್ರ; ವ್ಯಾಪಕ ಖಂಡನೆ

Published On - 9:07 pm, Sun, 21 March 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು