AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಅರೇಬಿಯಾದಲ್ಲಿ ಮದುವೆಗೆ ಹೊಸ ನಿಯಮಗಳು; ವಿದೇಶಿ ಹುಡುಗಿ ಬೇಕು ಅಂದ್ರೆ ಇಷ್ಟೆಲ್ಲಾ ಕೆಲಸ ಮಾಡಬೇಕು

ಈಗಾಗಲೇ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ 5 ಲಕ್ಷ ಮಹಿಳೆಯರು ಇದ್ದಾರೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ ಎಂದೂ ಮಾಹಿತಿ ಲಭ್ಯವಾಗಿದೆ.

ಸೌದಿ ಅರೇಬಿಯಾದಲ್ಲಿ ಮದುವೆಗೆ ಹೊಸ ನಿಯಮಗಳು; ವಿದೇಶಿ ಹುಡುಗಿ ಬೇಕು ಅಂದ್ರೆ ಇಷ್ಟೆಲ್ಲಾ ಕೆಲಸ ಮಾಡಬೇಕು
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 6:54 PM

Share

ರಿಯಾದ್: ಇಲ್ಲಿನ ಪುರುಷರು ಪಾಕಿಸ್ತಾನ, ಬಾಂಗ್ಲಾದೇಶ, ಚಡ್ ಹಾಗೂ ಮಯನ್ಮಾರ್​ನ ಮಹಿಳೆಯರನ್ನು ಮದುವೆ ಆಗಬಾರದು ಎಂದು ಸೌದಿ ಅರೇಬಿಯಾ ಆದೇಶಿಸಿದೆ. ಈ ನಾಲ್ಕು ದೇಶಗಳ ಹುಡುಗಿಯರನ್ನು ಸೌದಿ ಅರೇಬಿಯಾ ಹುಡುಗರು ಮದುವೆ ಆಗಬಾರದು ಎಂದು ತಿಳಿಸಿರುವ ಬಗ್ಗೆ ಡಾವ್ನ್ ಸುದ್ದಿಸಂಸ್ಥೆ ವರದಿ ಮಾಡಿದೆ. ಈಗಾಗಲೇ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ 5 ಲಕ್ಷ ಮಹಿಳೆಯರು ಇದ್ದಾರೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ ಎಂದೂ ಮಾಹಿತಿ ಲಭ್ಯವಾಗಿದೆ.

ಈ ನಿರ್ಬಂಧದಿಂದ ವಿದೇಶಿ ಹುಡುಗಿಯರನ್ನು ಮದುವೆ ಆಗಲು ಇಚ್ಛಿಸುವ ಸೌದಿ ಅರೇಬಿಯಾ ಹುಡುಗರಿಗೆ ಸಂಕಷ್ಟದ ಸ್ಥಿತಿ ಎದುರಾಗಿದೆ. ಸೌದಿ ಹುಡುಗರು ವಿದೇಶಿ ಹುಡುಗಿಯರೊಂದಿಗೆ ವಿವಾಹ ಸಂಬಂಧ ಬೆಳೆಸಬಾರದು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ವಿದೇಶದ ಹುಡುಗಿಯರನ್ನು ಮದುವೆ ಆಗಬೇಕಿದ್ದರೆ ವಿಶೇಷ ನಿಯಮಾವಳಿಗಳನ್ನು ಹಾಗೂ ಅನುಮತಿಯನ್ನು ಪಡೆಯಬೇಕು ಎಂಬ ಬಗ್ಗೆ ಡಾವ್ನ್ ವರದಿ ಮಾಡಿದೆ.

ಪಾಕಿಸ್ತಾನ, ಬಾಂಗ್ಲಾದೇಶ, ಚಡ್ ಮತ್ತು ಮಯನ್ಮಾರ್​ನ ಹುಡುಗಿಯರನ್ನು ಮದುವೆ ಆಗಲು ಇಚ್ಛಿಸುವ ಹುಡುಗರು ಮೊದಲು ಸರ್ಕಾರದ ಅನುಮತಿ ಪಡೆಯಬೇಕು. ಅಧಿಕೃತವಾಗಿ ವಿವಾಹ ಅರ್ಜಿಯನ್ನು ದಾಖಲಿಸಬೇಕು ಎಂದು ಮಕ್ಕಾ ಪೊಲೀಸ್ ನಿರ್ದೇಶಕ ಮೇಜರ್ ಜನರಲ್ ಅಸ್ಸಾಫ್ ಅಲ್-ಖುರೇಶಿ ತಿಳಿಸಿದ್ದಾರೆ.

ಜೊತೆಗೆ, ವಿಚ್ಛೇದನ ನೀಡಿರುವ ಪುರುಷರು ಆರು ತಿಂಗಳ ಒಳಗಾಗಿ ಮತ್ತೆ ಮದುವೆಗೆ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸುವ ಹುಡುಗರ ವಯೋಮಾನ 25 ದಾಟಿರಬೇಕು. ನಿಗದಿತ ದಾಖಲೆಗಳನ್ನು ಸ್ಥಳೀಯ ಜಿಲ್ಲಾ ಮೇಯರ್​ರ ಸಹಿಯೊಂದಿಗೆ ನೀಡಬೇಕು. ಫ್ಯಾಮಿಲಿ ಕಾರ್ಡ್​ನ್ನು ಕೂಡ ದಾಖಲೆಯಾಗಿ ಕೊಡಬೇಕು. ಅರ್ಜಿದಾರ ಈಗಾಗಲೇ ಮದುವೆ ಆಗಿದ್ದರೆ, ಆತನ ಮಡದಿ ಅನಾರೋಗ್ಯದಿಂದ ಇದ್ದಾಳೆ ಅಥವಾ ಬಂಜೆ ಎಂದು ಆಸ್ಪತ್ರೆಯಿಂದ ವರದಿ ಸಲ್ಲಿಸಬೇಕು ಎಂದೂ ಖುರೇಶಿ ಹೇಳಿದ್ದಾರೆ.

ಇದನ್ನೂ ಓದಿ: ಸೌದಿ ಅರೇಬಿಯಾಕ್ಕೆ ಸಡ್ಡು ಹೊಡೆದ ಭಾರತ, ಮೇ ತಿಂಗಳಿಂದ ತೈಲ ಆಮದು ಶೇ 25ರಷ್ಟು ಕಡಿತಕ್ಕೆ ಯೋಜನೆ

ಇದನ್ನೂ ಓದಿ: ಅಂಕಣಕಾರ ಖಶೋಗ್ಗಿ ಹತ್ಯೆಯಲ್ಲಿ ಸೌದಿ ರಾಜಕುಮಾರನ ಪಾತ್ರ; ವ್ಯಾಪಕ ಖಂಡನೆ

Published On - 9:07 pm, Sun, 21 March 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ