AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಅರೇಬಿಯಾದಲ್ಲಿ ಮದುವೆಗೆ ಹೊಸ ನಿಯಮಗಳು; ವಿದೇಶಿ ಹುಡುಗಿ ಬೇಕು ಅಂದ್ರೆ ಇಷ್ಟೆಲ್ಲಾ ಕೆಲಸ ಮಾಡಬೇಕು

ಈಗಾಗಲೇ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ 5 ಲಕ್ಷ ಮಹಿಳೆಯರು ಇದ್ದಾರೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ ಎಂದೂ ಮಾಹಿತಿ ಲಭ್ಯವಾಗಿದೆ.

ಸೌದಿ ಅರೇಬಿಯಾದಲ್ಲಿ ಮದುವೆಗೆ ಹೊಸ ನಿಯಮಗಳು; ವಿದೇಶಿ ಹುಡುಗಿ ಬೇಕು ಅಂದ್ರೆ ಇಷ್ಟೆಲ್ಲಾ ಕೆಲಸ ಮಾಡಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 6:54 PM

Share

ರಿಯಾದ್: ಇಲ್ಲಿನ ಪುರುಷರು ಪಾಕಿಸ್ತಾನ, ಬಾಂಗ್ಲಾದೇಶ, ಚಡ್ ಹಾಗೂ ಮಯನ್ಮಾರ್​ನ ಮಹಿಳೆಯರನ್ನು ಮದುವೆ ಆಗಬಾರದು ಎಂದು ಸೌದಿ ಅರೇಬಿಯಾ ಆದೇಶಿಸಿದೆ. ಈ ನಾಲ್ಕು ದೇಶಗಳ ಹುಡುಗಿಯರನ್ನು ಸೌದಿ ಅರೇಬಿಯಾ ಹುಡುಗರು ಮದುವೆ ಆಗಬಾರದು ಎಂದು ತಿಳಿಸಿರುವ ಬಗ್ಗೆ ಡಾವ್ನ್ ಸುದ್ದಿಸಂಸ್ಥೆ ವರದಿ ಮಾಡಿದೆ. ಈಗಾಗಲೇ ಸೌದಿ ಅರೇಬಿಯಾದಲ್ಲಿ ಈ ನಾಲ್ಕು ದೇಶಗಳ 5 ಲಕ್ಷ ಮಹಿಳೆಯರು ಇದ್ದಾರೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ ಎಂದೂ ಮಾಹಿತಿ ಲಭ್ಯವಾಗಿದೆ.

ಈ ನಿರ್ಬಂಧದಿಂದ ವಿದೇಶಿ ಹುಡುಗಿಯರನ್ನು ಮದುವೆ ಆಗಲು ಇಚ್ಛಿಸುವ ಸೌದಿ ಅರೇಬಿಯಾ ಹುಡುಗರಿಗೆ ಸಂಕಷ್ಟದ ಸ್ಥಿತಿ ಎದುರಾಗಿದೆ. ಸೌದಿ ಹುಡುಗರು ವಿದೇಶಿ ಹುಡುಗಿಯರೊಂದಿಗೆ ವಿವಾಹ ಸಂಬಂಧ ಬೆಳೆಸಬಾರದು ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ವಿದೇಶದ ಹುಡುಗಿಯರನ್ನು ಮದುವೆ ಆಗಬೇಕಿದ್ದರೆ ವಿಶೇಷ ನಿಯಮಾವಳಿಗಳನ್ನು ಹಾಗೂ ಅನುಮತಿಯನ್ನು ಪಡೆಯಬೇಕು ಎಂಬ ಬಗ್ಗೆ ಡಾವ್ನ್ ವರದಿ ಮಾಡಿದೆ.

ಪಾಕಿಸ್ತಾನ, ಬಾಂಗ್ಲಾದೇಶ, ಚಡ್ ಮತ್ತು ಮಯನ್ಮಾರ್​ನ ಹುಡುಗಿಯರನ್ನು ಮದುವೆ ಆಗಲು ಇಚ್ಛಿಸುವ ಹುಡುಗರು ಮೊದಲು ಸರ್ಕಾರದ ಅನುಮತಿ ಪಡೆಯಬೇಕು. ಅಧಿಕೃತವಾಗಿ ವಿವಾಹ ಅರ್ಜಿಯನ್ನು ದಾಖಲಿಸಬೇಕು ಎಂದು ಮಕ್ಕಾ ಪೊಲೀಸ್ ನಿರ್ದೇಶಕ ಮೇಜರ್ ಜನರಲ್ ಅಸ್ಸಾಫ್ ಅಲ್-ಖುರೇಶಿ ತಿಳಿಸಿದ್ದಾರೆ.

ಜೊತೆಗೆ, ವಿಚ್ಛೇದನ ನೀಡಿರುವ ಪುರುಷರು ಆರು ತಿಂಗಳ ಒಳಗಾಗಿ ಮತ್ತೆ ಮದುವೆಗೆ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸುವ ಹುಡುಗರ ವಯೋಮಾನ 25 ದಾಟಿರಬೇಕು. ನಿಗದಿತ ದಾಖಲೆಗಳನ್ನು ಸ್ಥಳೀಯ ಜಿಲ್ಲಾ ಮೇಯರ್​ರ ಸಹಿಯೊಂದಿಗೆ ನೀಡಬೇಕು. ಫ್ಯಾಮಿಲಿ ಕಾರ್ಡ್​ನ್ನು ಕೂಡ ದಾಖಲೆಯಾಗಿ ಕೊಡಬೇಕು. ಅರ್ಜಿದಾರ ಈಗಾಗಲೇ ಮದುವೆ ಆಗಿದ್ದರೆ, ಆತನ ಮಡದಿ ಅನಾರೋಗ್ಯದಿಂದ ಇದ್ದಾಳೆ ಅಥವಾ ಬಂಜೆ ಎಂದು ಆಸ್ಪತ್ರೆಯಿಂದ ವರದಿ ಸಲ್ಲಿಸಬೇಕು ಎಂದೂ ಖುರೇಶಿ ಹೇಳಿದ್ದಾರೆ.

ಇದನ್ನೂ ಓದಿ: ಸೌದಿ ಅರೇಬಿಯಾಕ್ಕೆ ಸಡ್ಡು ಹೊಡೆದ ಭಾರತ, ಮೇ ತಿಂಗಳಿಂದ ತೈಲ ಆಮದು ಶೇ 25ರಷ್ಟು ಕಡಿತಕ್ಕೆ ಯೋಜನೆ

ಇದನ್ನೂ ಓದಿ: ಅಂಕಣಕಾರ ಖಶೋಗ್ಗಿ ಹತ್ಯೆಯಲ್ಲಿ ಸೌದಿ ರಾಜಕುಮಾರನ ಪಾತ್ರ; ವ್ಯಾಪಕ ಖಂಡನೆ

Published On - 9:07 pm, Sun, 21 March 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು