AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಜ್ ಯಾತ್ರೆ ಈ ಬಾರಿ ಹೇಗೆ? ಎಷ್ಟು ಮಂದಿಗೆ ಅವಕಾಶ? ನಿಯಮಗಳು ಕಠಿಣ..

ರಿಯಾದ್: ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಇಡೀ ವಿಶ್ವ ತನ್ನ ಯುದ್ಧವನ್ನು ಮುಂದುವರಿಸಿದೆ. ಜೊತೆಗೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ನಡೆಯುವ ಹಜ್ ಯಾತ್ರೆಗೆ ವಿವಿಧ ರಾಷ್ಟ್ರಗಳಿಂದ ಬಂದ 1000 ಯಾತ್ರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ ಎಂದು ಸೌದಿ ಅರೇಬಿಯಾ ಪ್ರಕಟಿಸಿದೆ. ಕಳೆದ ಬಾರಿ 25 ಲಕ್ಷ ಮಂದಿ, ಈ ಬಾರಿ ಸಾವಿರ ಮಂದಿಯಷ್ಟೇ! ಆಧುನಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾ ಹೊರಗಿನ ಯಾತ್ರಿಕರನ್ನು ಹೊರಗಿಡುವ ನಿರ್ಧಾರ ತೆಗೆದುಕೊಂಡಿರುವುದು. ಈ ನಿರ್ಧಾರದಿಂದ ವಿಶ್ವಾದ್ಯಂತ ನೆಲೆಸಿರುವ […]

ಹಜ್ ಯಾತ್ರೆ ಈ ಬಾರಿ ಹೇಗೆ? ಎಷ್ಟು ಮಂದಿಗೆ ಅವಕಾಶ? ನಿಯಮಗಳು ಕಠಿಣ..
ಆಯೇಷಾ ಬಾನು
| Edited By: |

Updated on: Jul 21, 2020 | 10:18 AM

Share

ರಿಯಾದ್: ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಇಡೀ ವಿಶ್ವ ತನ್ನ ಯುದ್ಧವನ್ನು ಮುಂದುವರಿಸಿದೆ. ಜೊತೆಗೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ನಡೆಯುವ ಹಜ್ ಯಾತ್ರೆಗೆ ವಿವಿಧ ರಾಷ್ಟ್ರಗಳಿಂದ ಬಂದ 1000 ಯಾತ್ರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ ಎಂದು ಸೌದಿ ಅರೇಬಿಯಾ ಪ್ರಕಟಿಸಿದೆ.

ಕಳೆದ ಬಾರಿ 25 ಲಕ್ಷ ಮಂದಿ, ಈ ಬಾರಿ ಸಾವಿರ ಮಂದಿಯಷ್ಟೇ! ಆಧುನಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾ ಹೊರಗಿನ ಯಾತ್ರಿಕರನ್ನು ಹೊರಗಿಡುವ ನಿರ್ಧಾರ ತೆಗೆದುಕೊಂಡಿರುವುದು. ಈ ನಿರ್ಧಾರದಿಂದ ವಿಶ್ವಾದ್ಯಂತ ನೆಲೆಸಿರುವ ಮುಸ್ಲಿಮರಲ್ಲಿ ನಿರಾಶೆಯನ್ನು ಹುಟ್ಟುಹಾಕಿದೆ. ಆರೋಗ್ಯದ ಅಪಾಯಗಳಿಂದಾಗಿ ಇದು ಅಗತ್ಯವೆಂದು ಹಲವರು ಒಪ್ಪಿಕೊಂಡಿದ್ದಾರೆ ಎಂದು ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ. ಕಳೆದ ವರ್ಷ ಐದು ದಿನಗಳ ಆಚರಣೆಯಲ್ಲಿ ಕಡಿಮೆಯೆಂದ್ರೂ 2.5 ಮಿಲಿಯನ್ ಜನರು ಭಾಗಿಯಾಗಿದ್ರು.

ಅಲ್ಲದೆ, ಜುಲೈ 31 ರಿಂದ ಪ್ರಾರಂಭವಾಗಲಿರುವ ಈ ವರ್ಷದ ಹಜ್‌ಗೆ ಆಯ್ಕೆ ಪ್ರಕ್ರಿಯೆ ಏನೆಂಬುದನ್ನು ಸೌದಿ ಅರೇಬಿಯಾ ಇನ್ನು ಪ್ರಕಟಿಸಿಲ್ಲ. ಈ ಬಾರಿ ಯಾತ್ರಿಕರ ಸಂಖ್ಯೆ ಸುಮಾರು 1,000 ಆಗಿರಬಹುದು ಅಥವಾ ಅದಕ್ಕಿಂತ ಕಡಿಮೆ ಆಗಿರಬಹುದು ಎಂದು ಹಜ್ ಸಚಿವ ಮೊಹಮ್ಮದ್ ಬೆಂಟನ್ ತಿಳಿಸಿದ್ದಾರೆ.

ನಿಯಮಗಳು ಕಠಿಣ.. ಈ ಬಾರಿ ತೀರ್ಥಯಾತ್ರೆಗೆ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾತ್ರ ಸೀಮಿತವಾಗಿರುತ್ತದೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅವಕಾಶವಿರುವುದಿಲ್ಲ. ಇದಲ್ಲದೆ, ಪವಿತ್ರ ನಗರವಾದ ಮೆಕ್ಕಾಗೆ ಬರುವ ಮೊದಲು ಯಾತ್ರಿಕರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಮತ್ತು ಆಚರಣೆಯ ನಂತರ ಮನೆಯಲ್ಲಿ ಕ್ಯಾರೆಂಟೈನ್ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ